ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆ, ಎಂ.ಎಸ್. ರಾಮಯ್ಯ, ಬೌರಿಂಗ್ ಆಸ್ಪತ್ರೆ, ಪೋರ್ಟಿಸ್, ಸಪ್ತಗಿರಿ, ಶ್ರೀ ವೆಂಕಟೇಶ್ವರ ಆಸ್ಪತ್ರೆ, ಸುಹಾಸ್ ಚಾರಿಟಬಲ್ ಆಸ್ಪತ್ರೆ, ರಾಜೀವ್ ಗಾಂಧಿ ಎದೆ ಆಸ್ಪತ್ರೆ, ವಿಕ್ರಂ ಹೀಗೆ 12 ಆಸ್ಪತ್ರೆಗಳನ್ನು ಸುತ್ತಾಡಿದರೂ ಪ್ರಯೋಜನವಾಗಲಿಲ್ಲ. ಎಲ್ಲ ಆಸ್ಪತ್ರೆಗಳೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೊನೆಗೆ ಕುಟುಂಬದವರು ಶಾಸಕಿ ಸೌಮ್ಯಾ ರೆಡ್ಡಿ ಅವರಿಗೆ ಕರೆ ಮಾಡಿ ಚಿಕಿತ್ಸೆ ದೊರೆಯದಿರುವ ವಿಚಾರ ತಿಳಿಸಿದ್ದಾರೆ.