ಬೆಂಗಳೂರು: ಲಾಕ್ಡೌನ್ ಇದ್ದರೂ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬನಹಳ್ಳಿ ಬಳಿ ನೂರಾರು ವಲಸೆ ಕಾರ್ಮಿಕರನ್ನು ಕೆ.ಆರ್.ಪುರದ ಪ್ರತಿಷ್ಠಿತ ಸುಮಧುರಾ ಕಟ್ಟಡ ನಿರ್ಮಾಣ ಸಂಸ್ಥೆ ಒಂದೇ ಕಡೆ ಕೂಡಿ ಹಾಕಿರುವ ಆರೋಪ ಕೇಳಿಬಂದಿದೆ.
ಸಂಸ್ಥೆಯು ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಿದೆ. ಅಲ್ಲದೆ, ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಜರ್ ನೀಡಿಲ್ಲ. ಅಂತರವೂ ಇಲ್ಲದೆ ಸಂಸ್ಥೆಯ ಮಾಲೀಕರು ಕಾರ್ಮಿಕರನ್ನು ಕೂಡಿ ಹಾಕಿದ್ದಾರೆ ಎನ್ನಲಾಗಿದೆ.
ಊಟದ ವಿಚಾರದಲ್ಲಿ ಜಗಳ ನಡೆದಿದ್ದು, ಭದ್ರತಾ ಸಿಬ್ಬಂದಿ ಕಾರ್ಮಿಕರನ್ನು ಥಳಿಸಿದ್ದಾರೆ ಎಂದೂ ಹೇಳಲಾಗಿದೆ. ಕಾಡುಗೋಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ, ತಮ್ಮನ್ನು ತಮ್ಮ ರಾಜ್ಯಕ್ಕೆ ಕಳುಹಿಸಿ ಕೊಡುವಂತೆ ಪೊಲೀಸರ ಬಳಿ ಕಾರ್ಮಿಕರು ಅಂಗಲಾಚಿದ್ದಾರೆ.