ಬೆಂಗಳೂರು: ಬಿಬಿಎಂಪಿಯ ಪೌರಕಾರ್ಮಿಕರೊಬ್ಬರು ಬುಧವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೊರೊನಾ ಸೋಂಕಿತರಾಗಿದ್ದ ರಂಗನಾಥ್ (44) ಬುಧವಾರ ಮಧ್ಯಾಹ್ನವಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿನ ಸ್ನೇಹಿತನ ಮನೆಯಲ್ಲಿ ಸಂಜೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು, ಈ ವಿಷಯವನ್ನು ಕುಟುಂಬ ಸದಸ್ಯರಿಗೆ ತಿಳಿಸಿರಲಿಲ್ಲ. ಕೊರೊನಾ ಪಾಸಿಟಿವ್ ವರದಿ ಬಂದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು. ಸೋಂಕಿನ ಯಾವುದೇ ಲಕ್ಷಣವಿಲ್ಲ, ಗುಣಮುಖರಾಗಿದ್ದೀರಿ, ಮನೆಗೆ ಹೋಗಬಹುದು ಎಂದು ವೈದ್ಯರು ಹೇಳಿದ ನಂತರವೂ ಅವರು ಮನೆಗೆ ತೆರಳಲು ಒಪ್ಪಿರಲಿಲ್ಲ. ಕೆಲವು ದಿನ ಆಸ್ಪತ್ರೆಯಲ್ಲಿಯೇ ಇಟ್ಟುಕೊಳ್ಳುವಂತೆ ವೈದ್ಯರಲ್ಲಿ ಮನವಿ ಮಾಡಿದ್ದರು. ಆದರೆ, ಗುಣಮುಖರಾದ ನಂತರ, ಬುಧವಾರ ಆಸ್ಪತ್ರೆಯಿಂದ ಅವರನ್ನು ಕಳಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.