<p><strong>ವೈಟ್ಫೀಲ್ಡ್:</strong> ‘ನಗರದ ಪ್ರತಿ ಮನೆಗೆ ತೆರಳಿ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಬೇಕು ಮತ್ತು ಸೋಂಕು ಹರಡುವುದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.</p>.<p>ಮಹದೇವಪುರ ವಲಯದ ಕೊರೊನಾ ನಿಯಂತ್ರಣ ಉಸ್ತುವಾರಿಯೂ ಆಗಿರುವ ಸಚಿವರು,ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಮಹದೇವಪುರ ಬಿಬಿಎಂಪಿ ವಲಯ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೋಂಕು ನಿಯಂತ್ರಣದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಮಹದೇವಪುರ ವಲಯದ 17 ವಾರ್ಡ್ಗಳು ಹಾಗೂ 11 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್-19 ನಿರ್ವಹಣಾ ಘಟಕ ಸ್ಥಾಪನೆ ಮಾಡುವುದರ ಜೊತೆಗೆ ಒಬ್ಬ ಅಧಿಕಾರಿಗೆ ಸಂಪೂರ್ಣ ಜವಾಬ್ದಾರಿ ನೀಡಬೇಕು ಎಂದರು.</p>.<p>ಕೊರೊನಾ ಸೊಂಕಿತರಿಗೆ ಶೀಘ್ರವಾಗಿ ದೊರಕುವಂತೆ ಪ್ರತಿ ವಾರ್ಡನಲ್ಲಿ ತಲಾ ಎರಡು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ ಒಂದು ಹೆಚ್ಚುವರಿ ಆಂಬುಲೆನ್ಸ್ ಸೇವೆ ದೊರಕುವಂತಾಗಬೇಕು ಎಂದು ಸೂಚಿಸಿದರು.</p>.<p>ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಹಣವನ್ನು ಪಡೆದರೆ ಯಾವುದೇ ಮುಲಾಜಿಲ್ಲದೆ ಆಸ್ಪತ್ರೆ ಪರವಾನಗಿ ರದ್ದು ಮಾಡಲಾಗುತ್ತದೆ ಎಂದೂ ಅವರು ಎಚ್ಚರಿಸಿದರು.</p>.<p>‘ಮಹದೇವಪುರ ವಲಯದಲ್ಲಿ ಕನಿಷ್ಠ 1 ಸಾವಿರ ಬೆಡ್ ಮತ್ತು 3 ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p>ಶಾಸಕ ಅರವಿಂದ ಲಿಂಬಾವಳಿ, ‘ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಮನೆಗಳಿಗೆ ಬೇರೆ ಗ್ರಾಮಗಳಿಂದ ಬರುವವರನ್ನು ತಪಾಸಣೆ ನಡೆಸಲು ಆರೋಗ್ಯ ಅಧಿಕಾರಿಗಳಿಗೆ ಸಹಕಾರ ನೀಡಬೇಕು’ ಎಂದರು.</p>.<p>ಬಿಬಿಎಂಪಿ ಆಯುಕ್ತ ಅನಿಲ್ಕುಮಾರ್, ವಿಶೇಷ ಆಯುಕ್ತ ರಣದೀಪ್, ಮಹದೇವಪುರ ವಲಯ ಕೋವಿಡ್– 19 ಸಂಯೋಜಕರಾದ ಮಂಜುಳಾ, ಜಂಟಿ ಆಯುಕ್ತ ವೆಂಕಟಾಚಲಪತಿ, ಪಾಲಿಕೆ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೈಟ್ಫೀಲ್ಡ್:</strong> ‘ನಗರದ ಪ್ರತಿ ಮನೆಗೆ ತೆರಳಿ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಬೇಕು ಮತ್ತು ಸೋಂಕು ಹರಡುವುದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.</p>.<p>ಮಹದೇವಪುರ ವಲಯದ ಕೊರೊನಾ ನಿಯಂತ್ರಣ ಉಸ್ತುವಾರಿಯೂ ಆಗಿರುವ ಸಚಿವರು,ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಮಹದೇವಪುರ ಬಿಬಿಎಂಪಿ ವಲಯ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೋಂಕು ನಿಯಂತ್ರಣದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಮಹದೇವಪುರ ವಲಯದ 17 ವಾರ್ಡ್ಗಳು ಹಾಗೂ 11 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್-19 ನಿರ್ವಹಣಾ ಘಟಕ ಸ್ಥಾಪನೆ ಮಾಡುವುದರ ಜೊತೆಗೆ ಒಬ್ಬ ಅಧಿಕಾರಿಗೆ ಸಂಪೂರ್ಣ ಜವಾಬ್ದಾರಿ ನೀಡಬೇಕು ಎಂದರು.</p>.<p>ಕೊರೊನಾ ಸೊಂಕಿತರಿಗೆ ಶೀಘ್ರವಾಗಿ ದೊರಕುವಂತೆ ಪ್ರತಿ ವಾರ್ಡನಲ್ಲಿ ತಲಾ ಎರಡು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ ಒಂದು ಹೆಚ್ಚುವರಿ ಆಂಬುಲೆನ್ಸ್ ಸೇವೆ ದೊರಕುವಂತಾಗಬೇಕು ಎಂದು ಸೂಚಿಸಿದರು.</p>.<p>ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಹಣವನ್ನು ಪಡೆದರೆ ಯಾವುದೇ ಮುಲಾಜಿಲ್ಲದೆ ಆಸ್ಪತ್ರೆ ಪರವಾನಗಿ ರದ್ದು ಮಾಡಲಾಗುತ್ತದೆ ಎಂದೂ ಅವರು ಎಚ್ಚರಿಸಿದರು.</p>.<p>‘ಮಹದೇವಪುರ ವಲಯದಲ್ಲಿ ಕನಿಷ್ಠ 1 ಸಾವಿರ ಬೆಡ್ ಮತ್ತು 3 ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p>ಶಾಸಕ ಅರವಿಂದ ಲಿಂಬಾವಳಿ, ‘ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಮನೆಗಳಿಗೆ ಬೇರೆ ಗ್ರಾಮಗಳಿಂದ ಬರುವವರನ್ನು ತಪಾಸಣೆ ನಡೆಸಲು ಆರೋಗ್ಯ ಅಧಿಕಾರಿಗಳಿಗೆ ಸಹಕಾರ ನೀಡಬೇಕು’ ಎಂದರು.</p>.<p>ಬಿಬಿಎಂಪಿ ಆಯುಕ್ತ ಅನಿಲ್ಕುಮಾರ್, ವಿಶೇಷ ಆಯುಕ್ತ ರಣದೀಪ್, ಮಹದೇವಪುರ ವಲಯ ಕೋವಿಡ್– 19 ಸಂಯೋಜಕರಾದ ಮಂಜುಳಾ, ಜಂಟಿ ಆಯುಕ್ತ ವೆಂಕಟಾಚಲಪತಿ, ಪಾಲಿಕೆ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>