<p><strong>ಬೆಂಗಳೂರು:</strong> ಕೊರೊನಾ ಸೋಂಕು ತಗುಲಿದ್ದ ವಿಧಾನಸೌಧ ಭದ್ರತಾ ವಿಭಾಗದ ಎಎಸ್ಐಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ.</p>.<p>58 ವರ್ಷದ ಎಎಸ್ಐ, ಹಲವು ತಿಂಗಳುಗಳಿಂದ ವಿಧಾನಸೌಧ ಭದ್ರತೆ ಕರ್ತವ್ಯ ನಿರ್ವಹಿಸುತ್ತಿದ್ದರು. ವಾರದ ಹಿಂದಷ್ಟೇ ರಜೆ ಪಡೆದಿದ್ದ ಅವರು ಮನೆಯಲ್ಲೇ ಇದ್ದರು. ಅವರಿಗೆ ನೆಗಡಿ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಉಸಿರಾಟದ ಸಮಸ್ಯೆಯೂ ಇತ್ತು.</p>.<p>ಆಸ್ಪತ್ರೆಗೆ ತೆರಳಿ ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ವರದಿ ಬಂದಿತ್ತು. ಚಿಕಿತ್ಸೆಗಾಗಿ ಹೊಸಕೋಟೆ ಸಮೀಪದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆ ಹೆಚ್ಚಾಗಿ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.</p>.<p class="Subhead"><strong>ಐವರು ಪೊಲೀಸರಿಗೆ ಸೋಂಕು</strong>: ನಗರದಲ್ಲಿ ಸೋಮವಾರವೂ ಐವರು ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜೆ.ಜೆ.ನಗರ ಠಾಣೆಯ ಮಹಿಳಾ ಪಿಎಸ್ಐ, ಆರ್.ಟಿ.ನಗರ, ಜೀವನಬಿಮಾನಗರ, ಹನುಮಂತನಗರ ಮತ್ತು ಹಲಸೂರು ಗೇಟ್ ಸಂಚಾರ ಠಾಣೆಯ ನಾಲ್ವರು ಕಾನ್ಸ್ಟೆಬಲ್ಗಳಿಗೆ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.</p>.<p>ನಗರದಲ್ಲಿ ಇದುವರೆಗೆ 210 ಪೊಲೀಸರಿಗೆ ಸೋಂಕು ತಗುಲಿದ್ದು, 69 ಮಂದಿ ಗುಣಮುಖರಾಗಿದ್ದಾರೆ. 136 ಪೊಲೀಸರಿಗೆ ಚಿಕಿತ್ಸೆ ಮುಂದುವರಿದಿದೆ. ಮೂವರು ಎಎಸ್ಐ, ಹೆಡ್ ಕಾನ್ಸ್ಟೆಬಲ್ಗಳು ಕೊನೆಯುಸಿರೆಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕು ತಗುಲಿದ್ದ ವಿಧಾನಸೌಧ ಭದ್ರತಾ ವಿಭಾಗದ ಎಎಸ್ಐಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ.</p>.<p>58 ವರ್ಷದ ಎಎಸ್ಐ, ಹಲವು ತಿಂಗಳುಗಳಿಂದ ವಿಧಾನಸೌಧ ಭದ್ರತೆ ಕರ್ತವ್ಯ ನಿರ್ವಹಿಸುತ್ತಿದ್ದರು. ವಾರದ ಹಿಂದಷ್ಟೇ ರಜೆ ಪಡೆದಿದ್ದ ಅವರು ಮನೆಯಲ್ಲೇ ಇದ್ದರು. ಅವರಿಗೆ ನೆಗಡಿ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಉಸಿರಾಟದ ಸಮಸ್ಯೆಯೂ ಇತ್ತು.</p>.<p>ಆಸ್ಪತ್ರೆಗೆ ತೆರಳಿ ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ವರದಿ ಬಂದಿತ್ತು. ಚಿಕಿತ್ಸೆಗಾಗಿ ಹೊಸಕೋಟೆ ಸಮೀಪದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆ ಹೆಚ್ಚಾಗಿ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.</p>.<p class="Subhead"><strong>ಐವರು ಪೊಲೀಸರಿಗೆ ಸೋಂಕು</strong>: ನಗರದಲ್ಲಿ ಸೋಮವಾರವೂ ಐವರು ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜೆ.ಜೆ.ನಗರ ಠಾಣೆಯ ಮಹಿಳಾ ಪಿಎಸ್ಐ, ಆರ್.ಟಿ.ನಗರ, ಜೀವನಬಿಮಾನಗರ, ಹನುಮಂತನಗರ ಮತ್ತು ಹಲಸೂರು ಗೇಟ್ ಸಂಚಾರ ಠಾಣೆಯ ನಾಲ್ವರು ಕಾನ್ಸ್ಟೆಬಲ್ಗಳಿಗೆ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.</p>.<p>ನಗರದಲ್ಲಿ ಇದುವರೆಗೆ 210 ಪೊಲೀಸರಿಗೆ ಸೋಂಕು ತಗುಲಿದ್ದು, 69 ಮಂದಿ ಗುಣಮುಖರಾಗಿದ್ದಾರೆ. 136 ಪೊಲೀಸರಿಗೆ ಚಿಕಿತ್ಸೆ ಮುಂದುವರಿದಿದೆ. ಮೂವರು ಎಎಸ್ಐ, ಹೆಡ್ ಕಾನ್ಸ್ಟೆಬಲ್ಗಳು ಕೊನೆಯುಸಿರೆಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>