<p><strong>ಬೆಂಗಳೂರು:</strong> ‘ಸಾಲಗಾರರ ಕಾಟದಿಂದ ಬೇಸತ್ತಿದ್ದರು’ ಎನ್ನಲಾದ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ‘ಹೊಸಹಳ್ಳಿ ನಿವಾಸಿಧರ್ಮರಾಜ್ (55) ಹಾಗೂ ಅವರ ಪತ್ನಿ ಭಾಗ್ಯಮ್ಮ (50) ಆತ್ಮಹತ್ಯೆ ಮಾಡಿಕೊಂಡವರು.</p>.<p>‘ನಮಗೆ ಸಾಲ ಕೊಟ್ಟಿದ್ದವರು ಅದನ್ನು ವಾಪಸು ನೀಡುವಂತೆ ನಿತ್ಯವೂ ಪೀಡಿಸುತ್ತಿದ್ದಾರೆ. ಜೀವ ಬೆದರಿಕೆ ಸಹ ಹಾಕುತ್ತಿದ್ದಾರೆ. ಅವರ ಕಿರುಕುಳವೇ ನಮ್ಮ ಸಾವಿಗೆ ಕಾರಣ’ ಎಂದು ದಂಪತಿ ಬರೆದಿದ್ದಾರೆ ಎನ್ನಲಾದ ಮರಣಪತ್ರ ಮನೆಯಲ್ಲಿ ಸಿಕ್ಕಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಪುತ್ರ, ಸೊಸೆ ಹಾಗೂ ಮೊಮ್ಮಕ್ಕಳ ಜೊತೆ ಧರ್ಮರಾಜ್ ದಂಪತಿ ವಾಸವಿದ್ದರು. ಧರ್ಮರಾಜ್ ಅವರು ನಗರದ ಮೂರು ಕಡೆ ಬೇಕರಿಗಳನ್ನು ನಡೆಸುತ್ತಿದ್ದರು. ಮಗ ಸಹ ಬೇಕರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.’</p>.<p>‘ಶಾಲೆಗೆ ರಜೆ ಇದ್ದಿದ್ದರಿಂದ ಸೊಸೆ ಮತ್ತು ಮೊಮ್ಮಕ್ಕಳು ಇತ್ತೀಚೆಗೆ ಊರಿಗೆ ಹೋಗಿದ್ದಾರೆ. ಗುರುವಾರ ಮಗ ಸಹ ಬೇಕರಿಗೆ ಹೋಗಿದ್ದರು.<br />ಇದೇ ವೇಳೆ ದಂಪತಿ ಮಾತ್ರ ಮನೆಯಲ್ಲಿದ್ದರು. ರಾತ್ರಿ ಮನೆಯ ಕೊಠಡಿಯಲ್ಲೇ ದಂಪತಿ ನೇಣು ಹಾಕಿಕೊಂಡಿದ್ದರು. ರಾತ್ರಿ 12.30ರ ಸುಮಾರಿಗೆ ಮಗ ಮನೆಗೆ ಬಂದಾಗಲೇ ವಿಷಯ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>ಕೋಟ್ಯಂತರ ರೂಪಾಯಿ ಸಾಲ: ‘ಧರ್ಮರಾಜ್ ಅವರು ₹ 2 ಕೋಟಿಗೂ ಹೆಚ್ಚು ಸಾಲ ಮಾಡಿರುವ ಮಾಹಿತಿ ಇದೆ. ಅದರಲ್ಲಿ ಸ್ವಲ್ಪ ಹಣವನ್ನು<br />ಅವರು ತೀರಿಸಿದ್ದರು. ಅಷ್ಟಾದರೂ ಸಾಲಗಾರರು ಹಣ ನೀಡುವಂತೆ ಪೀಡಿಸುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾಲಗಾರರ ಕಾಟದಿಂದ ಬೇಸತ್ತಿದ್ದರು’ ಎನ್ನಲಾದ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ‘ಹೊಸಹಳ್ಳಿ ನಿವಾಸಿಧರ್ಮರಾಜ್ (55) ಹಾಗೂ ಅವರ ಪತ್ನಿ ಭಾಗ್ಯಮ್ಮ (50) ಆತ್ಮಹತ್ಯೆ ಮಾಡಿಕೊಂಡವರು.</p>.<p>‘ನಮಗೆ ಸಾಲ ಕೊಟ್ಟಿದ್ದವರು ಅದನ್ನು ವಾಪಸು ನೀಡುವಂತೆ ನಿತ್ಯವೂ ಪೀಡಿಸುತ್ತಿದ್ದಾರೆ. ಜೀವ ಬೆದರಿಕೆ ಸಹ ಹಾಕುತ್ತಿದ್ದಾರೆ. ಅವರ ಕಿರುಕುಳವೇ ನಮ್ಮ ಸಾವಿಗೆ ಕಾರಣ’ ಎಂದು ದಂಪತಿ ಬರೆದಿದ್ದಾರೆ ಎನ್ನಲಾದ ಮರಣಪತ್ರ ಮನೆಯಲ್ಲಿ ಸಿಕ್ಕಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಪುತ್ರ, ಸೊಸೆ ಹಾಗೂ ಮೊಮ್ಮಕ್ಕಳ ಜೊತೆ ಧರ್ಮರಾಜ್ ದಂಪತಿ ವಾಸವಿದ್ದರು. ಧರ್ಮರಾಜ್ ಅವರು ನಗರದ ಮೂರು ಕಡೆ ಬೇಕರಿಗಳನ್ನು ನಡೆಸುತ್ತಿದ್ದರು. ಮಗ ಸಹ ಬೇಕರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.’</p>.<p>‘ಶಾಲೆಗೆ ರಜೆ ಇದ್ದಿದ್ದರಿಂದ ಸೊಸೆ ಮತ್ತು ಮೊಮ್ಮಕ್ಕಳು ಇತ್ತೀಚೆಗೆ ಊರಿಗೆ ಹೋಗಿದ್ದಾರೆ. ಗುರುವಾರ ಮಗ ಸಹ ಬೇಕರಿಗೆ ಹೋಗಿದ್ದರು.<br />ಇದೇ ವೇಳೆ ದಂಪತಿ ಮಾತ್ರ ಮನೆಯಲ್ಲಿದ್ದರು. ರಾತ್ರಿ ಮನೆಯ ಕೊಠಡಿಯಲ್ಲೇ ದಂಪತಿ ನೇಣು ಹಾಕಿಕೊಂಡಿದ್ದರು. ರಾತ್ರಿ 12.30ರ ಸುಮಾರಿಗೆ ಮಗ ಮನೆಗೆ ಬಂದಾಗಲೇ ವಿಷಯ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>ಕೋಟ್ಯಂತರ ರೂಪಾಯಿ ಸಾಲ: ‘ಧರ್ಮರಾಜ್ ಅವರು ₹ 2 ಕೋಟಿಗೂ ಹೆಚ್ಚು ಸಾಲ ಮಾಡಿರುವ ಮಾಹಿತಿ ಇದೆ. ಅದರಲ್ಲಿ ಸ್ವಲ್ಪ ಹಣವನ್ನು<br />ಅವರು ತೀರಿಸಿದ್ದರು. ಅಷ್ಟಾದರೂ ಸಾಲಗಾರರು ಹಣ ನೀಡುವಂತೆ ಪೀಡಿಸುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>