<p>ಬೆಂಗಳೂರು: ‘ಕಾಂಗ್ರೆಸ್ ಪಕ್ಷದಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಿ, ಪಕ್ಷವನ್ನು ಉಳಿಸಬೇಕು’ ಎಂದು ಸಮಾನ ಮನಸ್ಕರ ಸಭೆಯಲ್ಲಿ ಆಗ್ರಹಿಸಲಾಯಿತು.</p>.<p>ರಾಜಾಜಿನಗರ ವಿಧಾನಸಭಾ ಕ್ಷೇತ್ರದ ರಾಮಮಂದಿರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಮಾನ ಮನಸ್ಕರ ಸಭೆ ನಡೆಯಿತು.</p>.<p>ಮಾಜಿ ಉಪ ಮೇಯರ್ ಬಿ.ಎಸ್. ಪುಟ್ಟರಾಜು ಮಾತನಾಡಿ, ‘ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಎಂಬುದು ಆಗ್ರಹ. ಕಾರ್ಯಕರ್ತರ ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ತೀರ್ಮಾನ ಕೈಗೊಳ್ಳಲಾಗುವುದು ’ ಎಂದರು.</p>.<p>‘ಇನ್ನು ಒಂದು ವಾರ ಕಾಲ ಕಾರ್ಯಕರ್ತರು ಮತ್ತು ಜನರು ಅಭಿಪ್ರಾಯ ತಿಳಿಸಿ.ನಿಮ್ಮ ಅಭಿಪ್ರಾಯದಂತೆ ನಡೆಯುತ್ತೇವೆ’ ಎಂದು ಹೇಳಿದರು.</p>.<p>ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಮನೋಹರ್, ರಘುವೀರ್ ಎಸ್. ಗೌಡ, ಬಿಬಿಎಂಪಿ ಮಾಜಿ ಸದಸ್ಯರಾದ ಜಿ.ಕೃಷ್ಣಮೂರ್ತಿ, ಎಂ.ಬಿ.ಮೋಹನ್ ಕುಮಾರ್, ವಿಜಯಕುಮಾರ್, ಮುಖಂಡರಾದ ರಾಕೇಶ್, ಸುಧಾಕರ್ ಅವರು ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕಾಂಗ್ರೆಸ್ ಪಕ್ಷದಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಿ, ಪಕ್ಷವನ್ನು ಉಳಿಸಬೇಕು’ ಎಂದು ಸಮಾನ ಮನಸ್ಕರ ಸಭೆಯಲ್ಲಿ ಆಗ್ರಹಿಸಲಾಯಿತು.</p>.<p>ರಾಜಾಜಿನಗರ ವಿಧಾನಸಭಾ ಕ್ಷೇತ್ರದ ರಾಮಮಂದಿರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಮಾನ ಮನಸ್ಕರ ಸಭೆ ನಡೆಯಿತು.</p>.<p>ಮಾಜಿ ಉಪ ಮೇಯರ್ ಬಿ.ಎಸ್. ಪುಟ್ಟರಾಜು ಮಾತನಾಡಿ, ‘ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಎಂಬುದು ಆಗ್ರಹ. ಕಾರ್ಯಕರ್ತರ ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ತೀರ್ಮಾನ ಕೈಗೊಳ್ಳಲಾಗುವುದು ’ ಎಂದರು.</p>.<p>‘ಇನ್ನು ಒಂದು ವಾರ ಕಾಲ ಕಾರ್ಯಕರ್ತರು ಮತ್ತು ಜನರು ಅಭಿಪ್ರಾಯ ತಿಳಿಸಿ.ನಿಮ್ಮ ಅಭಿಪ್ರಾಯದಂತೆ ನಡೆಯುತ್ತೇವೆ’ ಎಂದು ಹೇಳಿದರು.</p>.<p>ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಮನೋಹರ್, ರಘುವೀರ್ ಎಸ್. ಗೌಡ, ಬಿಬಿಎಂಪಿ ಮಾಜಿ ಸದಸ್ಯರಾದ ಜಿ.ಕೃಷ್ಣಮೂರ್ತಿ, ಎಂ.ಬಿ.ಮೋಹನ್ ಕುಮಾರ್, ವಿಜಯಕುಮಾರ್, ಮುಖಂಡರಾದ ರಾಕೇಶ್, ಸುಧಾಕರ್ ಅವರು ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>