‘ಯಾವ ವಲಯದಲ್ಲಿ ಎಲ್ಲೆಲ್ಲಿ ಎಷ್ಟು ಜನರು ಕೋವಿಡ್ ಲಸಿಕೆ ಪಡೆಯಲು ಬಾಕಿ ಇದ್ದಾರೆ ಎಂಬ ಸ್ಪಷ್ಟತೆ
ಪಡೆಯಲು ಈ ಸಮೀಕ್ಷೆ ನಡೆಸಿದ್ದೇವೆ. ಜನರು ಹಿಂಜರಿಕೆಯ ಕಾರಣದಿಂದ ಲಸಿಕೆ ಪಡೆಯುತ್ತಿಲ್ಲವೇ, ಲಸಿಕೆ ಪಡೆಯಲು ಏನಾದರೂ ಸಮಸ್ಯೆಗಳಿವೆಯೇ ಎಂಬ ವಿಚಾರಗಳನ್ನು ತಿಳಿದುಕೊಳ್ಳುವುದಕ್ಕೂ ಇದು ನೆರವಾಗುತ್ತದೆ. ಸಮೀಕ್ಷೆಯ ಅಂಶಗಳನ್ನು ಆಧರಿಸಿ ಎಲ್ಲರಿಗೂ ಲಸಿಕೆ ನೀಡುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದೇವೆ’ ಎಂದು ಗೌರವ್ ಗುಪ್ತ ‘ಪ್ರಜಾವಾಣಿ’ಗೆ ತಿಳಿಸಿದರು.