ವಿಧಾನಪರಿಷತ್ನಲ್ಲಿ ಮಂಗಳವಾರ ಕಾಂಗ್ರೆಸ್ಸಿನ ಪಿ.ಆರ್. ರಮೇಶ, ಜೆಡಿಎಸ್ ಸದಸ್ಯರಾದ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ, ಶ್ರೀಕಂಠಯ್ಯ ಮತ್ತಿತರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಸಾಲಿನ ನೇಮಕಾತಿಯನ್ನು ಹೈಕೋರ್ಟ್ ರದ್ದುಪಡಿಸಿದ್ದು, ಅದೇ ಆದೇಶವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿಹಿಡಿದೆ. ಹುದ್ದೆಗಳಿಗೆ ನೇಮಕಗೊಂಡ ಬಳಿಕ ಪಟ್ಟಿ ರದ್ದುಗೊಂಡಿದ್ದರಿಂದ ಕೆಲಸದಿಂದ ವಂಚಿತರಾದವರ ಬಗ್ಗೆ ಸರ್ಕಾರಕ್ಕೂ ಅನುಕಂಪವಿದೆ’ ಎಂದರು.