<p><strong>ಬೆಂಗಳೂರು:</strong> ನಗರದ ಸಂಚಾರ ಠಾಣೆಯೊಂದರ ಕಾನ್ಸ್ಟೆಬಲ್ಗೆ ಕೊರೊನಾಸೋಂಕು ತಗುಲಿರುವುದು ದೃಢಪಟ್ಟಿದ್ದು, ಕಮಿಷನರೇಟ್ ವ್ಯಾಪ್ತಿಯ ಪೊಲೀಸರ ಆತಂಕಕ್ಕೆ ಕಾರಣವಾಗಿದೆ.</p>.<p>ರಾಮಕೃಷ್ಣ ಹೆಗಡೆ ನಗರ ನಿವಾಸಿಯಾದ ಕಾನ್ಸ್ಟೆಬಲ್, ಪೂರ್ವ ಸಂಚಾರ ವಿಭಾಗ ವ್ಯಾಪ್ತಿಯ ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೊರೊನಾ ಕರ್ತವ್ಯ ಶುರುವಾಗಿ ಕೆಲ ದಿನಗಳ ನಂತರ ತಮ್ಮ ಕುಟುಂಬದವರನ್ನು ಊರಿಗೆ ಕಳುಹಿಸಿದ್ದರು. ನಂತರ, ಕಾನ್ಸ್ಟೆಬಲ್ ಒಬ್ಬರೇ ಮನೆಯಲ್ಲಿ ವಾಸವಿದ್ದರು.</p>.<p>ಫ್ರೇಜರ್ ಟೌನ್ ಹಾಗೂ ಸುತ್ತಮುತ್ತಲಿನ ಕೆಲ ಪ್ರದೇಶಗಳಲ್ಲಿ ಕಾನ್ಸ್ಟೆಬಲ್ ಕರ್ತವ್ಯ ನಿರ್ವಹಿಸಿದ್ದರು. ವಾಹನಗಳನ್ನು ತಡೆದು ತಪಾಸಣೆಯನ್ನೂ ಮಾಡಿದ್ದರು.</p>.<p>ಇದೇ 20ರಂದು ಠಾಣೆ ಸಿಬ್ಬಂದಿ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದರು. ಗುರುವಾರ ರಾತ್ರಿ ವರದಿ ಬಂದಿದ್ದು, ಕಾನ್ಸ್ಟೆಬಲ್ಗೆ ಸೋಂಕು ಇರುವುದು ದೃಢಪಟ್ಟಿದ್ದು, ಉಳಿದವರದ್ದು ನೆಗೆಟಿವ್ ಫಲಿತಾಂಶ ಬಂದಿದೆ.</p>.<p><strong>ಸಂಪರ್ಕವಿದ್ದವರ ಹುಡುಕಾಟ</strong>: ಕಾನ್ಸ್ಟೆಬಲ್ ಜೊತೆ ಕೆಲಸ ಮಾಡಿದ್ದ ಹಾಗೂ ಅವರ ಜೊತೆ ಸಂಪರ್ಕವಿಟ್ಟು ಕೊಂಡಿದ್ದವರನ್ನು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಪತ್ತೆ ಮಾಡುತ್ತಿದೆ.</p>.<p>ಠಾಣೆ ಕೆಲ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆದಿದೆ. ಠಾಣೆ, ಮನೆ ಹಾಗೂ ಸುತ್ತಮುತ್ತ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಕಾನ್ಸ್ಟೆಬಲ್ ಕೆಲಸ ಮಾಡುತ್ತಿದ್ದ ಠಾಣೆಯನ್ನೂ ಸೀಲ್ಡೌನ್ ಮಾಡುವ ಸಾಧ್ಯತೆ ಇದೆ.</p>.<p><strong>ಮತ್ತೊಮ್ಮೆ ಮಾದರಿ ಸಂಗ್ರಹ</strong>: ವರದಿ ಬರುತ್ತಿದ್ದಂತೆ ಕಾನ್ಸ್ಟೆಬಲ್ ಅವರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಮತ್ತೊಮ್ಮೆ ಗಂಟಲಿನ ದ್ರವ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ.</p>.<p>ಇತ್ತೀಚೆಗೆನಗರದ ಕಾನ್ಸ್ಟೆಬಲೊಬ್ಬರಿಗೆ ಕೊರೊನಾ ಇಲ್ಲದಿದ್ದರೂ ಪಾಸಿಟಿವ್ ವರದಿ ಬಂದಿತ್ತು. ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. ಇದೇ ಕಾರಣಕ್ಕೆ ಎರಡನೇ ಬಾರಿ ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ.</p>.<p>*</p>.<p>ಠಾಣೆ, ವಾಸವಿದ್ದ ಮನೆ ಸುತ್ತಮುತ್ತ ಸೋಂಕು ನಿವಾರಕಾ ದ್ರಾವಣ ಸಿಂಪಡಿಸುವಂತೆ ಸೂಚಿಸಲಾಗಿದೆ. ಸಂಪರ್ಕವಿದ್ದವರ ಮಾಹಿತಿಯನ್ನೂ ಕಲೆಹಾಕಲಾಗುತ್ತಿದೆ.<br /><em><strong>-ಬಿ.ಆರ್.ರವಿಕಾಂತೇಗೌಡ, ಜಂಟಿ ಪೊಲೀಸ್ ಕಮಿಷನರ್ (ಸಂಚಾರ)</strong></em></p>.<p><strong>****</strong></p>.<p><strong>ಕನಿಷ್ಠ 10 ದಿನಗಳಿಗೊಮ್ಮೆ ರಜೆ ನೀಡಿ</strong></p>.<p><strong>ಮೈಸೂರು:</strong> ‘ಕೊರೊನಾ ಸೋಂಕು ಹಿನ್ನೆಲೆಯಲ್ಲಿ 55 ವರ್ಷ ಮೀರಿದ ಪೊಲೀಸರಿಗೆ ಠಾಣೆಯಲ್ಲೇ ಸೇವೆಗೆ ನಿಯೋಜಿಸಬೇಕು ಹಾಗೂ ಸಿಬ್ಬಂದಿಗೆ ಕನಿಷ್ಠ 10 ದಿನಗಳಿಗೊಮ್ಮೆ ರಜೆ ನೀಡಲು ಸೂಚಿಸಲಾಗಿದೆ’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಪೊಲೀಸರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಿಬ್ಬಂದಿಯನ್ನು ವೈಜ್ಞಾನಿಕವಾಗಿ ಪಾಳಿ ಆಧಾರದಲ್ಲಿ ಸೇವೆಗೆ ನಿಯೋಜಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕೊರೊನಾ ಸೋಂಕಿತರಾದ ಪೊಲೀಸ್ ಸಿಬ್ಬಂದಿಯ ಸಂಚಾರದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಗತ್ಯ ಕಂಡು ಬಂದರೆ ಕೆಲವು ಪೊಲೀಸ್ ಠಾಣೆಗಳನ್ನು ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯನ್ನು ಸೀಲ್ಡೌನ್ ಮಾಡಲಾಗುತ್ತದೆ’ ಎಂದರು.</p>.<p>ಅಕ್ರಮ ಪ್ರವೇಶ ತಡೆಗೆ ಪರಿವೀಕ್ಷಣಾ ತಂಡ: ಆನೇಕಲ್ ಗಡಿ ಪ್ರದೇಶದಲ್ಲಿ ವಲಸಿಗರು ಅಕ್ರಮವಾಗಿ ರಾಜ್ಯವನ್ನು ಪ್ರವೇಶಿಸುತ್ತಿದ್ದಾರೆ. ಇದನ್ನು ತಡೆಯಲು ವಿಶೇಷ ಪರಿವೀಕ್ಷಣಾ ತಂಡ ರಚಿಸಲಾಗುವುದು ಎಂದು ತಿಳಿಸಿದರು. ಕೆಲ ಜಿಲ್ಲೆಗಳಿಗೆ ಈಗಾಗಲೇ 30 ಸಾವಿರಕ್ಕೂ ಅಧಿಕ ಜನರು ಬಂದಿದ್ದಾರೆ. ಇನ್ನು ದೊಡ್ಡ ಸಂಖ್ಯೆಯಲ್ಲಿ ಬರಲಿದ್ದಾರೆ. ಈ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಸಂಚಾರ ಠಾಣೆಯೊಂದರ ಕಾನ್ಸ್ಟೆಬಲ್ಗೆ ಕೊರೊನಾಸೋಂಕು ತಗುಲಿರುವುದು ದೃಢಪಟ್ಟಿದ್ದು, ಕಮಿಷನರೇಟ್ ವ್ಯಾಪ್ತಿಯ ಪೊಲೀಸರ ಆತಂಕಕ್ಕೆ ಕಾರಣವಾಗಿದೆ.