<p><strong>ಚಂದಾಪುರ(ಆನೇಕಲ್):</strong> ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. </p><p>ತಾಲ್ಲೂಕಿನ ಹೀಲಲಿಗೆ ಗ್ರಾಮದ ಬಾಡಿಗೆ ಮನೆಯಲ್ಲಿ ನೆಲಸಿದ್ದ ಒಡಿಶಾ ಮೂಲದ ಕಾರ್ಮಿಕ ದಂಪತಿ ದೀಪಾಂತ ಸಬರ (31) ಹಾಗೂ ಮಂಜುಳಾ (27) ಶುಕ್ರವಾರ ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.</p><p>ಬೊಮ್ಮಸಂದ್ರ ಖಾಸಗಿ ಕಂಪನಿಯಲ್ಲಿ ದಂಪತಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿತ್ತು. ಇದರಿಂದ ನೊಂದ ಮಂಜುಳಾ ಶುಕ್ರವಾರ ತಡರಾತ್ರಿ 1ರ ವೇಳೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಇದನ್ನು ಕಂಡ ಪತಿ ದೀಪಾಂತ ಕೂಡ ನೇಣಿಗೆ ಶರಣಾಗಿದ್ದಾರೆ. ಈ ಮಾಹಿತಿಯನ್ನು ಡೇತ್ ನೋಟ್ನಲ್ಲಿ ದೀಪಾಂತ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ.</p>
<p><strong>ಚಂದಾಪುರ(ಆನೇಕಲ್):</strong> ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. </p><p>ತಾಲ್ಲೂಕಿನ ಹೀಲಲಿಗೆ ಗ್ರಾಮದ ಬಾಡಿಗೆ ಮನೆಯಲ್ಲಿ ನೆಲಸಿದ್ದ ಒಡಿಶಾ ಮೂಲದ ಕಾರ್ಮಿಕ ದಂಪತಿ ದೀಪಾಂತ ಸಬರ (31) ಹಾಗೂ ಮಂಜುಳಾ (27) ಶುಕ್ರವಾರ ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.</p><p>ಬೊಮ್ಮಸಂದ್ರ ಖಾಸಗಿ ಕಂಪನಿಯಲ್ಲಿ ದಂಪತಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿತ್ತು. ಇದರಿಂದ ನೊಂದ ಮಂಜುಳಾ ಶುಕ್ರವಾರ ತಡರಾತ್ರಿ 1ರ ವೇಳೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಇದನ್ನು ಕಂಡ ಪತಿ ದೀಪಾಂತ ಕೂಡ ನೇಣಿಗೆ ಶರಣಾಗಿದ್ದಾರೆ. ಈ ಮಾಹಿತಿಯನ್ನು ಡೇತ್ ನೋಟ್ನಲ್ಲಿ ದೀಪಾಂತ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ.</p>