ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಸಂಚಾರ ಕಾನ್‌ಸ್ಟೆಬಲ್‌ಗೂ ಕೊರೊನಾ ಸೋಂಕು

Last Updated 22 ಮೇ 2020, 7:41 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಸಂಚಾರ ಠಾಣೆಯೊಂದರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರಿಗೂಕೊರೊನಾ ಸೋಂಕು ತಗುಲಿದ್ದು, ಪೊಲೀಸ್ ಇಲಾಖೆಯಲ್ಲಿ ಆತಂಕ ಮೂಡಿಸಿದೆ.

ರಾಮಕೃಷ್ಣ ಹೆಗಡೆ ನಗರದ ನಿವಾಸಿಯಾಗಿರುವ ಕಾನ್‌ಸ್ಟೆಬಲ್, ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ಬಾರಿ ಫ್ರೇಜರ್ ಟೌನ್‌ ಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕೊರೊನಾ ಕರ್ತವ್ಯದಿಂದಾಗಿ ಕಳೆದ ತಿಂಗಳೇ ಕುಟುಂಬದವರನ್ನು ಊರಿಗೆ ಕಳುಹಿಸಿದ್ದ ಕಾನ್‌ಸ್ಟೆಬಲ್ ಮನೆಯಲ್ಲಿಒಬ್ಬರೇ ವಾಸವಿದ್ದರು.

ಇದೇ 20ರಂದು ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಅವರು ಒಳಪಟ್ಟಿದ್ದರು. ಗುರುವಾರ ರಾತ್ರಿ ವರದಿ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಜೊತೆ ಸಂಪರ್ಕದಲ್ಲಿದ್ದ ಕೆಲವರನ್ನು ಕ್ವಾರಂಟೈನ್ ಮಾಡಲಾಗಿದೆ. ಇನ್ನು ಹಲವರ ಪತ್ತೆಗೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಕ್ರಮ ಕೈಗೊಂಡಿದೆ.

'ಕಾನ್‌ಸ್ಟೆಬಲ್‌ಗೆ ಕೊರೊನಾ ಸೋಂಕು ತಗುಲಿದ್ದಕ್ಕಾಗಿ ಠಾಣೆಯನ್ನು ಸ್ಯಾನಿಟೈಸ್ ಮಾಡಲು ಹಾಗೂ ಅವರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದವರ ಮಾಹಿತಿ ನೀಡಲು ಹೇಳಲಾಗಿದೆ' ಎಂದು ಸಂಚಾರ ವಿಭಾಗದ (ಪೂರ್ವ) ಡಿಸಿಪಿ ನಾರಾಯಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT