<p><strong>ಬೆಂಗಳೂರು</strong>: ‘ಬೇಗೂರು ಕೆರೆ ಮತ್ತು ಸುಬ್ರಹ್ಮಣ್ಯಪುರ ಕೆರೆಗಳ ಒತ್ತುವರಿಯನ್ನು ಆರು ವಾರಗಳಲ್ಲಿ ತೆರವುಗೊಳಿಸಿ ವರದಿ ಸಲ್ಲಿಸಿ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಅರಣ್ಯ ಇಲಾಖೆಯ ನಿಯೋಜಿತ ಅಧಿಕಾರಿಗಳಿಗೆ ಹೈಕೋರ್ಟ್ ಆದೇಶಿಸಿದೆ.</p>.<p>ಕೆರೆ ಒತ್ತುವರಿ ತೆರವುಗೊಳಿಸಲು ಕೋರಿ ‘ಸಿಟಿಜನ್ಸ್ ಆಕ್ಷನ್ ಗ್ರೂಪ್’ ಕಾರ್ಯದರ್ಶಿ ನೊಮಿತಾ ಚಾಂಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.</p>.<p>’ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಯ್ದೆ-2014ರ ಕಲಂ 22ರ ಅನುಸಾರ ಬೇಗೂರು ಮತ್ತು<br />ಸುಬ್ರಹ್ಮಣ್ಯಪುರ ಕೆರೆ ಪ್ರದೇಶದಲ್ಲಿನ ಅನಧಿಕೃತ ಒತ್ತುವರಿ ಮತ್ತು<br />ಒತ್ತುವರಿದಾರರನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.<br />ಆ ಕುರಿತು ವರದಿಯನ್ನು ಜುಲೈ 14ರೊಳಗೆ ಸಲ್ಲಿಸಬೇಕು’ ಎಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಆದೇಶಿಸಿದೆ.</p>.<p>‘ಒಂದೊಮ್ಮೆ ತೆರವು ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಸಹಕಾರ ಕೋರಿದರೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಬೇಕು’ ಎಂದು ನಿರ್ದೇಶಿಸಿರುವ ನ್ಯಾಯಪೀಠ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ.</p>.<p>ಬೇಗೂರು ಮತ್ತು ಸುಬ್ರಹ್ಮಣ್ಯಪುರ ಕೆರೆ ಪ್ರದೇಶದಲ್ಲಿ ಆಗಿರುವ ಒತ್ತುವರಿಯ ಅಂಕಿ-ಅಂಶಗಳ ಕುರಿತು 2022ರ ಏಪ್ರಿಲ್ 11ರಂದು ಹೈಕೋರ್ಟ್ಗೆ ಸಲ್ಲಿಸಿದ್ದ ಅನುಪಾಲನಾ ವರದಿಯಲ್ಲಿ ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯನ್ನು ವಿಚಾರಣೆ ವೇಳೆ<br />ಉಲ್ಲೇಖಿಸಲಾಯಿತು.</p>.<p class="Subhead">ವರದಿಯ ಅಂಶಗಳು: ‘ಸುಬ್ರಹ್ಮಣ್ಯಪುರ ಕೆರೆ ಪ್ರದೇಶದಲ್ಲಿ 1 ಎಕರೆ 7 ಗುಂಟೆ ಜಾಗವನ್ನು ಸುಬ್ರಹ್ಮಣ್ಯಪುರ ಮತ್ತು ಉತ್ತರಹಳ್ಳಿ ನಡುವಿನ ಲಿಂಕ್ ರಸ್ತೆಗೆ ಬಳಕೆ ಮಾಡಿಕೊಳ್ಳಲಾಗಿದೆ.<br />ಈ ರಸ್ತೆಯನ್ನು ಸದ್ಯ<br />ಸಾರ್ವಜನಿಕರು ಬಳಕೆ ಮಾಡುತ್ತಿದ್ದಾರೆ. 3 ಎಕರೆ 39 ಗುಂಟೆ ಜಾಗವನ್ನು ಉತ್ತರಹಳ್ಳಿಯ ಭುವನೇಶ್ವರಿ ನಗರ ಕೊಳಚೆ ಪ್ರದೇಶದ ನಿವಾಸಿಗಳು ಒತ್ತುವರಿ ಮಾಡಿದ್ದಾರೆ. ಇದು ಘೋಷಿತ ಕೊಳಚೆ ಪ್ರದೇಶವಾಗಿರದ ಹಿನ್ನೆಲೆಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯು ತೆರವು ಕಾರ್ಯಾಚರಣೆ ಕೈಗೊಳ್ಳಬೇಕಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.<br />‘ಬೇಗೂರು ಕೆರೆ ಪ್ರದೇಶದ ಪೈಕಿ 6 ಎಕರೆ 37 ಗುಂಟೆ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದಾರೆ. ಅದರಲ್ಲಿ 1 ಎಕರೆ 36 ಗುಂಟೆಯನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಉಳಿದ ಐದು ಎಕರೆ ಒಂದು ಗುಂಟೆ ಜಾಗದ ಒತ್ತುವರಿ ತೆರವುಗೊಳಿಸಬೇಕಿದೆ. ನೈಸ್ ರಸ್ತೆ ಮತ್ತು ಸಾರ್ವಜನಿಕ ರಸ್ತೆಗಾಗಿ 3 ಎಕರೆ 26 ಗುಂಟೆ ಜಾಗವನ್ನು ಸರ್ಕಾರವೇ ಒತ್ತುವರಿ ಮಾಡಿದೆ. ಇನ್ನೂ 11 ಗುಂಟೆ ಜಾಗವನ್ನು ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಕೆರೆಯ ನಡುವಿನಲ್ಲಿ ದ್ವೀಪವನ್ನು ಅಭಿವೃದ್ಧಿಪಡಿಸಲು ಬಳಸಿಕೊಳ್ಳಲಾಗಿದೆ’ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೇಗೂರು ಕೆರೆ ಮತ್ತು ಸುಬ್ರಹ್ಮಣ್ಯಪುರ ಕೆರೆಗಳ ಒತ್ತುವರಿಯನ್ನು ಆರು ವಾರಗಳಲ್ಲಿ ತೆರವುಗೊಳಿಸಿ ವರದಿ ಸಲ್ಲಿಸಿ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಅರಣ್ಯ ಇಲಾಖೆಯ ನಿಯೋಜಿತ ಅಧಿಕಾರಿಗಳಿಗೆ ಹೈಕೋರ್ಟ್ ಆದೇಶಿಸಿದೆ.</p>.<p>ಕೆರೆ ಒತ್ತುವರಿ ತೆರವುಗೊಳಿಸಲು ಕೋರಿ ‘ಸಿಟಿಜನ್ಸ್ ಆಕ್ಷನ್ ಗ್ರೂಪ್’ ಕಾರ್ಯದರ್ಶಿ ನೊಮಿತಾ ಚಾಂಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.</p>.<p>’ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಯ್ದೆ-2014ರ ಕಲಂ 22ರ ಅನುಸಾರ ಬೇಗೂರು ಮತ್ತು<br />ಸುಬ್ರಹ್ಮಣ್ಯಪುರ ಕೆರೆ ಪ್ರದೇಶದಲ್ಲಿನ ಅನಧಿಕೃತ ಒತ್ತುವರಿ ಮತ್ತು<br />ಒತ್ತುವರಿದಾರರನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.<br />ಆ ಕುರಿತು ವರದಿಯನ್ನು ಜುಲೈ 14ರೊಳಗೆ ಸಲ್ಲಿಸಬೇಕು’ ಎಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಆದೇಶಿಸಿದೆ.</p>.