<figcaption>""</figcaption>.<p><strong>ಬೆಂಗಳೂರು</strong>: ರಾಜ್ಯ ಸರ್ಕಾರವು ರಚಿಸಲಿರುವ ಹೊಸ ನಿಗಮಗಳ ಪಟ್ಟಿಗೆ ಮತ್ತೊಂದು ನಿಗಮ ಸೇರ್ಪಡೆಯಾಗುವ ಸಾಧ್ಯತೆ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಏಳು ಕಸ ಸಂಸ್ಕರಣಾ ಘಟಕಗಳ ನಿರ್ವಹಣೆಗೆ ಪ್ರತ್ಯೇಕ ನಿಗಮವನ್ನು ಸ್ಥಾಪಿಸುವ ಕುರಿತು ಬಿಬಿಎಂಪಿ ಪ್ರಸ್ತಾವ ಸಿದ್ಧಪಡಿಸುತ್ತಿದೆ.</p>.<p>ಹಸಿಕಸದಿಂದ ಸಾವಯವ ಗೊಬ್ಬರ ತಯಾರಿಸುವ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಏಳು ಕಡೆ ಕಸ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆ. ಈ ಘಟಕಗಳು ನಿತ್ಯ 2,300 ಟನ್ಗಳಷ್ಟು ಕಸವನ್ನು ಸಂಸ್ಕರಣೆಗೆ ಒಳಪಡಿಸುವ ಸಾಮರ್ಥ್ಯ ಹೊಂದಿವೆ. ಆದರೆ, ಇವುಗಳಲ್ಲಿ ನಿತ್ಯ 1000 ಟನ್ಗಳಷ್ಟು ಕಸ ಮಾತ್ರ ಸಂಸ್ಕರಣೆಯಾಗುತ್ತಿದೆ. ಈ ಘಟಕಗಳಲ್ಲಿ ಉತ್ಪಾದನೆಯಾಗುವ ಕಾಂಪೋಸ್ಟ್ಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಂಡುಕೊಳ್ಳುವಲ್ಲೂ ಬಿಬಿಎಂಪಿ ಯಶಸ್ವಿಯಾಗಿಲ್ಲ.</p>.<p>ಸ್ಥಳೀಯರ ಪ್ರತಿರೋಧದಿಂದಾಗಿ ಕೆಲವು ಘಟಕಗಳನ್ನು ಪದೇ ಪದೇ ಸ್ಥಗಿತಗೊಳಿಸಬೇಕಾದ ಸ್ಥಿತಿ ಇದೆ. ಘಟಕಗಳ ಉಪಉತ್ಪನ್ನವಾದ 16 ಮಿ.ಮಿ ದಪ್ಪದ ಹಾಗೂ 35 ಮಿ.ಮೀ ದಪ್ಪದ ಸಾವಯವ ಗೊಬ್ಬರವನ್ನುದಾಸ್ತಾನು ಇಡುವುದಕ್ಕೂ ಬಿಬಿಎಂಪಿ ಸಮಸ್ಯೆ ಎದುರಿಸುತ್ತಿದೆ. ಇವುಗಳನ್ನು ರೈತರಿಗೆ ಉಚಿತವಾಗಿ ನೀಡುತ್ತಿದೆ.</p>.<p>‘ಬಿಬಿಎಂಪಿಯ ಕಸ ಸಂಸ್ಕರಣೆ ಘಟಕಗಳ ನಿರ್ವಹಣೆಗೆ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಈ ಕುರಿತು ನಾವು ರೂಪರೇಷೆ ಸಿದ್ಧಪಡಿಸುತ್ತಿದ್ದೇವೆ. ಶೀಘ್ರವೇ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುತ್ತೇವೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಸ ಸಂಸ್ಕರಣಾ ಘಟಕಕ್ಕೆ ಪ್ರತ್ಯೇಕ ನಿಗಮ ರೂಪಿಸಿದ್ದೇ ಆದರೆ, ಅವುಗಳ ನಿರ್ವಹಣೆಯಲ್ಲಿ ವೃತ್ತಿಪರತೆ ಹೆಚ್ಚಲಿದೆ. ಈ ಘಟಕಗಳಲ್ಲಿ ನಿರ್ವಹಣೆ ವೇಳೆ ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳುವುದು ಸುಲಭವಾಗಲಿದೆ. ಈ ಘಟಕಗಳಲ್ಲಿ ತಯಾರಾಗುವ ಕಾಂಪೋಸ್ಟ್ಗಳಿಗೆ ಉತ್ತಮ ಮಾರುಕಟ್ಟೆ ಕಂಡುಕೊಳ್ಳಲು ಸಾಧ್ಯವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು</strong>: ರಾಜ್ಯ ಸರ್ಕಾರವು ರಚಿಸಲಿರುವ ಹೊಸ ನಿಗಮಗಳ ಪಟ್ಟಿಗೆ ಮತ್ತೊಂದು ನಿಗಮ ಸೇರ್ಪಡೆಯಾಗುವ ಸಾಧ್ಯತೆ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಏಳು ಕಸ ಸಂಸ್ಕರಣಾ ಘಟಕಗಳ ನಿರ್ವಹಣೆಗೆ ಪ್ರತ್ಯೇಕ ನಿಗಮವನ್ನು ಸ್ಥಾಪಿಸುವ ಕುರಿತು ಬಿಬಿಎಂಪಿ ಪ್ರಸ್ತಾವ ಸಿದ್ಧಪಡಿಸುತ್ತಿದೆ.</p>.<p>ಹಸಿಕಸದಿಂದ ಸಾವಯವ ಗೊಬ್ಬರ ತಯಾರಿಸುವ ಉದ್ದೇಶದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಏಳು ಕಡೆ ಕಸ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆ. ಈ ಘಟಕಗಳು ನಿತ್ಯ 2,300 ಟನ್ಗಳಷ್ಟು ಕಸವನ್ನು ಸಂಸ್ಕರಣೆಗೆ ಒಳಪಡಿಸುವ ಸಾಮರ್ಥ್ಯ ಹೊಂದಿವೆ. ಆದರೆ, ಇವುಗಳಲ್ಲಿ ನಿತ್ಯ 1000 ಟನ್ಗಳಷ್ಟು ಕಸ ಮಾತ್ರ ಸಂಸ್ಕರಣೆಯಾಗುತ್ತಿದೆ. ಈ ಘಟಕಗಳಲ್ಲಿ ಉತ್ಪಾದನೆಯಾಗುವ ಕಾಂಪೋಸ್ಟ್ಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಂಡುಕೊಳ್ಳುವಲ್ಲೂ ಬಿಬಿಎಂಪಿ ಯಶಸ್ವಿಯಾಗಿಲ್ಲ.</p>.<p>ಸ್ಥಳೀಯರ ಪ್ರತಿರೋಧದಿಂದಾಗಿ ಕೆಲವು ಘಟಕಗಳನ್ನು ಪದೇ ಪದೇ ಸ್ಥಗಿತಗೊಳಿಸಬೇಕಾದ ಸ್ಥಿತಿ ಇದೆ. ಘಟಕಗಳ ಉಪಉತ್ಪನ್ನವಾದ 16 ಮಿ.ಮಿ ದಪ್ಪದ ಹಾಗೂ 35 ಮಿ.ಮೀ ದಪ್ಪದ ಸಾವಯವ ಗೊಬ್ಬರವನ್ನುದಾಸ್ತಾನು ಇಡುವುದಕ್ಕೂ ಬಿಬಿಎಂಪಿ ಸಮಸ್ಯೆ ಎದುರಿಸುತ್ತಿದೆ. ಇವುಗಳನ್ನು ರೈತರಿಗೆ ಉಚಿತವಾಗಿ ನೀಡುತ್ತಿದೆ.</p>.<p>‘ಬಿಬಿಎಂಪಿಯ ಕಸ ಸಂಸ್ಕರಣೆ ಘಟಕಗಳ ನಿರ್ವಹಣೆಗೆ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಈ ಕುರಿತು ನಾವು ರೂಪರೇಷೆ ಸಿದ್ಧಪಡಿಸುತ್ತಿದ್ದೇವೆ. ಶೀಘ್ರವೇ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುತ್ತೇವೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಸ ಸಂಸ್ಕರಣಾ ಘಟಕಕ್ಕೆ ಪ್ರತ್ಯೇಕ ನಿಗಮ ರೂಪಿಸಿದ್ದೇ ಆದರೆ, ಅವುಗಳ ನಿರ್ವಹಣೆಯಲ್ಲಿ ವೃತ್ತಿಪರತೆ ಹೆಚ್ಚಲಿದೆ. ಈ ಘಟಕಗಳಲ್ಲಿ ನಿರ್ವಹಣೆ ವೇಳೆ ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳುವುದು ಸುಲಭವಾಗಲಿದೆ. ಈ ಘಟಕಗಳಲ್ಲಿ ತಯಾರಾಗುವ ಕಾಂಪೋಸ್ಟ್ಗಳಿಗೆ ಉತ್ತಮ ಮಾರುಕಟ್ಟೆ ಕಂಡುಕೊಳ್ಳಲು ಸಾಧ್ಯವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>