</p>.<p>ರಾಮಕೃಷ್ಣ ಹೆಗಡೆ ನಗರ ನಿವಾಸಿಯಾದ ಕಾನ್ಸ್ಟೆಬಲ್, ಪೂರ್ವ ಸಂಚಾರ ವಿಭಾಗ ವ್ಯಾಪ್ತಿಯ ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೊರೊನಾ ಕರ್ತವ್ಯ ಶುರುವಾಗಿ ಕೆಲ ದಿನಗಳ ನಂತರ ತಮ್ಮ ಕುಟುಂಬದವರನ್ನು ಊರಿಗೆ ಕಳುಹಿಸಿದ್ದರು. ನಂತರ, ಕಾನ್ಸ್ಟೆಬಲ್ ಒಬ್ಬರೇ ಮನೆಯಲ್ಲಿ ವಾಸವಿದ್ದರು.</p>.<p>ಫ್ರೇಜರ್ ಟೌನ್ ಹಾಗೂ ಸುತ್ತಮುತ್ತಲಿನ ಕೆಲ ಪ್ರದೇಶಗಳಲ್ಲಿ ಕಾನ್ಸ್ಟೆಬಲ್ ಕರ್ತವ್ಯ ನಿರ್ವಹಿಸಿದ್ದರು. ವಾಹನಗಳನ್ನು ತಡೆದು ತಪಾಸಣೆಯನ್ನೂ ಮಾಡಿದ್ದರು.</p>.<p>ಇದೇ 20ರಂದು ಠಾಣೆ ಸಿಬ್ಬಂದಿ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದರು. ಗುರುವಾರ ರಾತ್ರಿ ವರದಿ ಬಂದಿದ್ದು, ಕಾನ್ಸ್ಟೆಬಲ್ಗೆ ಸೋಂಕು ಇರುವುದು ದೃಢಪಟ್ಟಿದ್ದು, ಉಳಿದವರದ್ದು ನೆಗೆಟಿವ್ ಫಲಿತಾಂಶ ಬಂದಿದೆ.</p>.<p><strong>ಸಂಪರ್ಕವಿದ್ದವರ ಹುಡುಕಾಟ</strong>: ಕಾನ್ಸ್ಟೆಬಲ್ ಜೊತೆ ಕೆಲಸ ಮಾಡಿದ್ದ ಹಾಗೂ ಅವರ ಜೊತೆ ಸಂಪರ್ಕವಿಟ್ಟು ಕೊಂಡಿದ್ದವರನ್ನು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಪತ್ತೆ ಮಾಡುತ್ತಿದೆ.</p>.<p>ಠಾಣೆ ಕೆಲ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆದಿದೆ. ಠಾಣೆ, ಮನೆ ಹಾಗೂ ಸುತ್ತಮುತ್ತ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಕಾನ್ಸ್ಟೆಬಲ್ ಕೆಲಸ ಮಾಡುತ್ತಿದ್ದ ಠಾಣೆಯನ್ನೂ ಸೀಲ್ಡೌನ್ ಮಾಡುವ ಸಾಧ್ಯತೆ ಇದೆ.</p>.<p><strong>ಮತ್ತೊಮ್ಮೆ ಮಾದರಿ ಸಂಗ್ರಹ</strong>: ವರದಿ ಬರುತ್ತಿದ್ದಂತೆ ಕಾನ್ಸ್ಟೆಬಲ್ ಅವರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಮತ್ತೊಮ್ಮೆ ಗಂಟಲಿನ ದ್ರವ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ.</p>.