<p><strong>ಬೆಂಗಳೂರು</strong>: ‘ನೀವು ಹೇಳುತ್ತಿರುವುದೆಲ್ಲ ಅನುಷ್ಠಾನ ಆಗಿದ್ದರೆ ನಾನು ರಾಜೀನಾಮೆ ಕೊಡಲು ಸಿದ್ಧ’ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಉದ್ದೇಶಿಸಿ ಸಚಿವ ಸಂಪುಟ ಸಭೆಯಲ್ಲಿ ಲಘು ಧಾಟಿಯಲ್ಲಿ ಹೇಳಿದರು.</p>.<p>ಕೋವಿಡ್ ನಿರ್ವಹಣೆ ಕುರಿತು ಚರ್ಚೆ ನಡೆಯುವಾಗ ಅಶ್ವತ್ಥನಾರಾಯಣ ಅವರು, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಾಹಿತಿ ನೀಡುತ್ತಿದ್ದರು.</p>.<p>ಆಗ ಮಧ್ಯ ಪ್ರವೇಶಿಸಿದ ಮಾಧುಸ್ವಾಮಿ, ‘ನೀವು ಹೇಳುತ್ತಿರುವುದೆಲ್ಲ ದಾಖಲೆ ಪತ್ರದಲ್ಲಿ ಮಾತ್ರ ಇದೆ. ಅವೆಲ್ಲ ಜಾರಿ ಆಗಿಲ್ಲ. ನೀವು ಹೇಳಿದ್ದೆಲ್ಲ ನಿಜವೇ ಆಗಿದ್ದರೆ, ರಾಜಿನಾಮೆ ಕೊಡಲು ಸಿದ್ಧ ಎಂದು ಚಟಾಕಿ ಹಾರಿಸಿದರು’ ಎಂದು ಮೂಲಗಳು ತಿಳಿಸಿವೆ.</p>.<p>‘ರಾಜೀನಾಮೆ’ ಪದ ಕಿವಿಗೆ ಬೀಳುತ್ತಿದ್ದಂತೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ‘ಮಾಧುಸ್ವಾಮಿ ಸುಮ್ಮನೆ ಇರಿ’ ಎಂದು ಹೇಳಿ ಸಮಾಧಾನಪಡಿಸಿದರು.</p>.<p>ಈಚೆಗೆ ಮುಖ್ಯಮಂತ್ರಿಯವರು ಜಿಲ್ಲಾಧಿಕಾರಿಗಳ ವಿಡಿಯೊ ಸಂವಾದ ನಡೆಸುವಾಗಲೂ, ಅಧಿಕಾರಿಗಳು ಮತ್ತು ಆರೋಗ್ಯ ಸಚಿವರ ವಿರುದ್ಧ ಮಾಧುಸ್ವಾಮಿ ಕಿಡಿಕಾರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನೀವು ಹೇಳುತ್ತಿರುವುದೆಲ್ಲ ಅನುಷ್ಠಾನ ಆಗಿದ್ದರೆ ನಾನು ರಾಜೀನಾಮೆ ಕೊಡಲು ಸಿದ್ಧ’ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಉದ್ದೇಶಿಸಿ ಸಚಿವ ಸಂಪುಟ ಸಭೆಯಲ್ಲಿ ಲಘು ಧಾಟಿಯಲ್ಲಿ ಹೇಳಿದರು.</p>.<p>ಕೋವಿಡ್ ನಿರ್ವಹಣೆ ಕುರಿತು ಚರ್ಚೆ ನಡೆಯುವಾಗ ಅಶ್ವತ್ಥನಾರಾಯಣ ಅವರು, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಾಹಿತಿ ನೀಡುತ್ತಿದ್ದರು.</p>.<p>ಆಗ ಮಧ್ಯ ಪ್ರವೇಶಿಸಿದ ಮಾಧುಸ್ವಾಮಿ, ‘ನೀವು ಹೇಳುತ್ತಿರುವುದೆಲ್ಲ ದಾಖಲೆ ಪತ್ರದಲ್ಲಿ ಮಾತ್ರ ಇದೆ. ಅವೆಲ್ಲ ಜಾರಿ ಆಗಿಲ್ಲ. ನೀವು ಹೇಳಿದ್ದೆಲ್ಲ ನಿಜವೇ ಆಗಿದ್ದರೆ, ರಾಜಿನಾಮೆ ಕೊಡಲು ಸಿದ್ಧ ಎಂದು ಚಟಾಕಿ ಹಾರಿಸಿದರು’ ಎಂದು ಮೂಲಗಳು ತಿಳಿಸಿವೆ.</p>.<p>‘ರಾಜೀನಾಮೆ’ ಪದ ಕಿವಿಗೆ ಬೀಳುತ್ತಿದ್ದಂತೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ‘ಮಾಧುಸ್ವಾಮಿ ಸುಮ್ಮನೆ ಇರಿ’ ಎಂದು ಹೇಳಿ ಸಮಾಧಾನಪಡಿಸಿದರು.</p>.<p>ಈಚೆಗೆ ಮುಖ್ಯಮಂತ್ರಿಯವರು ಜಿಲ್ಲಾಧಿಕಾರಿಗಳ ವಿಡಿಯೊ ಸಂವಾದ ನಡೆಸುವಾಗಲೂ, ಅಧಿಕಾರಿಗಳು ಮತ್ತು ಆರೋಗ್ಯ ಸಚಿವರ ವಿರುದ್ಧ ಮಾಧುಸ್ವಾಮಿ ಕಿಡಿಕಾರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>