ಪರಶುರಾಂಪುರ:ವೇದಾವತಿ ನದಿಗೆ ನೀರು ಹರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಚಳ್ಳಕೆರೆ ಹಾಗೂ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನರು ಆರೋಗ್ಯ ಸಚಿವ ಬಿ.ಶ್ರೀರಾಮುಲು, ಶಾಸಕ ತಿಪ್ಪಾರೆಡ್ಡಿ, ಸಂಸದ ನಾರಾಯಣ ಸ್ವಾಮಿ ಅವರಿಗೆ ಸೇಬು ಹಾಗೂ ಮೂಸಂಬಿಯ ಬೃಹತ್ ಹಾರ ಹಾಕಿ ಸಂಭ್ರಮಿಸಿದರು.
ಸೋಂಕು ನಿಯಂತ್ರಣಕ್ಕೆ ಸರ್ಕಾರವೇ ರೂಪಿಸಿದ ಅಂತರ ಹಾಗೂ ಮಾಸ್ಕ್ ಧರಿಸುವ ನಿಯಮಗಳನ್ನು ಗಾಳಿಗೆ ತೂರಲಾಯಿತು.