<p><strong>ಹೆಸರಘಟ್ಟ</strong>: ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಹೊಯ್ಸಳ ಜೀಪ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>‘ಸೋಂಕಿತ ವ್ಯಕ್ತಿಯು ಅಬ್ಬಿಗೆರೆ ನಿವಾಸಿಯಾಗಿದ್ದು,ಇಲಾಖೆಯ ಪರೀಕ್ಷೆಗೆ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಲು ತಪಾಸಣೆಗೆ ಒಳಗಾದಾಗ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕಿತ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪಪತ್ರೆಗೆ ದಾಖಲಿಸಲಾಗಿದೆ. ಈ ವ್ಯಕ್ತಿಯ ಜೊತೆ 15 ಸಿಬ್ಬಂದಿ ಕೆಲಸ ಮಾಡಿದ್ದಾರೆ. ಅವರೆಲ್ಲರನ್ನೂ ಗುರುತಿಸಿ, ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುವುದು’ ಎಂದು ಚಿಕ್ಕಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಜಯರಾಂ ತಿಳಿಸಿದರು.</p>.<p>‘ಸೋಂಕಿತ ವ್ಯಕ್ತಿಯು ಮೇ 23ರಿಂದ 28ರವರೆಗೆ ರಜೆಯಲ್ಲಿದ್ದರು. ಈ ವೇಳೆ ಗ್ರಾಮದಿಂದ ಹೊರಗೆ ಹೋದಾಗ ಸೋಂಕು ತಗುಲಿರುವ ಸಾಧ್ಯತೆ ಇದೆ. ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ’ ಎಂದರು.</p>.<p>ಸೋಲದೇವನಹಳ್ಳಿ ಪೊಲೀಸ್ ಠಾಣೆ ಮತ್ತು ವಾಹನಗಳಿಗೆ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಲಾಯಿತು.ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿ ರಮೇಶ್ ಮತ್ತು ತಹಶೀಲ್ದಾರ್ ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ</strong>: ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಹೊಯ್ಸಳ ಜೀಪ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>‘ಸೋಂಕಿತ ವ್ಯಕ್ತಿಯು ಅಬ್ಬಿಗೆರೆ ನಿವಾಸಿಯಾಗಿದ್ದು,ಇಲಾಖೆಯ ಪರೀಕ್ಷೆಗೆ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಲು ತಪಾಸಣೆಗೆ ಒಳಗಾದಾಗ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕಿತ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪಪತ್ರೆಗೆ ದಾಖಲಿಸಲಾಗಿದೆ. ಈ ವ್ಯಕ್ತಿಯ ಜೊತೆ 15 ಸಿಬ್ಬಂದಿ ಕೆಲಸ ಮಾಡಿದ್ದಾರೆ. ಅವರೆಲ್ಲರನ್ನೂ ಗುರುತಿಸಿ, ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುವುದು’ ಎಂದು ಚಿಕ್ಕಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಜಯರಾಂ ತಿಳಿಸಿದರು.</p>.<p>‘ಸೋಂಕಿತ ವ್ಯಕ್ತಿಯು ಮೇ 23ರಿಂದ 28ರವರೆಗೆ ರಜೆಯಲ್ಲಿದ್ದರು. ಈ ವೇಳೆ ಗ್ರಾಮದಿಂದ ಹೊರಗೆ ಹೋದಾಗ ಸೋಂಕು ತಗುಲಿರುವ ಸಾಧ್ಯತೆ ಇದೆ. ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ’ ಎಂದರು.</p>.<p>ಸೋಲದೇವನಹಳ್ಳಿ ಪೊಲೀಸ್ ಠಾಣೆ ಮತ್ತು ವಾಹನಗಳಿಗೆ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಲಾಯಿತು.ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿ ರಮೇಶ್ ಮತ್ತು ತಹಶೀಲ್ದಾರ್ ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>