<p><strong>ಬೆಂಗಳೂರು:</strong> ‘ಕಾರ್ಪೊರೇಟ್ ಸಂಸ್ಥೆಗಳು ಕೂಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು. ಉದ್ಯೋಗ ಆಧಾರಿತ ಕೌಶಲ ತರಬೇತಿ ಕೊಡಿಸಲು ಮುಂದಾಗಬೇಕು’ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಆಶಯ ವ್ಯಕ್ತಪಡಿಸಿದರು. </p>.<p>ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ನಗರದಲ್ಲಿ ಬುಧವಾರ ಆಯೋಜಿಸಿದ್ದ ವಿವಿಧ ಸಂಸ್ಥೆಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. </p>.<p>‘ಯುವ ಸಮೂಹಕ್ಕೆ ಕೌಶಲದ ತರಬೇತಿ ನೀಡಿ, ಸಬಲೀಕರಣ ಮಾಡಲು ಸರ್ಕಾರ ಈಗಾಗಲೇ ಹಲವು ಯೋಜನೆ ಕೈಗೊಂಡಿದೆ. ಕಾರ್ಪೊರೇಟ್ ಸಂಸ್ಥೆಗಳು ಕೂಡ ಈ ಕಾರ್ಯಕ್ಕೆ ಕೈ ಜೋಡಿಸಬೇಕಿದೆ. ರಾಜ್ಯದ ಹತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಆಧುನೀಕರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲವು ಸಂಸ್ಥೆಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಐಟಿಐ ಸಂಸ್ಥೆಗಳ ಉನ್ನತೀಕರಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಐಟಿಐಗಳಲ್ಲಿರುವ ಹಳೆಯ ಉಪಕರಣಗಳನ್ನು ಬದಲಾವಣೆ ಮಾಡಿ, ಹೊಸ ಉಪಕರಣಗಳನ್ನು ಅಳವಡಿಸಲು ಮುಂದಾಗಿದ್ದೇವೆ. ಇದರಿಂದ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಬೆಂಗಳೂರು, ಕಲಬುರಗಿ ಸೇರಿ ವಿವಿಧ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ಪ್ರಧಾನಮಂತ್ರಿ ಸೂರ್ಯ ಘರ್-ಮುಫ್ತ್ ಬಿಜ್ಲಿ ಯೋಜನೆಯಡಿ ರಾಜ್ಯದ 252 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ, ಐದು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಸೌರ ಚಾವಣಿ ಅಳವಡಿಕೆ ಮತ್ತು ನಿರ್ವಹಣೆಯ ಬಗ್ಗೆ ಒಂದು ವಾರದ ತರಬೇತಿ ಪಡೆದಿದ್ದಾರೆ’ ಎಂದು ಸಚಿವರು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ 10 ತರಬೇತುದಾರರಿಗೆ ಪ್ರಮಾಣ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು. ಐಟಿಐಗಳ ಪ್ರಾಂಶುಪಾಲರಿಗೆ ವಿಶೇಷ ಕಾರ್ಯಾಗಾರವನ್ನೂ ಏರ್ಪಡಿಸಲಾಗಿತ್ತು. ಐಟಿಐಗಳಲ್ಲಿನ ಕುಂದುಕೊರತೆಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡು, ಅವುಗಳನ್ನು ಕೂಡಲೇ ನಿವಾರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p>ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತೆ ಆರ್. ರಾಗಪ್ರಿಯಾ ಹಾಗೂ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<h2>ಇಲಾಖೆಯ ನೂತನ ಒಪ್ಪಂದಗಳು </h2>.<ul><li><p>ರಾಜ್ಯದ 10 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ‘ಬ್ರಿಡ್ಜ್’ ಕಾರ್ಯಕ್ರಮ ಅನುಷ್ಠಾನಕ್ಕೆ ಬಾಷ್ ಲಿಮಿಟೆಡ್ ಮತ್ತು ಫಂಕ್ಷನಲ್ ವೊಕೇಷನಲ್ ಟ್ರೇನಿಂಗ್ ರಿಸರ್ಚ್ ಸೊಸೈಟಿ (ಎಫ್ವಿಟಿಆರ್ಎಸ್) ಜತೆಗೆ ಒಪ್ಪಂದ</p></li><li><p>ಬೆಂಗಳೂರು ಮತ್ತು ಕಲಬುರಗಿ ವಿಭಾಗಗಳಲ್ಲಿರುವ 126 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತುದಾರರು ಕಿರಿಯ ತರಬೇತಿ ಅಧಿಕಾರಿಗಳಿಗೆ ಉದ್ಯೋಗಾರ್ಹತಾ ಕೌಶಲಗಳ ತರಬೇತಿಗೆ ವಾಧ್ವಾನಿ ಫೌಂಡೇಶನ್ ಜತೆಗೆ ಒಪ್ಪಂದ </p></li><li><p>ಮೈಸೂರು ಬೆಳಗಾವಿ ವಿಭಾಗಗಳ 144 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತುದಾರರು ಕಿರಿಯ ತರಬೇತಿ ಅಧಿಕಾರಿಗಳಿಗೆ ಉದ್ಯೋಗಾರ್ಹತಾ ಕೌಶಲಗಳ ತರಬೇತಿ ನೀಡಲು ಕ್ವೆಸ್ಟ್ ಅಲಯನ್ಸ್ ಜತೆಗೆ ಒಪ್ಪಂದ </p></li><li><p>20 ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಸೌರ ವಿದ್ಯುತ್ ಮತ್ತು ಕೈಗಾರಿಕಾ ಸ್ವಯಂಚಾಲನ ವ್ಯಾಪಾರಗಳಿಗೆ ಪ್ರಯೋಗಾಲಯಗಳನ್ನು ಸ್ಥಾಪಿಸಲು ಶ್ನೈಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಷನ್ ಜತೆಗೆ ಒಪ್ಪಂದ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾರ್ಪೊರೇಟ್ ಸಂಸ್ಥೆಗಳು ಕೂಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು. ಉದ್ಯೋಗ ಆಧಾರಿತ ಕೌಶಲ ತರಬೇತಿ ಕೊಡಿಸಲು ಮುಂದಾಗಬೇಕು’ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಆಶಯ ವ್ಯಕ್ತಪಡಿಸಿದರು. </p>.<p>ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ನಗರದಲ್ಲಿ ಬುಧವಾರ ಆಯೋಜಿಸಿದ್ದ ವಿವಿಧ ಸಂಸ್ಥೆಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. </p>.<p>‘ಯುವ ಸಮೂಹಕ್ಕೆ ಕೌಶಲದ ತರಬೇತಿ ನೀಡಿ, ಸಬಲೀಕರಣ ಮಾಡಲು ಸರ್ಕಾರ ಈಗಾಗಲೇ ಹಲವು ಯೋಜನೆ ಕೈಗೊಂಡಿದೆ. ಕಾರ್ಪೊರೇಟ್ ಸಂಸ್ಥೆಗಳು ಕೂಡ ಈ ಕಾರ್ಯಕ್ಕೆ ಕೈ ಜೋಡಿಸಬೇಕಿದೆ. ರಾಜ್ಯದ ಹತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಆಧುನೀಕರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲವು ಸಂಸ್ಥೆಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಐಟಿಐ ಸಂಸ್ಥೆಗಳ ಉನ್ನತೀಕರಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಐಟಿಐಗಳಲ್ಲಿರುವ ಹಳೆಯ ಉಪಕರಣಗಳನ್ನು ಬದಲಾವಣೆ ಮಾಡಿ, ಹೊಸ ಉಪಕರಣಗಳನ್ನು ಅಳವಡಿಸಲು