<p><strong>ಬೆಂಗಳೂರು</strong>: ‘ಲಕ್ಷಣ ಇಲ್ಲದ ಸೋಂಕಿತರನ್ನು ದಾಖಲಿಸಿಕೊಂಡು ಲಕ್ಷಣ ಇರುವ ಸೋಂಕಿತರಿಗೆ ಹಾಸಿಗೆ ಸಿಗದಂತೆ ಮಾಡಬಾರದು’ ಎಂದು ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.</p>.<p>‘ಬಿಬಿಎಂಪಿ ಅಧಿಕಾರಿಗಳು ಕಳುಹಿಸಿಕೊಡುವ ಸೋಂಕಿತರಿಗೆ ಅವಕಾಶ ನಿರಾಕರಿಸಬಾರದು. ಈ ಆದೇಶ ಭಾನುವಾರದಿಂದಲೇ ಜಾರಿಗೆ ಬರಲಿದೆ’ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಆದೇಶದಲ್ಲಿ ತಿಳಿಸಿದ್ದಾರೆ.</p>.<p>‘ಹಾಸಿಗೆ ಸಾಮರ್ಥ್ಯ, ಅದರಲ್ಲಿ ಸರ್ಕಾರದ ಕೋಟಾ ಸಂಖ್ಯೆ, ಅವುಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ, ಖಾಲಿ ಇರುವ ಹಾಸಿಗೆಗಳ ಸಂಖ್ಯೆ ಎಷ್ಟು ಎಂಬುದನ್ನು ಬಿಬಿಎಂಪಿ ಮತ್ತು ಸಾಸ್ಥ್ (ಎಸ್ಎಎಸ್ಟಿ) ಪೋರ್ಟಲ್ನಲ್ಲಿ ಅಪ್ಡೇಟ್ ಮಾಡಬೇಕು’ ಎಂದು ಅವರು ವಿವರಿಸಿದ್ದಾರೆ.</p>.<p>‘ಹೈಕೋರ್ಟ್ ನಿರ್ದೇಶನದಂತೆ ಎಲ್ಲಾ ಆಸ್ಪತ್ರೆಗಳ ಫಲಕಗಳಲ್ಲಿ ಈ ಮಾಹಿತಿ ಪ್ರದರ್ಶಿಸಬೇಕು. ಹಾಸಿಗೆ ಖಾಲಿ ಇಲ್ಲದಿದ್ದರೆ ಸೋಂಕಿತರ ಸಂಬಂಧಿಕರು ಯಾರಿಗೆ ಅಹವಾಲು ಸಲ್ಲಿಸಬೇಕು ಎಂಬ ಮಾಹಿತಿಯೂ ಅದರಲ್ಲಿ ಇರಬೇಕು. ಸಂಬಂಧಪಟ್ಟ ಹಿರಿಯ ಅಧಿಕಾರಿ, ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನೂ ಫಲಕದಲ್ಲಿ ಹಾಕಬೇಕು. ಈ ನಿಯಮಗಳನ್ನು ಪಾಲಿಸದಿದ್ದರೆ ಪ್ರಕೃತಿ ವಿಕೋಪ ನಿರ್ವಹಣೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಲಕ್ಷಣ ಇಲ್ಲದ ಸೋಂಕಿತರನ್ನು ದಾಖಲಿಸಿಕೊಂಡು ಲಕ್ಷಣ ಇರುವ ಸೋಂಕಿತರಿಗೆ ಹಾಸಿಗೆ ಸಿಗದಂತೆ ಮಾಡಬಾರದು’ ಎಂದು ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.</p>.<p>‘ಬಿಬಿಎಂಪಿ ಅಧಿಕಾರಿಗಳು ಕಳುಹಿಸಿಕೊಡುವ ಸೋಂಕಿತರಿಗೆ ಅವಕಾಶ ನಿರಾಕರಿಸಬಾರದು. ಈ ಆದೇಶ ಭಾನುವಾರದಿಂದಲೇ ಜಾರಿಗೆ ಬರಲಿದೆ’ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಆದೇಶದಲ್ಲಿ ತಿಳಿಸಿದ್ದಾರೆ.</p>.<p>‘ಹಾಸಿಗೆ ಸಾಮರ್ಥ್ಯ, ಅದರಲ್ಲಿ ಸರ್ಕಾರದ ಕೋಟಾ ಸಂಖ್ಯೆ, ಅವುಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ, ಖಾಲಿ ಇರುವ ಹಾಸಿಗೆಗಳ ಸಂಖ್ಯೆ ಎಷ್ಟು ಎಂಬುದನ್ನು ಬಿಬಿಎಂಪಿ ಮತ್ತು ಸಾಸ್ಥ್ (ಎಸ್ಎಎಸ್ಟಿ) ಪೋರ್ಟಲ್ನಲ್ಲಿ ಅಪ್ಡೇಟ್ ಮಾಡಬೇಕು’ ಎಂದು ಅವರು ವಿವರಿಸಿದ್ದಾರೆ.</p>.<p>‘ಹೈಕೋರ್ಟ್ ನಿರ್ದೇಶನದಂತೆ ಎಲ್ಲಾ ಆಸ್ಪತ್ರೆಗಳ ಫಲಕಗಳಲ್ಲಿ ಈ ಮಾಹಿತಿ ಪ್ರದರ್ಶಿಸಬೇಕು. ಹಾಸಿಗೆ ಖಾಲಿ ಇಲ್ಲದಿದ್ದರೆ ಸೋಂಕಿತರ ಸಂಬಂಧಿಕರು ಯಾರಿಗೆ ಅಹವಾಲು ಸಲ್ಲಿಸಬೇಕು ಎಂಬ ಮಾಹಿತಿಯೂ ಅದರಲ್ಲಿ ಇರಬೇಕು. ಸಂಬಂಧಪಟ್ಟ ಹಿರಿಯ ಅಧಿಕಾರಿ, ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನೂ ಫಲಕದಲ್ಲಿ ಹಾಕಬೇಕು. ಈ ನಿಯಮಗಳನ್ನು ಪಾಲಿಸದಿದ್ದರೆ ಪ್ರಕೃತಿ ವಿಕೋಪ ನಿರ್ವಹಣೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>