ದೀಪ ಬೆಳಗಿದ ಗಣ್ಯರು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಉಪಮುಖ್ಯಮಂತ್ರಿಗಳಾದ ಸಿ.ಎಸ್. ಅಶ್ವತ್ಥ್ನಾರಾಯಣ, ಗೋವಿಂದ ಕಾರಜೋಳ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಸೇರಿದಂತೆ ಅನೇಕ ಸಚಿವರು, ಶಾಸಕರು, ಸಂಸದರು, ಮೇಯರ್, ಬಿಬಿಎಂಪಿ ಸದಸ್ಯರು ದೀಪ ಬೆಳಗಿ ಪ್ರಾರ್ಥಿಸಿದರು. ವಿವಿಧ ಮಠಗಳ ಮಠಾಧೀಶರು, ಸಿನಿ ತಾರೆಯರು ಕೂಡ ಹಣತೆ ಬೆಳಗುವ ಮೂಲಕ ದೇಶದಲ್ಲಿ ಕೊರೊನಾ ಸೋಂಕು ನಿರ್ಮೂಲನೆಯಾಗಲಿ ಎಂದು ಪ್ರಾರ್ಥಿಸಿದರು