<p><strong>ಬೆಂಗಳೂರು: </strong>ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಿರುವ ಬಿಬಿಎಂಪಿ ಶಾಲಾ–ಕಾಲೇಜಿನ ಹೊರಗುತ್ತಿಗೆ ಶಿಕ್ಷಕರು ಮತ್ತು ಉಪನ್ಯಾಸಕರು ಕೋವಿಡ್ ಯೋಧರ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ. ಹೀಗಾಗಿ, ಕೋವಿಡ್ ಕರ್ತವ್ಯದಿಂದ ಮುಕ್ತಿ ಕೋರಿ ಪಾಲಿಕೆ ಆಯುಕ್ತರಿಗೆ ಉಪನ್ಯಾಸಕರು ಪತ್ರ ಬರೆದಿದ್ದಾರೆ.</p>.<p>ಬಿಬಿಎಂಪಿಯ 91 ನರ್ಸರಿ, 16 ಪ್ರಾಥಮಿಕ ಶಾಲೆ, 33 ಪ್ರೌಢಶಾಲೆ, 15 ಪದವಿ ಪೂರ್ವ ಕಾಲೇಜು, 6 ಪ್ರಥಮ ದರ್ಜೆ ಕಾಲೇಜುಗಳಲ್ಲಿ 600ಕ್ಕೂ ಹೆಚ್ಚು ಹೊರ ಗುತ್ತಿಗೆ ಶಿಕ್ಷಕರು ಮತ್ತು ಉಪನ್ಯಾಸಕರು ಇದ್ದಾರೆ.</p>.<p>ಕೆಲಸ ನಿರ್ವಹಣೆ ಸಂದರ್ಭದಲ್ಲಿ 40 ಜನರಿಗೆ ಸೋಂಕು ತಗುಲಿದೆ. ಕೋವಿಡ್ ಯೋಧರೆಂದು ನಿರ್ಧರಿಸದ ಕಾರಣ ಯಾವುದೇ ಸವಲತ್ತು ದೊರೆಯುತ್ತಿಲ್ಲ. ಹಾಸಿಗೆ ಮತ್ತು ಆಮ್ಲಜನಕ ಸಿಗದೆ ಪರದಾಡಬೇಕಾದ ಸ್ಥಿತಿ ಇದೆ ಎಂದು ಉಪನ್ಯಾಸಕರು ದೂರಿದ್ದಾರೆ.</p>.<p>‘ನಮ್ಮಿಂದ ಮನೆಯವರಿಗೂ ಕೋವಿಡ್ ಹರಡುತ್ತಿದೆ. ನಾಲ್ಕು ಶಿಕ್ಷಕರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದಾರೆ. ಪರಿಸ್ಥಿತಿ ಹೀಗಿದ್ದರೂ, ಕೋವಿಡ್ ಯೋಧರ ಪಟ್ಟಿಯಲ್ಲಿ ಇಲ್ಲದ ಕಾರಣ ಕೇಂದ್ರ ಸರ್ಕಾರದ ಯಾವುದೇ ಪರಿಹಾರ ದೊರಕುತ್ತಿಲ್ಲ’ ಎಂದು ಹೇಳಿದ್ದಾರೆ.</p>.<p>‘ಕೋವಿಡ್ ಯೋಧರ ಪಟ್ಟಿಗೆ ಸೇರಿಸಿ, ಇಲ್ಲವೇ ಕೋವಿಡ್ ಕರ್ತವ್ಯದಿಂದ ಮುಕ್ತಿಗೊಳಿಸಿ’ ಎಂದು ಅವರು ಪತ್ರದಲ್ಲಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.</p>.<p>ಈ ನಡುವೆ, ಮಾರ್ಚ್ನಿಂದ ಈಚೆಗೆ ಬಾಕಿ ವೇತನವನ್ನೂ ಬಿಡುಗಡೆ ಮಾಡಿಲ್ಲ. 2020ರ ಜೂನ್ ಮತ್ತು ಜುಲೈನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರೂ ವೇತನ ಬಿಡುಗಡೆ ಮಾಡಿಲ್ಲ. ಕೂಡಲೇ ವೇತನ ಕೊಡಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಿರುವ ಬಿಬಿಎಂಪಿ ಶಾಲಾ–ಕಾಲೇಜಿನ ಹೊರಗುತ್ತಿಗೆ ಶಿಕ್ಷಕರು ಮತ್ತು ಉಪನ್ಯಾಸಕರು ಕೋವಿಡ್ ಯೋಧರ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ. ಹೀಗಾಗಿ, ಕೋವಿಡ್ ಕರ್ತವ್ಯದಿಂದ ಮುಕ್ತಿ ಕೋರಿ ಪಾಲಿಕೆ ಆಯುಕ್ತರಿಗೆ ಉಪನ್ಯಾಸಕರು ಪತ್ರ ಬರೆದಿದ್ದಾರೆ.</p>.<p>ಬಿಬಿಎಂಪಿಯ 91 ನರ್ಸರಿ, 16 ಪ್ರಾಥಮಿಕ ಶಾಲೆ, 33 ಪ್ರೌಢಶಾಲೆ, 15 ಪದವಿ ಪೂರ್ವ ಕಾಲೇಜು, 6 ಪ್ರಥಮ ದರ್ಜೆ ಕಾಲೇಜುಗಳಲ್ಲಿ 600ಕ್ಕೂ ಹೆಚ್ಚು ಹೊರ ಗುತ್ತಿಗೆ ಶಿಕ್ಷಕರು ಮತ್ತು ಉಪನ್ಯಾಸಕರು ಇದ್ದಾರೆ.</p>.<p>ಕೆಲಸ ನಿರ್ವಹಣೆ ಸಂದರ್ಭದಲ್ಲಿ 40 ಜನರಿಗೆ ಸೋಂಕು ತಗುಲಿದೆ. ಕೋವಿಡ್ ಯೋಧರೆಂದು ನಿರ್ಧರಿಸದ ಕಾರಣ ಯಾವುದೇ ಸವಲತ್ತು ದೊರೆಯುತ್ತಿಲ್ಲ. ಹಾಸಿಗೆ ಮತ್ತು ಆಮ್ಲಜನಕ ಸಿಗದೆ ಪರದಾಡಬೇಕಾದ ಸ್ಥಿತಿ ಇದೆ ಎಂದು ಉಪನ್ಯಾಸಕರು ದೂರಿದ್ದಾರೆ.</p>.<p>‘ನಮ್ಮಿಂದ ಮನೆಯವರಿಗೂ ಕೋವಿಡ್ ಹರಡುತ್ತಿದೆ. ನಾಲ್ಕು ಶಿಕ್ಷಕರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದಾರೆ. ಪರಿಸ್ಥಿತಿ ಹೀಗಿದ್ದರೂ, ಕೋವಿಡ್ ಯೋಧರ ಪಟ್ಟಿಯಲ್ಲಿ ಇಲ್ಲದ ಕಾರಣ ಕೇಂದ್ರ ಸರ್ಕಾರದ ಯಾವುದೇ ಪರಿಹಾರ ದೊರಕುತ್ತಿಲ್ಲ’ ಎಂದು ಹೇಳಿದ್ದಾರೆ.</p>.<p>‘ಕೋವಿಡ್ ಯೋಧರ ಪಟ್ಟಿಗೆ ಸೇರಿಸಿ, ಇಲ್ಲವೇ ಕೋವಿಡ್ ಕರ್ತವ್ಯದಿಂದ ಮುಕ್ತಿಗೊಳಿಸಿ’ ಎಂದು ಅವರು ಪತ್ರದಲ್ಲಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.</p>.<p>ಈ ನಡುವೆ, ಮಾರ್ಚ್ನಿಂದ ಈಚೆಗೆ ಬಾಕಿ ವೇತನವನ್ನೂ ಬಿಡುಗಡೆ ಮಾಡಿಲ್ಲ. 2020ರ ಜೂನ್ ಮತ್ತು ಜುಲೈನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರೂ ವೇತನ ಬಿಡುಗಡೆ ಮಾಡಿಲ್ಲ. ಕೂಡಲೇ ವೇತನ ಕೊಡಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>