<p><strong>ಬೆಂಗಳೂರು</strong>: ಕೋವಿಡ್ ಶವಗಳ ಅಂತ್ಯಸಂಸ್ಕಾರ ಮಾಡುವ ಸಿಬ್ಬಂದಿ ಜೊತೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಶನಿವಾರ ಸ್ಮಶಾನದಲ್ಲೇ ಉಪಹಾರ ಸೇವಿಸಿದರು.</p>.<p>ತಾವರೆಕೆರೆಯ ಸ್ಮಶಾನಕ್ಕೆ ಶನಿವಾರ ಭೇಟಿ ನೀಡಿದ ಅವರು ಶವ ಸುಡುವ ಸಿಬ್ಬಂದಿಗೆ ಖುದ್ದು ಉಪಹಾರ ಬಡಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು. ಪರಿಸರ ದಿನದ ಅಂಗವಾಗಿ ಸ್ಮಶಾನದ ಖಾಲಿ ಜಾಗದಲ್ಲಿ ಸಸಿ ನೆಟ್ಟು ವನಮಹೋತ್ಸವಕ್ಕೂ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು,‘ನಗರೀಕರಣದ ಭರದಲ್ಲಿ ಮರಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಒಬ್ಬ ವ್ಯಕ್ತಿಗೆ ಎಂಟು ಮರ ಇರಬೇಕು. ನಗರದ ಖಾಲಿ ಸ್ಥಳಗಳಲ್ಲಿ ಹೆಚ್ಚು ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>ಸ್ಮಶಾನಗಳ ನೌಕರರ ಒಕ್ಕೂಟದ ಸುರೇಶ್, ‘ಜಿಲ್ಲಾಧಿಕಾರಿಗಳು ನಮ್ಮೊಂದಿಗೆ ಕುಳಿತು ಊಟ ಮಾಡಿದ್ದಲ್ಲದೆ, ಸ್ವತಃ ತಿಂಡಿ ಬಡಿಸಿದ್ದಾರೆ. ನಮ್ಮ ಕಷ್ಟ-ಸುಖ ವಿಚಾರಿಸಿದ್ದಾರೆ. ನಮಗೆ ಬಹಳ ಸಂತೋಷವಾಗಿದೆ’ ಎಂದರು.</p>.<p>ಸ್ಮಶಾನ ಸಿಬ್ಬಂದಿಗೆ ದಿನಸಿ ಕಿಟ್ಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಶವಗಳ ಅಂತ್ಯಸಂಸ್ಕಾರ ಮಾಡುವ ಸಿಬ್ಬಂದಿ ಜೊತೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಶನಿವಾರ ಸ್ಮಶಾನದಲ್ಲೇ ಉಪಹಾರ ಸೇವಿಸಿದರು.</p>.<p>ತಾವರೆಕೆರೆಯ ಸ್ಮಶಾನಕ್ಕೆ ಶನಿವಾರ ಭೇಟಿ ನೀಡಿದ ಅವರು ಶವ ಸುಡುವ ಸಿಬ್ಬಂದಿಗೆ ಖುದ್ದು ಉಪಹಾರ ಬಡಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು. ಪರಿಸರ ದಿನದ ಅಂಗವಾಗಿ ಸ್ಮಶಾನದ ಖಾಲಿ ಜಾಗದಲ್ಲಿ ಸಸಿ ನೆಟ್ಟು ವನಮಹೋತ್ಸವಕ್ಕೂ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು,‘ನಗರೀಕರಣದ ಭರದಲ್ಲಿ ಮರಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಒಬ್ಬ ವ್ಯಕ್ತಿಗೆ ಎಂಟು ಮರ ಇರಬೇಕು. ನಗರದ ಖಾಲಿ ಸ್ಥಳಗಳಲ್ಲಿ ಹೆಚ್ಚು ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>ಸ್ಮಶಾನಗಳ ನೌಕರರ ಒಕ್ಕೂಟದ ಸುರೇಶ್, ‘ಜಿಲ್ಲಾಧಿಕಾರಿಗಳು ನಮ್ಮೊಂದಿಗೆ ಕುಳಿತು ಊಟ ಮಾಡಿದ್ದಲ್ಲದೆ, ಸ್ವತಃ ತಿಂಡಿ ಬಡಿಸಿದ್ದಾರೆ. ನಮ್ಮ ಕಷ್ಟ-ಸುಖ ವಿಚಾರಿಸಿದ್ದಾರೆ. ನಮಗೆ ಬಹಳ ಸಂತೋಷವಾಗಿದೆ’ ಎಂದರು.</p>.<p>ಸ್ಮಶಾನ ಸಿಬ್ಬಂದಿಗೆ ದಿನಸಿ ಕಿಟ್ಗಳನ್ನು ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>