ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ | ಮತ್ತೊಬ್ಬ ಎಎಸ್ಐ ಸಾವು: ಅಗ್ನಿಶಾಮಕದ ದಳದ 8 ಸಿಬ್ಬಂದಿಗೆ ಸೋಂಕು

Last Updated 21 ಜುಲೈ 2020, 8:08 IST
ಅಕ್ಷರ ಗಾತ್ರ

ಬೆಂಗಳೂರು:ಕೊರೊನಾ ಸೋಂಕು ತಗುಲಿದ್ದ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ಎಎಸ್ಐಯೊಬ್ಬರು ಸಾವನ್ನಪ್ಪಿದ್ದಾರೆ.

ಅನಾರೋಗ್ಯದಿಂದ ಎಎಸ್ಐ ಬಳಲುತ್ತಿದ್ದರು. ಪರೀಕ್ಷೆ ಮಾಡಿಸಿದಾಗ ಕೊರೊನಾ ದೃಢಪಟ್ಟಿತ್ತು.

ಅಗ್ನಿಶಾಮಕ ದಳದ 8 ಸಿಬ್ಬಂದಿಗೆ ಕೊರೊನಾ

ಬೆಂಗಳೂರುನಗರದ ಅಗ್ನಿಶಾಮಕ ದಳದ 8 ಸಿಬ್ಬಂದಿಯಲ್ಲಿ ಮಂಗಳವಾರ ಕೊರೊನಾ ದೃಢಪಟ್ಟಿದೆ.

ದಕ್ಷಿಣ ವಿಭಾಗದ 6 ಹಾಗೂ ಜಯನಗರದ ಅಗ್ನಿಶಾಮಕ ದಳದ ಕಚೇರಿಯ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಿಬ್ಬಂದಿಯೊಬ್ಬರ ಪತ್ನಿಗೂ ಸೋಂಕು ತಗುಲಿರುವುದು ವರದಿಯಿಂದ ಗೊತ್ತಾಗಿದೆ.

ರಾಜಾಜಿನಗರದ ಅಗ್ನಿಶಾಮಕ ದಳದ ವಸತಿಗೃಹದಲ್ಲಿದ್ದ ಬಹುತೇಕ ಸಿಬ್ಬಂದಿ ವಾಸವಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT