ಸರ್ಕಾರ ಸಲ್ಲಿಸಿರುವ ದಾಖಲೆ ಪರಿಶೀಲಿಸಿದರೆ ಯಾವೊಬ್ಬ ತಜ್ಞರ ಅಭಿಪ್ರಾಯವನ್ನೂ ಪಡೆದಂತಿಲ್ಲ. ಯೋಜನೆಯನ್ನು ಇನ್ನಷ್ಟು ದಿನ ಎಳೆಯುವ ಉದ್ದೇಶವನ್ನು ಸರ್ಕಾರ ಹೊಂದಿದಂತಿದೆ ಎಂದು ಪೀಠ ಅಭಿಪ್ರಾಯಪಟ್ಟಿತು.ಟೆಂಡರ್ ಪ್ರಕ್ರಿಯೆ ರದ್ದುಪಡಿಸಿ ಆಂಬುಲೆನ್ಸ್ ನಿಯಂತ್ರಣ ಕೇಂದ್ರ ತೆರೆಯುವ ಸಂಬಂಧ ಪರಿಶೀಲನೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಹಿಂದಿನ ವಿಚಾರಣೆ ವೇಳೆ ಸರ್ಕಾರ ಮಾಹಿತಿ ನೀಡಿತ್ತು.