‘ಕೆಲವರು ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿದಿದ್ದರೆ, ಇನ್ನುಳಿದ ನ್ಯಾಯಮೂರ್ತಿಗಳು ಶ್ರೀಮಠದ ಶಿಷ್ಯ-ಭಕ್ತರು ಎಂಬ ಕಾರಣಕ್ಕೆ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ’ ಎಂದರು. ‘ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ವಿರುದ್ಧ ಪ್ರತಿವಾದಿಗಳು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮತ್ತು ರಾಷ್ಟ್ರಪತಿಯವರಿಗೆ ದೂರು ನೀಡಿದ್ದರು’ ಎಂದೂ ಅವರು ಸ್ಮರಿಸಿದ್ದಾರೆ.