ಬೆಂಗಳೂರು: ನೋಂದಣಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಆರೋಪದ ಮೇಲೆ ನಗರದ ರಾಜರಾಜೇಶ್ವರಿನಗರ ಉಪ ನೋಂದಣಿ ಅಧಿಕಾರಿಗಳ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಸಂಜೆ ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ.
ಕಚೇರಿಯ ಒಳಗೆ ಶೋದ ನಡೆಯುತ್ತಿದೆ. ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.