ಬೆಂಗಳೂರು: ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಣ್ಣ (61) ಎಂಬುವರು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
'ಅಂಜನಾನಗರದ ರಾಮಣ್ಣ, ವಿಜಯನಗರದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಶುಕ್ರವಾರ ತಡರಾತ್ರಿ ಆಸ್ಪತ್ರೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ತಿಳಿಸಿದರು.
'ಕೊರೊನಾ ಸೋಂಕು ತಗುಲಿದ್ದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮಗ ನೀಡಿರುವ ದೂರು ಆಧರಿಸಿ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.