<p><strong>ಬೆಂಗಳೂರು</strong>: ಕೋವಿಡ್ ರೋಗಿಗಳಿಗೆ ಸಮರ್ಪಕವಾಗಿ ಹಾಸಿಗೆ, ಐಸಿಯು, ವೆಂಟಿಲೇಟರ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಶಾಸಕಿ ಸೌಮ್ಯಾರೆಡ್ಡಿ ಅವರು ಜಯನಗರ 2ನೇ ಬ್ಲಾಕ್ನಲ್ಲಿರುವ ಪಾಲಿಕೆ ಜಂಟಿ ಆಯುಕ್ತರ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.</p>.<p>ಜಯನಗರ ವ್ಯಾಪ್ತಿಯಲ್ಲಿ ಹಾಸಿಗೆ ಸಿಗದೆ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಕೊರೊನಾ ರೋಗಿಗಳ ವಿವರಗಳನ್ನು ಪ್ರದರ್ಶಿಸಿ ಧರಣಿ ಕುಳಿತರು.</p>.<p>ಧರಣಿ ವೇಳೆ ಪಾಲಿಕೆ ಆಯುಕ್ತ ಗೌರವ್ ಗುಪ್ತ ಅವರಿಗೆ ಕರೆ ಮಾಡಿದ ಅವರು, ‘ಜಯನಗರ ಕ್ಷೇತ್ರ ವ್ಯಾಪ್ತಿಯಲ್ಲಿಯೇ 200 ಜನ ಆಮ್ಲಜನಕದ ವ್ಯವಸ್ಥೆಯಿರುವ ಬೆಡ್ ಸಿಗದೆ ಒದ್ದಾಡುತ್ತಿದ್ದಾರೆ. ಮೂರು ದಿನಗಳಿಂದ ಜಯನಗರ ವ್ಯಾಪ್ತಿಗೆ ರೆಮ್ಡಿಸಿವರ್ ಸರಬರಾಜು ನಿಂತು ಹೋಗಿದೆ’ ಎಂದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಧರಣಿ ಕೈಬಿಡುವಂತೆ ವಿನಂತಿಸಿದರು. ಆದರೆ, ಅವರು ಧರಣಿ ಕೈಬಿಡಲಿಲ್ಲ. ಕೊನೆಗೆ ಸೌಮ್ಯಾ ಹಾಗೂ ಧರಣಿಯಲ್ಲಿ ಕುಳಿತಿದ್ದ ಹಲವರನ್ನು ವಶಕ್ಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ರೋಗಿಗಳಿಗೆ ಸಮರ್ಪಕವಾಗಿ ಹಾಸಿಗೆ, ಐಸಿಯು, ವೆಂಟಿಲೇಟರ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಶಾಸಕಿ ಸೌಮ್ಯಾರೆಡ್ಡಿ ಅವರು ಜಯನಗರ 2ನೇ ಬ್ಲಾಕ್ನಲ್ಲಿರುವ ಪಾಲಿಕೆ ಜಂಟಿ ಆಯುಕ್ತರ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.</p>.<p>ಜಯನಗರ ವ್ಯಾಪ್ತಿಯಲ್ಲಿ ಹಾಸಿಗೆ ಸಿಗದೆ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಕೊರೊನಾ ರೋಗಿಗಳ ವಿವರಗಳನ್ನು ಪ್ರದರ್ಶಿಸಿ ಧರಣಿ ಕುಳಿತರು.</p>.<p>ಧರಣಿ ವೇಳೆ ಪಾಲಿಕೆ ಆಯುಕ್ತ ಗೌರವ್ ಗುಪ್ತ ಅವರಿಗೆ ಕರೆ ಮಾಡಿದ ಅವರು, ‘ಜಯನಗರ ಕ್ಷೇತ್ರ ವ್ಯಾಪ್ತಿಯಲ್ಲಿಯೇ 200 ಜನ ಆಮ್ಲಜನಕದ ವ್ಯವಸ್ಥೆಯಿರುವ ಬೆಡ್ ಸಿಗದೆ ಒದ್ದಾಡುತ್ತಿದ್ದಾರೆ. ಮೂರು ದಿನಗಳಿಂದ ಜಯನಗರ ವ್ಯಾಪ್ತಿಗೆ ರೆಮ್ಡಿಸಿವರ್ ಸರಬರಾಜು ನಿಂತು ಹೋಗಿದೆ’ ಎಂದರು.</p>.<p>ಸ್ಥಳಕ್ಕೆ ಬಂದ ಪೊಲೀಸರು ಧರಣಿ ಕೈಬಿಡುವಂತೆ ವಿನಂತಿಸಿದರು. ಆದರೆ, ಅವರು ಧರಣಿ ಕೈಬಿಡಲಿಲ್ಲ. ಕೊನೆಗೆ ಸೌಮ್ಯಾ ಹಾಗೂ ಧರಣಿಯಲ್ಲಿ ಕುಳಿತಿದ್ದ ಹಲವರನ್ನು ವಶಕ್ಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>