‘ಕೋವಿಡ್ ಎರಡನೇ ಅಲೆ ಹತೋಟಿಗೆ ಬರುತ್ತಿದೆ. ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಇಳಿಮುಖವಾಗಿದೆ. ಅನೇಕರು ಬೆಂಗಳೂರು ತೊರೆದು ಹಳ್ಳಿಗಳಿಗೆ ಹೋಗಿದ್ದರಿಂದ ಅಲ್ಲಿ ಸೋಂಕು ಪ್ರಕರಣಗಳು ಹೆಚ್ಚಿವೆ. ಅಲ್ಲೂ ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ತಿಳಿಸಿದರು.