ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 | ಬೆಡ್‌ ಕೊರತೆ: ಶಾಸಕಿ ಸೌಮ್ಯಾರೆಡ್ಡಿ ಧರಣಿ

Last Updated 6 ಮೇ 2021, 3:49 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ರೋಗಿಗಳಿಗೆ ಸಮರ್ಪಕವಾಗಿ ಹಾಸಿಗೆ, ಐಸಿಯು, ವೆಂಟಿಲೇಟರ್‌ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಶಾಸಕಿ ಸೌಮ್ಯಾರೆಡ್ಡಿ ಅವರು ಜಯನಗರ 2ನೇ ಬ್ಲಾಕ್‌ನಲ್ಲಿರುವ ಪಾಲಿಕೆ ಜಂಟಿ ಆಯುಕ್ತರ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.

ಜಯನಗರ ವ್ಯಾಪ್ತಿಯಲ್ಲಿ ಹಾಸಿಗೆ ಸಿಗದೆ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಕೊರೊನಾ ರೋಗಿಗಳ ವಿವರಗಳನ್ನು ಪ್ರದರ್ಶಿಸಿ ಧರಣಿ ಕುಳಿತರು.

ಧರಣಿ ವೇಳೆ ಪಾಲಿಕೆ ಆಯುಕ್ತ ಗೌರವ್ ಗುಪ್ತ ಅವರಿಗೆ ಕರೆ ಮಾಡಿದ ಅವರು, ‘ಜಯನಗರ ಕ್ಷೇತ್ರ ವ್ಯಾಪ್ತಿಯಲ್ಲಿಯೇ 200 ಜನ ಆಮ್ಲಜನಕದ ವ್ಯವಸ್ಥೆಯಿರುವ ಬೆಡ್ ಸಿಗದೆ ಒದ್ದಾಡುತ್ತಿದ್ದಾರೆ. ಮೂರು ದಿನಗಳಿಂದ ಜಯನಗರ ವ್ಯಾಪ್ತಿಗೆ ರೆಮ್‌ಡಿಸಿವರ್ ಸರಬರಾಜು ನಿಂತು ಹೋಗಿದೆ’ ಎಂದರು.

ಸ್ಥಳಕ್ಕೆ ಬಂದ ಪೊಲೀಸರು ಧರಣಿ ಕೈಬಿಡುವಂತೆ ವಿನಂತಿಸಿದರು. ಆದರೆ, ಅವರು ಧರಣಿ ಕೈಬಿಡಲಿಲ್ಲ. ಕೊನೆಗೆ ಸೌಮ್ಯಾ ಹಾಗೂ ಧರಣಿಯಲ್ಲಿ ಕುಳಿತಿದ್ದ ಹಲವರನ್ನು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT