<p><strong>ಬೆಂಗಳೂರು: </strong>ಸಂಬಂಧಿಕರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪದಡಿ ಅಜಿತ್ (26) ಎಂಬುವರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಮಾದನಾಯಕನಹಳ್ಳಿ ಬಸವೇಶ್ವರ ಬಡಾವಣೆ ನಿವಾಸಿ ಅಜಿತ್, ಜೂಜಾಡುತ್ತಿದ್ದ. ಅದಕ್ಕೆ ಅಗತ್ಯವಿದ್ದ ಹಣ ಹೊಂದಿಸಲು ಚಿನ್ನಾಭರಣ ಕದ್ದಿದ್ದ. ಈತನಿಂದ ₹ 31 ಲಕ್ಷ ಮೌಲ್ಯದ 613 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬ್ಯಾಟರಾಯನಪುರ ನಿವಾಸಿಯೊಬ್ಬರ ಸಂಬಂಧಿ ಆಗಿದ್ದ ಅಜಿತ್, ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ಸಂದರ್ಭದಲ್ಲೇ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಕದ್ದೊಯ್ದಿದ್ದ. ಅವುಗಳನ್ನು ಫೈನಾನ್ಸ್ ಕಂಪನಿಗಳಲ್ಲಿ ಗಿರವಿಗಿಟ್ಟು ಹಣ ಪಡೆದುಕೊಂಡಿದ್ದ. ಬಂದ ಹಣವನ್ನು ಜೂಜಾಟದಲ್ಲಿ ಕಳೆದುಕೊಂಡಿದ್ದ.’</p>.<p>‘ಕಳ್ಳತನ ಗಮನಕ್ಕೆ ಬರುತ್ತಿದ್ದಂತೆ ನಿವಾಸಿ ದೂರು ನೀಡಿದ್ದರು. ಅಜಿತ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದೂ ತಿಳಿಸಿದರು.</p>.<p class="Subhead"><strong>ಜೀವ ಬೆದರಿಕೆ: </strong>‘ಅಜಿತ್ ಮೇಲೆ ಅನುಮಾನಪಟ್ಟಿದ್ದ ಸಂಬಂಧಿ, ಚಿನ್ನಾಭರಣ ವಾಪಸು ನೀಡುವಂತೆ ಹೇಳಿದ್ದರು. ಆಭರಣ ನೀಡುವುದಿಲ್ಲವೆಂದು ಹೇಳಿದ್ದ ಆರೋಪಿ, ಸಂಬಂಧಿಗೆ ಜೀವ ಬೆದರಿಕೆ ಹಾಕಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಂಬಂಧಿಕರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪದಡಿ ಅಜಿತ್ (26) ಎಂಬುವರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಮಾದನಾಯಕನಹಳ್ಳಿ ಬಸವೇಶ್ವರ ಬಡಾವಣೆ ನಿವಾಸಿ ಅಜಿತ್, ಜೂಜಾಡುತ್ತಿದ್ದ. ಅದಕ್ಕೆ ಅಗತ್ಯವಿದ್ದ ಹಣ ಹೊಂದಿಸಲು ಚಿನ್ನಾಭರಣ ಕದ್ದಿದ್ದ. ಈತನಿಂದ ₹ 31 ಲಕ್ಷ ಮೌಲ್ಯದ 613 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬ್ಯಾಟರಾಯನಪುರ ನಿವಾಸಿಯೊಬ್ಬರ ಸಂಬಂಧಿ ಆಗಿದ್ದ ಅಜಿತ್, ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ಸಂದರ್ಭದಲ್ಲೇ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಕದ್ದೊಯ್ದಿದ್ದ. ಅವುಗಳನ್ನು ಫೈನಾನ್ಸ್ ಕಂಪನಿಗಳಲ್ಲಿ ಗಿರವಿಗಿಟ್ಟು ಹಣ ಪಡೆದುಕೊಂಡಿದ್ದ. ಬಂದ ಹಣವನ್ನು ಜೂಜಾಟದಲ್ಲಿ ಕಳೆದುಕೊಂಡಿದ್ದ.’</p>.<p>‘ಕಳ್ಳತನ ಗಮನಕ್ಕೆ ಬರುತ್ತಿದ್ದಂತೆ ನಿವಾಸಿ ದೂರು ನೀಡಿದ್ದರು. ಅಜಿತ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದೂ ತಿಳಿಸಿದರು.</p>.<p class="Subhead"><strong>ಜೀವ ಬೆದರಿಕೆ: </strong>‘ಅಜಿತ್ ಮೇಲೆ ಅನುಮಾನಪಟ್ಟಿದ್ದ ಸಂಬಂಧಿ, ಚಿನ್ನಾಭರಣ ವಾಪಸು ನೀಡುವಂತೆ ಹೇಳಿದ್ದರು. ಆಭರಣ ನೀಡುವುದಿಲ್ಲವೆಂದು ಹೇಳಿದ್ದ ಆರೋಪಿ, ಸಂಬಂಧಿಗೆ ಜೀವ ಬೆದರಿಕೆ ಹಾಕಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>