ಸಂಕಷ್ಟದಲ್ಲಿರುವ ನಿರಾಶ್ರಿತರು ಅಥವಾ ಅಗತ್ಯವಿರುವರಿಗೆ ಊಟದ ವ್ಯವಸ್ಥೆ ಮಾಡಲು ಹಲವಾರು ಸರ್ಕಾರೇತರ ಸಂಸ್ಥೆಗಳು ಮನವಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಆಹಾರ ಅಥವಾ ಇನ್ನಿತರೆ ಅಗತ್ಯ ವಸ್ತುಗಳನ್ನು ಹಂಚುವ ಸಂಬಂಧ ಜಂಟಿ ಆಯುಕ್ತರು (ಆರೋಗ್ಯ) ಸರ್ಫರಾಜ್ ಖಾನ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.