<p><strong>ಬೆಂಗಳೂರು:</strong> ಬೆಂಗಳೂರಿನ ಸಂಚಾರ ಠಾಣೆಯೊಂದರ ಪೊಲೀಸ್ ಕಾನ್ಸ್ಟೆಬಲ್ ಒಬ್ಬರಿಗೂಕೊರೊನಾ ಸೋಂಕು ತಗುಲಿದ್ದು, ಪೊಲೀಸ್ ಇಲಾಖೆಯಲ್ಲಿ ಆತಂಕ ಮೂಡಿಸಿದೆ.</p>.<p>ರಾಮಕೃಷ್ಣ ಹೆಗಡೆ ನಗರದ ನಿವಾಸಿಯಾಗಿರುವ ಕಾನ್ಸ್ಟೆಬಲ್, ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ಬಾರಿ ಫ್ರೇಜರ್ ಟೌನ್ ಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕೊರೊನಾ ಕರ್ತವ್ಯದಿಂದಾಗಿ ಕಳೆದ ತಿಂಗಳೇ ಕುಟುಂಬದವರನ್ನು ಊರಿಗೆ ಕಳುಹಿಸಿದ್ದ ಕಾನ್ಸ್ಟೆಬಲ್ ಮನೆಯಲ್ಲಿಒಬ್ಬರೇ ವಾಸವಿದ್ದರು.</p>.<p>ಇದೇ 20ರಂದು ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಅವರು ಒಳಪಟ್ಟಿದ್ದರು. ಗುರುವಾರ ರಾತ್ರಿ ವರದಿ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅವರ ಜೊತೆ ಸಂಪರ್ಕದಲ್ಲಿದ್ದ ಕೆಲವರನ್ನು ಕ್ವಾರಂಟೈನ್ ಮಾಡಲಾಗಿದೆ. ಇನ್ನು ಹಲವರ ಪತ್ತೆಗೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಕ್ರಮ ಕೈಗೊಂಡಿದೆ.</p>.<p>'ಕಾನ್ಸ್ಟೆಬಲ್ಗೆ ಕೊರೊನಾ ಸೋಂಕು ತಗುಲಿದ್ದಕ್ಕಾಗಿ ಠಾಣೆಯನ್ನು ಸ್ಯಾನಿಟೈಸ್ ಮಾಡಲು ಹಾಗೂ ಅವರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದವರ ಮಾಹಿತಿ ನೀಡಲು ಹೇಳಲಾಗಿದೆ' ಎಂದು ಸಂಚಾರ ವಿಭಾಗದ (ಪೂರ್ವ) ಡಿಸಿಪಿ ನಾರಾಯಣ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರಿನ ಸಂಚಾರ ಠಾಣೆಯೊಂದರ ಪೊಲೀಸ್ ಕಾನ್ಸ್ಟೆಬಲ್ ಒಬ್ಬರಿಗೂಕೊರೊನಾ ಸೋಂಕು ತಗುಲಿದ್ದು, ಪೊಲೀಸ್ ಇಲಾಖೆಯಲ್ಲಿ ಆತಂಕ ಮೂಡಿಸಿದೆ.</p>.<p>ರಾಮಕೃಷ್ಣ ಹೆಗಡೆ ನಗರದ ನಿವಾಸಿಯಾಗಿರುವ ಕಾನ್ಸ್ಟೆಬಲ್, ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ಬಾರಿ ಫ್ರೇಜರ್ ಟೌನ್ ಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕೊರೊನಾ ಕರ್ತವ್ಯದಿಂದಾಗಿ ಕಳೆದ ತಿಂಗಳೇ ಕುಟುಂಬದವರನ್ನು ಊರಿಗೆ ಕಳುಹಿಸಿದ್ದ ಕಾನ್ಸ್ಟೆಬಲ್ ಮನೆಯಲ್ಲಿಒಬ್ಬರೇ ವಾಸವಿದ್ದರು.</p>.<p>ಇದೇ 20ರಂದು ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಅವರು ಒಳಪಟ್ಟಿದ್ದರು. ಗುರುವಾರ ರಾತ್ರಿ ವರದಿ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅವರ ಜೊತೆ ಸಂಪರ್ಕದಲ್ಲಿದ್ದ ಕೆಲವರನ್ನು ಕ್ವಾರಂಟೈನ್ ಮಾಡಲಾಗಿದೆ. ಇನ್ನು ಹಲವರ ಪತ್ತೆಗೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಕ್ರಮ ಕೈಗೊಂಡಿದೆ.</p>.<p>'ಕಾನ್ಸ್ಟೆಬಲ್ಗೆ ಕೊರೊನಾ ಸೋಂಕು ತಗುಲಿದ್ದಕ್ಕಾಗಿ ಠಾಣೆಯನ್ನು ಸ್ಯಾನಿಟೈಸ್ ಮಾಡಲು ಹಾಗೂ ಅವರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದವರ ಮಾಹಿತಿ ನೀಡಲು ಹೇಳಲಾಗಿದೆ' ಎಂದು ಸಂಚಾರ ವಿಭಾಗದ (ಪೂರ್ವ) ಡಿಸಿಪಿ ನಾರಾಯಣ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>