ಮುಂದಾಗಿದ್ದೇವೆ. ಇದರಿಂದ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಬೆಂಗಳೂರು, ಕಲಬುರಗಿ ಸೇರಿ ವಿವಿಧ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ಪ್ರಧಾನಮಂತ್ರಿ ಸೂರ್ಯ ಘರ್-ಮುಫ್ತ್ ಬಿಜ್ಲಿ ಯೋಜನೆಯಡಿ ರಾಜ್ಯದ 252 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ, ಐದು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಸೌರ ಚಾವಣಿ ಅಳವಡಿಕೆ ಮತ್ತು ನಿರ್ವಹಣೆಯ ಬಗ್ಗೆ ಒಂದು ವಾರದ ತರಬೇತಿ ಪಡೆದಿದ್ದಾರೆ’ ಎಂದು ಸಚಿವರು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ 10 ತರಬೇತುದಾರರಿಗೆ ಪ್ರಮಾಣ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು. ಐಟಿಐಗಳ ಪ್ರಾಂಶುಪಾಲರಿಗೆ ವಿಶೇಷ ಕಾರ್ಯಾಗಾರವನ್ನೂ ಏರ್ಪಡಿಸಲಾಗಿತ್ತು. ಐಟಿಐಗಳಲ್ಲಿನ ಕುಂದುಕೊರತೆಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡು, ಅವುಗಳನ್ನು ಕೂಡಲೇ ನಿವಾರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p>ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತೆ ಆರ್. ರಾಗಪ್ರಿಯಾ ಹಾಗೂ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<h2>ಇಲಾಖೆಯ ನೂತನ ಒಪ್ಪಂದಗಳು </h2>.<ul><li><p>ರಾಜ್ಯದ 10 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ‘ಬ್ರಿಡ್ಜ್’ ಕಾರ್ಯಕ್ರಮ ಅನುಷ್ಠಾನಕ್ಕೆ ಬಾಷ್ ಲಿಮಿಟೆಡ್ ಮತ್ತು ಫಂಕ್ಷನಲ್ ವೊಕೇಷನಲ್ ಟ್ರೇನಿಂಗ್ ರಿಸರ್ಚ್ ಸೊಸೈಟಿ (ಎಫ್ವಿಟಿಆರ್ಎಸ್) ಜತೆಗೆ ಒಪ್ಪಂದ</p></li><li><p>ಬೆಂಗಳೂರು ಮತ್ತು ಕಲಬುರಗಿ ವಿಭಾಗಗಳಲ್ಲಿರುವ 126 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತುದಾರರು ಕಿರಿಯ ತರಬೇತಿ ಅಧಿಕಾರಿಗಳಿಗೆ ಉದ್ಯೋಗಾರ್ಹತಾ ಕೌಶಲಗಳ ತರಬೇತಿಗೆ ವಾಧ್ವಾನಿ ಫೌಂಡೇಶನ್ ಜತೆಗೆ ಒಪ್ಪಂದ </p></li><li><p>ಮೈಸೂರು ಬೆಳಗಾವಿ ವಿಭಾಗಗಳ 144 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತುದಾರರು ಕಿರಿಯ ತರಬೇತಿ ಅಧಿಕಾರಿಗಳಿಗೆ ಉದ್ಯೋಗಾರ್ಹತಾ ಕೌಶಲಗಳ ತರಬೇತಿ ನೀಡಲು ಕ್ವೆಸ್ಟ್ ಅಲಯನ್ಸ್ ಜತೆಗೆ ಒಪ್ಪಂದ </p></li><li><p>20 ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಸೌರ ವಿದ್ಯುತ್ ಮತ್ತು ಕೈಗಾರಿಕಾ ಸ್ವಯಂಚಾಲನ ವ್ಯಾಪಾರಗಳಿಗೆ ಪ್ರಯೋಗಾಲಯಗಳನ್ನು ಸ್ಥಾಪಿಸಲು ಶ್ನೈಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಷನ್ ಜತೆಗೆ ಒಪ್ಪಂದ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>