<p><strong>ಬೆಂಗಳೂರು:</strong> ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಬಾಣಂತಿಯೊಬ್ಬರ ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಈ ಮಹಿಳೆಯ ಹತ್ತು ದಿನಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು.</p>.<p>ಸುಂಕದಕಟ್ಟೆ ನಿವಾಸಿಯಾಗಿದ್ದ 21 ವರ್ಷದ ಮಹಿಳೆ, ಸುಂಕದಕಟ್ಟೆಯಲ್ಲಿನ ಖಾಸಗಿ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ಅದೇ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮನೀಡಿದ್ದರು. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದರಿಂದ ಮನೆಗೆ ತೆರಳಿದ್ದರು.</p>.<p>ಮನೆಗೆ ತೆರಳಿದ ನಂತರ, ಮಹಿಳೆಗೆ ಉಸಿರಾಟದ ಸಮಸ್ಯೆ ಜಾಸ್ತಿಯಾಗಿದೆ. ಕೂಡಲೇ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ನಾಲ್ಕೈದು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದರೂ ಬಾಣಂತಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿಲ್ಲ.</p>.<p>ಎಲ್ಲ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲ ಎಂದು ಹೇಳಿ ಕಳಿಸಿದರು. ಕೊನೆಗೆ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ ಕೆಲವೇ ನಿಮಿಷಗಳಲ್ಲಿ ಮಹಿಳೆ ಸಾವಿಗೀಡಾದರು. ಈ ಸಾವಿಗೆ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮಹಿಳೆಯ ಕುಟುಂಬದವರು ದೂರಿದ್ದಾರೆ. </p>.<p class="Subhead">ಮಗು ಆಸ್ಪತ್ರೆಯಲ್ಲಿ, ತಾಯಿ ಮನೆಯಲ್ಲಿ:</p>.<p>ಕುಟುಂಬದಲ್ಲಿ ಗಂಡ ಮತ್ತು ಮಗುವಿಗೆ ಸೋಂಕು ತಗುಲಿದ್ದು, ಅವರಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ತಾಯಿ ಮನೆಯಲ್ಲಿದ್ದಾರೆ. ಒಂದೂವರೆ ವರ್ಷದ ಮಗುವನ್ನು ಬಿಟ್ಟಿರಲಾರದೆ ತಾಯಿ ಕಣ್ಣೀರಿಡುತ್ತಿದ್ದಾರೆ.</p>.<p>ನಗರದ ವೆಂಕಟೇಶ್ವರನಗರದಲ್ಲಿ ವಾಸವಾಗಿರುವ ಕುಟುಂಬದಲ್ಲಿ ತಾಯಿಯನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಮಗು ಮತ್ತು ಪತಿಯನ್ನು ಬಿಬಿಎಂಪಿ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.</p>.<p>ಆಸ್ಪತ್ರೆಯಲ್ಲಿ ಮಗುವಿನ ಜೊತೆಗೆ ಇರಲು ತಾಯಿ ಅವಕಾಶ ಕೇಳಿದ್ದಾರೆ. ಆದರೆ, ಸಿಬ್ಬಂದಿ ಇದಕ್ಕೆ ಅವಕಾಶ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಬಾಣಂತಿಯೊಬ್ಬರ ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಈ ಮಹಿಳೆಯ ಹತ್ತು ದಿನಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು.</p>.<p>ಸುಂಕದಕಟ್ಟೆ ನಿವಾಸಿಯಾಗಿದ್ದ 21 ವರ್ಷದ ಮಹಿಳೆ, ಸುಂಕದಕಟ್ಟೆಯಲ್ಲಿನ ಖಾಸಗಿ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ಅದೇ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮನೀಡಿದ್ದರು. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದರಿಂದ ಮನೆಗೆ ತೆರಳಿದ್ದರು.</p>.<p>ಮನೆಗೆ ತೆರಳಿದ ನಂತರ, ಮಹಿಳೆಗೆ ಉಸಿರಾಟದ ಸಮಸ್ಯೆ ಜಾಸ್ತಿಯಾಗಿದೆ. ಕೂಡಲೇ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ನಾಲ್ಕೈದು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದರೂ ಬಾಣಂತಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿಲ್ಲ.</p>.<p>ಎಲ್ಲ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲ ಎಂದು ಹೇಳಿ ಕಳಿಸಿದರು. ಕೊನೆಗೆ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ ಕೆಲವೇ ನಿಮಿಷಗಳಲ್ಲಿ ಮಹಿಳೆ ಸಾವಿಗೀಡಾದರು. ಈ ಸಾವಿಗೆ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮಹಿಳೆಯ ಕುಟುಂಬದವರು ದೂರಿದ್ದಾರೆ. </p>.<p class="Subhead">ಮಗು ಆಸ್ಪತ್ರೆಯಲ್ಲಿ, ತಾಯಿ ಮನೆಯಲ್ಲಿ:</p>.<p>ಕುಟುಂಬದಲ್ಲಿ ಗಂಡ ಮತ್ತು ಮಗುವಿಗೆ ಸೋಂಕು ತಗುಲಿದ್ದು, ಅವರಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ತಾಯಿ ಮನೆಯಲ್ಲಿದ್ದಾರೆ. ಒಂದೂವರೆ ವರ್ಷದ ಮಗುವನ್ನು ಬಿಟ್ಟಿರಲಾರದೆ ತಾಯಿ ಕಣ್ಣೀರಿಡುತ್ತಿದ್ದಾರೆ.</p>.<p>ನಗರದ ವೆಂಕಟೇಶ್ವರನಗರದಲ್ಲಿ ವಾಸವಾಗಿರುವ ಕುಟುಂಬದಲ್ಲಿ ತಾಯಿಯನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಮಗು ಮತ್ತು ಪತಿಯನ್ನು ಬಿಬಿಎಂಪಿ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.</p>.<p>ಆಸ್ಪತ್ರೆಯಲ್ಲಿ ಮಗುವಿನ ಜೊತೆಗೆ ಇರಲು ತಾಯಿ ಅವಕಾಶ ಕೇಳಿದ್ದಾರೆ. ಆದರೆ, ಸಿಬ್ಬಂದಿ ಇದಕ್ಕೆ ಅವಕಾಶ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>