‘ಉಮಾದೇವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರಕಾರ ದಿನಗೂಲಿ ನೌಕರರನ್ನು ಕಾಯಂಗೊಳಿಸಲು ಅವಕಾಶ ಇಲ್ಲ. ಆದರೂ, ಈ ನೌಕರರನ್ನು ಕಾಯಂಗೊಳಿಸುವುದಾಗಿ ಸುಳ್ಳು ಹೇಳಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ. ಲಂಚ ಕೊಡಲು ಹಣ ಇಲ್ಲ ಎಂದು ಕೈಚೆಲ್ಲಿರುವ ಕಾರ್ಮಿಕರಿಗೆ, ಬಿಡುಗಡೆ ಮಾಡಲಾದ ಹಿಂಬಾಕಿ ಮೊತ್ತವನ್ನೇ ಲಂಚವಾಗಿ ನೀಡುವಂತೆ ಒತ್ತಡ ಹೇರುತ್ತಿದ್ದಾರೆ’ ದೂರಿದರು.