<p>ಇತ್ತೀಚೆಗೆನಗರದ ಕಾನ್ಸ್ಟೆಬಲೊಬ್ಬರಿಗೆ ಕೊರೊನಾ ಇಲ್ಲದಿದ್ದರೂ ಪಾಸಿಟಿವ್ ವರದಿ ಬಂದಿತ್ತು. ಮತ್ತೊಮ್ಮೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. ಇದೇ ಕಾರಣಕ್ಕೆ ಎರಡನೇ ಬಾರಿ ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ.</p>.<p>*</p>.<p>ಠಾಣೆ, ವಾಸವಿದ್ದ ಮನೆ ಸುತ್ತಮುತ್ತ ಸೋಂಕು ನಿವಾರಕಾ ದ್ರಾವಣ ಸಿಂಪಡಿಸುವಂತೆ ಸೂಚಿಸಲಾಗಿದೆ. ಸಂಪರ್ಕವಿದ್ದವರ ಮಾಹಿತಿಯನ್ನೂ ಕಲೆಹಾಕಲಾಗುತ್ತಿದೆ.<br /><em><strong>-ಬಿ.ಆರ್.ರವಿಕಾಂತೇಗೌಡ, ಜಂಟಿ ಪೊಲೀಸ್ ಕಮಿಷನರ್ (ಸಂಚಾರ)</strong></em></p>.<p><strong>****</strong></p>.<p><strong>ಕನಿಷ್ಠ 10 ದಿನಗಳಿಗೊಮ್ಮೆ ರಜೆ ನೀಡಿ</strong></p>.<p><strong>ಮೈಸೂರು:</strong> ‘ಕೊರೊನಾ ಸೋಂಕು ಹಿನ್ನೆಲೆಯಲ್ಲಿ 55 ವರ್ಷ ಮೀರಿದ ಪೊಲೀಸರಿಗೆ ಠಾಣೆಯಲ್ಲೇ ಸೇವೆಗೆ ನಿಯೋಜಿಸಬೇಕು ಹಾಗೂ ಸಿಬ್ಬಂದಿಗೆ ಕನಿಷ್ಠ 10 ದಿನಗಳಿಗೊಮ್ಮೆ ರಜೆ ನೀಡಲು ಸೂಚಿಸಲಾಗಿದೆ’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಪೊಲೀಸರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಿಬ್ಬಂದಿಯನ್ನು ವೈಜ್ಞಾನಿಕವಾಗಿ ಪಾಳಿ ಆಧಾರದಲ್ಲಿ ಸೇವೆಗೆ ನಿಯೋಜಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕೊರೊನಾ ಸೋಂಕಿತರಾದ ಪೊಲೀಸ್ ಸಿಬ್ಬಂದಿಯ ಸಂಚಾರದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಗತ್ಯ ಕಂಡು ಬಂದರೆ ಕೆಲವು ಪೊಲೀಸ್ ಠಾಣೆಗಳನ್ನು ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯನ್ನು ಸೀಲ್ಡೌನ್ ಮಾಡಲಾಗುತ್ತದೆ’ ಎಂದರು.</p>.<p>ಅಕ್ರಮ ಪ್ರವೇಶ ತಡೆಗೆ ಪರಿವೀಕ್ಷಣಾ ತಂಡ: ಆನೇಕಲ್ ಗಡಿ ಪ್ರದೇಶದಲ್ಲಿ ವಲಸಿಗರು ಅಕ್ರಮವಾಗಿ ರಾಜ್ಯವನ್ನು ಪ್ರವೇಶಿಸುತ್ತಿದ್ದಾರೆ. ಇದನ್ನು ತಡೆಯಲು ವಿಶೇಷ ಪರಿವೀಕ್ಷಣಾ ತಂಡ ರಚಿಸಲಾಗುವುದು ಎಂದು ತಿಳಿಸಿದರು. ಕೆಲ ಜಿಲ್ಲೆಗಳಿಗೆ ಈಗಾಗಲೇ 30 ಸಾವಿರಕ್ಕೂ ಅಧಿಕ ಜನರು ಬಂದಿದ್ದಾರೆ. ಇನ್ನು ದೊಡ್ಡ ಸಂಖ್ಯೆಯಲ್ಲಿ ಬರಲಿದ್ದಾರೆ. ಈ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>