<p><strong>ಬೆಂಗಳೂರು</strong>: ಕೋವಿಡ್ ಕಾಯಿಲೆ ಹೊಂದಿರುವ ಕೆಲವರಿಗೆ ಆರ್ಟಿ–ಪಿಸಿಆರ್ ಹಾಗೂ ರ್ಯಾಟ್ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬರುತ್ತಿರುವ ಕಾರಣ ರೋಗ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು, ಚಿಕಿತ್ಸೆ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.</p>.<p>‘ಹಲವು ಪ್ರಕರಣಗಳಲ್ಲಿ ಆರ್ಟಿ–ಪಿಸಿಆರ್ ಹಾಗೂ ವಿವಿವಿಧ ವಿಧಾನಗಳಲ್ಲಿ ಪರೀಕ್ಷೆ ಮಾಡಿಸಿದರೂ ನೆಗೆಟಿವ್ ವರದಿ ಬರುತ್ತಿದೆ. ವ್ಯಕ್ತಿಗೆ ಕೋವಿಡ್ ರೋಗ ಲಕ್ಷಣವಿದ್ದರೂ ವರದಿಯಲ್ಲಿ ನೆಗೆಟಿವ್ ಬಂದಲ್ಲಿ ಸಮಸ್ಯೆ ಸಂಕೀರ್ಣ ಸ್ವರೂಪ ಪಡೆದುಕೊಳ್ಳಲಿದೆ. ರೋಗದ ತೀವ್ರತೆ ಹೆಚ್ಚಾದ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ರೋಗ ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡುವ (ಸಿಂಡ್ರೋಮಿಕ್) ವಿಧಾನವನ್ನು ಅನುಸರಿಸಲು ತೀರ್ಮಾನಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.</p>.<p>‘ಈ ವಿಧಾನದಲ್ಲಿ ಸಂಬಂಧಪಟ್ಟ ವೈದ್ಯರು ಅಥವಾ ವೈದ್ಯಾಧಿಕಾರಿಗಳೇ ರೋಗಿಗಳ ಸ್ಥಿತಿಯನ್ನು ಪ್ರಮಾಣೀಕರಿಸುತ್ತಾರೆ. ನಂತರ ರೋಗಿಗೆ ಪ್ರತ್ಯೇಕ ಸಂಖ್ಯೆಯನ್ನು ನೀಡಿ, ನಿರ್ದಿಷ್ಟ ಆಸ್ಪತ್ರೆಯಲ್ಲಿ ಹಾಸಿಗೆ ಹಂಚಿಕೆ ಮಾಡಲಾಗುತ್ತದೆ. ಇವರನ್ನು ಕೋವಿಡ್ ರೋಗಿ ಎಂದೇ ಪರಿಗಣಿಸಲಾಗುತ್ತದೆ. ರೋಗಿಗೆ ಸೂಕ್ತ ಸಮಯದಲ್ಲಿ ಅಗತ್ಯ ಚಿಕಿತ್ಸೆ ನೀಡಬೇಕಿರುವುದರಿಂದ ಈ ವಿಧಾನವನ್ನು ಅನುರಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಕಾಯಿಲೆ ಹೊಂದಿರುವ ಕೆಲವರಿಗೆ ಆರ್ಟಿ–ಪಿಸಿಆರ್ ಹಾಗೂ ರ್ಯಾಟ್ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬರುತ್ತಿರುವ ಕಾರಣ ರೋಗ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು, ಚಿಕಿತ್ಸೆ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.</p>.<p>‘ಹಲವು ಪ್ರಕರಣಗಳಲ್ಲಿ ಆರ್ಟಿ–ಪಿಸಿಆರ್ ಹಾಗೂ ವಿವಿವಿಧ ವಿಧಾನಗಳಲ್ಲಿ ಪರೀಕ್ಷೆ ಮಾಡಿಸಿದರೂ ನೆಗೆಟಿವ್ ವರದಿ ಬರುತ್ತಿದೆ. ವ್ಯಕ್ತಿಗೆ ಕೋವಿಡ್ ರೋಗ ಲಕ್ಷಣವಿದ್ದರೂ ವರದಿಯಲ್ಲಿ ನೆಗೆಟಿವ್ ಬಂದಲ್ಲಿ ಸಮಸ್ಯೆ ಸಂಕೀರ್ಣ ಸ್ವರೂಪ ಪಡೆದುಕೊಳ್ಳಲಿದೆ. ರೋಗದ ತೀವ್ರತೆ ಹೆಚ್ಚಾದ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ರೋಗ ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡುವ (ಸಿಂಡ್ರೋಮಿಕ್) ವಿಧಾನವನ್ನು ಅನುಸರಿಸಲು ತೀರ್ಮಾನಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.</p>.<p>‘ಈ ವಿಧಾನದಲ್ಲಿ ಸಂಬಂಧಪಟ್ಟ ವೈದ್ಯರು ಅಥವಾ ವೈದ್ಯಾಧಿಕಾರಿಗಳೇ ರೋಗಿಗಳ ಸ್ಥಿತಿಯನ್ನು ಪ್ರಮಾಣೀಕರಿಸುತ್ತಾರೆ. ನಂತರ ರೋಗಿಗೆ ಪ್ರತ್ಯೇಕ ಸಂಖ್ಯೆಯನ್ನು ನೀಡಿ, ನಿರ್ದಿಷ್ಟ ಆಸ್ಪತ್ರೆಯಲ್ಲಿ ಹಾಸಿಗೆ ಹಂಚಿಕೆ ಮಾಡಲಾಗುತ್ತದೆ. ಇವರನ್ನು ಕೋವಿಡ್ ರೋಗಿ ಎಂದೇ ಪರಿಗಣಿಸಲಾಗುತ್ತದೆ. ರೋಗಿಗೆ ಸೂಕ್ತ ಸಮಯದಲ್ಲಿ ಅಗತ್ಯ ಚಿಕಿತ್ಸೆ ನೀಡಬೇಕಿರುವುದರಿಂದ ಈ ವಿಧಾನವನ್ನು ಅನುರಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>