<p>‘ಒಂದೊಮ್ಮೆ ತೆರವು ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಸಹಕಾರ ಕೋರಿದರೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಬೇಕು’ ಎಂದು ನಿರ್ದೇಶಿಸಿರುವ ನ್ಯಾಯಪೀಠ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿದೆ.</p>.<p>ಬೇಗೂರು ಮತ್ತು ಸುಬ್ರಹ್ಮಣ್ಯಪುರ ಕೆರೆ ಪ್ರದೇಶದಲ್ಲಿ ಆಗಿರುವ ಒತ್ತುವರಿಯ ಅಂಕಿ-ಅಂಶಗಳ ಕುರಿತು 2022ರ ಏಪ್ರಿಲ್ 11ರಂದು ಹೈಕೋರ್ಟ್ಗೆ ಸಲ್ಲಿಸಿದ್ದ ಅನುಪಾಲನಾ ವರದಿಯಲ್ಲಿ ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯನ್ನು ವಿಚಾರಣೆ ವೇಳೆ<br />ಉಲ್ಲೇಖಿಸಲಾಯಿತು.</p>.<p class="Subhead">ವರದಿಯ ಅಂಶಗಳು: ‘ಸುಬ್ರಹ್ಮಣ್ಯಪುರ ಕೆರೆ ಪ್ರದೇಶದಲ್ಲಿ 1 ಎಕರೆ 7 ಗುಂಟೆ ಜಾಗವನ್ನು ಸುಬ್ರಹ್ಮಣ್ಯಪುರ ಮತ್ತು ಉತ್ತರಹಳ್ಳಿ ನಡುವಿನ ಲಿಂಕ್ ರಸ್ತೆಗೆ ಬಳಕೆ ಮಾಡಿಕೊಳ್ಳಲಾಗಿದೆ.<br />ಈ ರಸ್ತೆಯನ್ನು ಸದ್ಯ<br />ಸಾರ್ವಜನಿಕರು ಬಳಕೆ ಮಾಡುತ್ತಿದ್ದಾರೆ. 3 ಎಕರೆ 39 ಗುಂಟೆ ಜಾಗವನ್ನು ಉತ್ತರಹಳ್ಳಿಯ ಭುವನೇಶ್ವರಿ ನಗರ ಕೊಳಚೆ ಪ್ರದೇಶದ ನಿವಾಸಿಗಳು ಒತ್ತುವರಿ ಮಾಡಿದ್ದಾರೆ. ಇದು ಘೋಷಿತ ಕೊಳಚೆ ಪ್ರದೇಶವಾಗಿರದ ಹಿನ್ನೆಲೆಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯು ತೆರವು ಕಾರ್ಯಾಚರಣೆ ಕೈಗೊಳ್ಳಬೇಕಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.<br />‘ಬೇಗೂರು ಕೆರೆ ಪ್ರದೇಶದ ಪೈಕಿ 6 ಎಕರೆ 37 ಗುಂಟೆ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದಾರೆ. ಅದರಲ್ಲಿ 1 ಎಕರೆ 36 ಗುಂಟೆಯನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಉಳಿದ ಐದು ಎಕರೆ ಒಂದು ಗುಂಟೆ ಜಾಗದ ಒತ್ತುವರಿ ತೆರವುಗೊಳಿಸಬೇಕಿದೆ. ನೈಸ್ ರಸ್ತೆ ಮತ್ತು ಸಾರ್ವಜನಿಕ ರಸ್ತೆಗಾಗಿ 3 ಎಕರೆ 26 ಗುಂಟೆ ಜಾಗವನ್ನು ಸರ್ಕಾರವೇ ಒತ್ತುವರಿ ಮಾಡಿದೆ. ಇನ್ನೂ 11 ಗುಂಟೆ ಜಾಗವನ್ನು ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಕೆರೆಯ ನಡುವಿನಲ್ಲಿ ದ್ವೀಪವನ್ನು ಅಭಿವೃದ್ಧಿಪಡಿಸಲು ಬಳಸಿಕೊಳ್ಳಲಾಗಿದೆ’ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>