<p><strong>ಬೆಂಗಳೂರು: </strong>ಕೊರೊನಾ ಸೋಂಕು ತಡೆಗಾಗಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಕೆಲ ಸಾರ್ವಜನಿಕರ ವಿರೋಧದಿಂದಾಗಿ ಪೊಲೀಸರು ಲಾಠಿ ಬಿಟ್ಟು ವಾಹನ ಜಪ್ತಿಯನ್ನಷ್ಟೇ ಮಾಡುತ್ತಿದ್ದಾರೆ.</p>.<p>ನಗರದ ಕೆ.ಆರ್.ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರ ಹಾಗೂ ಹಲವು ಕಡೆ ಮಂಗಳವಾರ ಬೆಳಿಗ್ಗೆ ಖರೀದಿ ಜೋರಾಗಿತ್ತು.</p>.<p>ಬೆಳಿಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಆದರೆ, ಸೋಮವಾರ ವಾಹನಗಳಲ್ಲಿ ಮಾರುಕಟ್ಟೆಗೆ ಹೋಗುತ್ತಿದ್ದವರನ್ನು ತಡೆದು ಪೊಲೀಸರು ಲಾಠಿಯಿಂದ ಹೊಡೆದಿದ್ದರು.</p>.<p>ಆಟೊ,ಕ್ಯಾಬ್ ಚಾಲಕರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಲಾಠಿಯಿಂದ ಥಳಿಸಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಅದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, 'ಲಾಠಿಯಿಂದ ಹೊಡೆಯುವ ಅಧಿಕಾರ ನಿಮಗೆ ಕೊಟ್ಟವರು ಯಾರು?' ಎಂದು ಪ್ರಶ್ನಿಸಿದ್ದರು.</p>.<p>ಅದೇ ವಿಚಾರವಾಗಿ ಟ್ವೀಟ್ ಮಾಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, 'ಅಗತ್ಯ ವಸ್ತುಗಳನ್ನು ತರಲು ಜನರು ವಾಹನದಲ್ಲಿ ಹೋಗಬಹುದು' ಎಂದಿದ್ದರು. ಕಮಲ್ ಪಂತ್, 'ಸುಖಾಸುಮ್ಮನೇ ಬಲಪ್ರಯೋಗ ಮಾಡಬೇಡಿ' ಎಂದು ಪೊಲೀಸರಿಗೆ ಸೂಚನೆ ನೀಡಿದ್ದರು.</p>.<p>ಹೀಗಾಗಿ, ಮಂಗಳವಾರ ಲಾಠಿ ಬೀಸದೇ ಪೊಲೀಸರು ಕೆಲಸ ಮಾಡುತ್ತಿದ್ದಾರೆ.</p>.<p>ಮಾರುಕಟ್ಟೆಗೆ ಬಂದು ಹೋಗುವ ಹಾಗೂ ಪ್ರಮುಖ ರಸ್ತೆಗಳಲ್ಲಿ ಓಡಾಡುವವರನ್ನು ತಡೆದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.<br />ಸೂಕ್ತ ಕಾರಣ ನೀಡದವರ ವಾಹನಗಳನನ್ನು ಜಪ್ತಿ ಮಾಡುತ್ತಿದ್ದಾರೆ.</p>.<p>ಬೆಳಿಗ್ಗೆ 10ರ ನಂತರ ನಗರದಲ್ಲಿ ವಾಹನಗಳ ಪರಿಶೀಲನೆ ಬಿಗಿಯಾಗಿದೆ. ಪ್ರತಿಯೊಂದು ಚೆಕ್ಪೋಸ್ಟ್ಗಳಲ್ಲೂ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಸೋಂಕು ತಡೆಗಾಗಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಕೆಲ ಸಾರ್ವಜನಿಕರ ವಿರೋಧದಿಂದಾಗಿ ಪೊಲೀಸರು ಲಾಠಿ ಬಿಟ್ಟು ವಾಹನ ಜಪ್ತಿಯನ್ನಷ್ಟೇ ಮಾಡುತ್ತಿದ್ದಾರೆ.</p>.<p>ನಗರದ ಕೆ.ಆರ್.ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರ ಹಾಗೂ ಹಲವು ಕಡೆ ಮಂಗಳವಾರ ಬೆಳಿಗ್ಗೆ ಖರೀದಿ ಜೋರಾಗಿತ್ತು.</p>.<p>ಬೆಳಿಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಆದರೆ, ಸೋಮವಾರ ವಾಹನಗಳಲ್ಲಿ ಮಾರುಕಟ್ಟೆಗೆ ಹೋಗುತ್ತಿದ್ದವರನ್ನು ತಡೆದು ಪೊಲೀಸರು ಲಾಠಿಯಿಂದ ಹೊಡೆದಿದ್ದರು.</p>.<p>ಆಟೊ,ಕ್ಯಾಬ್ ಚಾಲಕರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಲಾಠಿಯಿಂದ ಥಳಿಸಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಅದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, 'ಲಾಠಿಯಿಂದ ಹೊಡೆಯುವ ಅಧಿಕಾರ ನಿಮಗೆ ಕೊಟ್ಟವರು ಯಾರು?' ಎಂದು ಪ್ರಶ್ನಿಸಿದ್ದರು.</p>.<p>ಅದೇ ವಿಚಾರವಾಗಿ ಟ್ವೀಟ್ ಮಾಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, 'ಅಗತ್ಯ ವಸ್ತುಗಳನ್ನು ತರಲು ಜನರು ವಾಹನದಲ್ಲಿ ಹೋಗಬಹುದು' ಎಂದಿದ್ದರು. ಕಮಲ್ ಪಂತ್, 'ಸುಖಾಸುಮ್ಮನೇ ಬಲಪ್ರಯೋಗ ಮಾಡಬೇಡಿ' ಎಂದು ಪೊಲೀಸರಿಗೆ ಸೂಚನೆ ನೀಡಿದ್ದರು.</p>.<p>ಹೀಗಾಗಿ, ಮಂಗಳವಾರ ಲಾಠಿ ಬೀಸದೇ ಪೊಲೀಸರು ಕೆಲಸ ಮಾಡುತ್ತಿದ್ದಾರೆ.</p>.<p>ಮಾರುಕಟ್ಟೆಗೆ ಬಂದು ಹೋಗುವ ಹಾಗೂ ಪ್ರಮುಖ ರಸ್ತೆಗಳಲ್ಲಿ ಓಡಾಡುವವರನ್ನು ತಡೆದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.<br />ಸೂಕ್ತ ಕಾರಣ ನೀಡದವರ ವಾಹನಗಳನನ್ನು ಜಪ್ತಿ ಮಾಡುತ್ತಿದ್ದಾರೆ.</p>.<p>ಬೆಳಿಗ್ಗೆ 10ರ ನಂತರ ನಗರದಲ್ಲಿ ವಾಹನಗಳ ಪರಿಶೀಲನೆ ಬಿಗಿಯಾಗಿದೆ. ಪ್ರತಿಯೊಂದು ಚೆಕ್ಪೋಸ್ಟ್ಗಳಲ್ಲೂ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>