ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ವಿಧಾನಸೌಧದ ಎದುರು ದಂಪತಿ ಆತ್ಮಹತ್ಯೆಗೆ ಯತ್ನ

Published 10 ಜನವರಿ 2024, 11:00 IST
Last Updated 10 ಜನವರಿ 2024, 11:00 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧದ ಎದುರು ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸೀಮೆಎಣ್ಣೆ ಸುರಿದುಕೊಳ್ಳುತ್ತಿದ್ದ ದಂಪತಿ ಶಾಯಿಸ್ತಾ ಬಾನು ಹಾಗೂ ಮಹಮ್ಮದ್ ಮುನಾಯಿದ್ ಅವರನ್ನು ಸ್ಥಳದಲ್ಲಿದ್ದ ಸ್ಥಳೀಯರು ಹಾಗೂ ಪೊಲೀಸರು ತಡೆದು ರಕ್ಷಿಸಿದರು. ದಂಪತಿ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆ.ಜೆ.ನಗರದ ಶಾಯಿಸ್ತಾ ಹಾಗೂ ಮಹಮ್ಮದ್‌ ಮನಾಯಿದ್‌ ಬ್ಯಾಂಕ್‌ನಿಂದ ಸಾಲ ಪಡೆದಿದ್ದರು. ಸಾಲ ಪಾವತಿಸದ ಕಾರಣಕ್ಕೆ ಬ್ಯಾಂಕ್​ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ದಂಪತಿ ತಿಳಿಸಿದರು. ‘ನಮಗೆ ನ್ಯಾಯ ಬೇಕು’ ಎಂದು ದಂಪತಿ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT