<p><strong>ಬೆಂಗಳೂರು:</strong> ಉಲ್ಬಣಗೊಂಡಿರುವ ಕೋವಿಡ್ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿದ್ದು, ನಗರದಲ್ಲಿ ಬಂದ್ ರೀತಿಯ ವಾತಾವರಣ ನಿರ್ಮಾಣವಾಗಿದೆ.</p>.<p>ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ಕೆಲಕಾಲ ಬಿಡುವು ನೀಡಲಾಗಿತ್ತು. 10 ಗಂಟೆ ನಂತರ ಪೊಲೀಸರು ಬಿಗಿ ಕ್ರಮಕ್ಕೆ ಮುಂದಾಗಿದ್ದಾರೆ. ಅನಾವಶ್ಯಕವಾಗಿ ಜನ ಓಡಾಟಕ್ಕೆ ನಿಯಂತ್ರಣ ಹಾಕಲಾಗಿದೆ. ಅದನ್ನೂ ಮೀರಿ ರಸ್ತೆಗೆ ಬಂದವರಿಗೆ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ.</p>.<p>ಅಲ್ಲದೇ ಬೈಕ್ ಮತ್ತು ಇತರೆ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಬೈಕ್ಗಳನ್ನು ಬಿಡಿಸಿಕೊಳ್ಳಲು ಪೊಲೀಸ್ ಠಾಣೆಗಳ ಮುಂದೆ ಜನ ಜಮಾಯಿಸುತ್ತಿದ್ದಾರೆ.</p>.<p>ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್ಗಳು ಸಂಚರಿಸುತ್ತಿದ್ದು, ಅಗತ್ಯ ಸೇವೆಗಷ್ಟೇ ಬಿಎಂಟಿಸಿ ಬಸ್ಗಳನ್ನು ಮೀಸಲಿಡಲಾಗಿದೆ. ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಕರ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಬಸ್ಗಳ ಸಂಖ್ಯೆ ಕಡಿಮೆ ಇವೆ.</p>.<p>ಇವೆಲ್ಲದರ ನಡುವೆ ಕೆ.ಆರ್.ಪುರ ಮಾರುಕಟ್ಟೆಯಲ್ಲಿ ಎಂದಿನಂತೆ ಜನ ಜಂಗುಳಿ ಸೇರಿಕೊಂಡಿದೆ. ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಲ್ಬಣಗೊಂಡಿರುವ ಕೋವಿಡ್ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿದ್ದು, ನಗರದಲ್ಲಿ ಬಂದ್ ರೀತಿಯ ವಾತಾವರಣ ನಿರ್ಮಾಣವಾಗಿದೆ.</p>.<p>ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ಕೆಲಕಾಲ ಬಿಡುವು ನೀಡಲಾಗಿತ್ತು. 10 ಗಂಟೆ ನಂತರ ಪೊಲೀಸರು ಬಿಗಿ ಕ್ರಮಕ್ಕೆ ಮುಂದಾಗಿದ್ದಾರೆ. ಅನಾವಶ್ಯಕವಾಗಿ ಜನ ಓಡಾಟಕ್ಕೆ ನಿಯಂತ್ರಣ ಹಾಕಲಾಗಿದೆ. ಅದನ್ನೂ ಮೀರಿ ರಸ್ತೆಗೆ ಬಂದವರಿಗೆ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ.</p>.<p>ಅಲ್ಲದೇ ಬೈಕ್ ಮತ್ತು ಇತರೆ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಬೈಕ್ಗಳನ್ನು ಬಿಡಿಸಿಕೊಳ್ಳಲು ಪೊಲೀಸ್ ಠಾಣೆಗಳ ಮುಂದೆ ಜನ ಜಮಾಯಿಸುತ್ತಿದ್ದಾರೆ.</p>.<p>ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್ಗಳು ಸಂಚರಿಸುತ್ತಿದ್ದು, ಅಗತ್ಯ ಸೇವೆಗಷ್ಟೇ ಬಿಎಂಟಿಸಿ ಬಸ್ಗಳನ್ನು ಮೀಸಲಿಡಲಾಗಿದೆ. ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಕರ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಬಸ್ಗಳ ಸಂಖ್ಯೆ ಕಡಿಮೆ ಇವೆ.</p>.<p>ಇವೆಲ್ಲದರ ನಡುವೆ ಕೆ.ಆರ್.ಪುರ ಮಾರುಕಟ್ಟೆಯಲ್ಲಿ ಎಂದಿನಂತೆ ಜನ ಜಂಗುಳಿ ಸೇರಿಕೊಂಡಿದೆ. ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>