ಆಸ್ಪತ್ರೆಯ ಕ್ಲಿನಿಕಲ್ ಸೇವೆಯಪ್ರಾದೇಶಿಕ ಮುಖ್ಯಸ್ಥೆ ಡಾ.ಅರ್ಚನಾ ಎಸ್., ‘ಕಣ್ಣಿನಲ್ಲಿತುರಿಕೆ, ಕೆಂಪು ಬಣ್ಣಕ್ಕೆ ತಿರುಗುವುದು, ದೃಷ್ಟಿ ಮಸುಕಾಗುವುದು, ಅಸ್ವಸ್ಥತೆ ಸೇರಿ ವಿವಿಧ ಲಕ್ಷಣಗಳು ಕಂಡುಬಂದ ತಕ್ಷಣ ನೇತ್ರ ತಜ್ಞರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ ನೀಡಲಾಗುವುದು. ಇಂತಹ ರೋಗಲಕ್ಷಣಗಳಿಗೆ ಚಿಕಿತ್ಸೆಯನ್ನು ಪಡೆದುಕೊಳ್ಳದಿದ್ದರೆ ಕೆಲವು ವೇಳೆ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ’ ಎಂದು ಹೇಳಿದರು.