<p><strong>ಬೆಂಗಳೂರು:</strong> ಆರೋಗ್ಯ ಇಲಾಖೆಯು ರಾಜ್ಯದಲ್ಲಿನ 40,159 ಕ್ಷಯ ರೋಗಿಗಳಲ್ಲಿ ಈ ವರ್ಷ 309 ಮಂದಿ ಕೋವಿಡ್ ಪೀಡಿತರಾಗಿರುವುದನ್ನು ಪತ್ತೆ ಮಾಡಿದೆ.</p>.<p>ಕೋವಿಡ್ನಿಂದ ಚೇತರಿಸಿಕೊಂಡ ಕೆಲವರಲ್ಲಿ ಕೂಡ ಕ್ಷಯ ರೋಗ ಕಾಣಿಸಿಕೊಳ್ಳುತ್ತಿರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ. ಮೂರು ಜಿಲ್ಲೆಗಳಲ್ಲಿ 24 ಪ್ರಕರಣಗಳು ಈಗಾಗಲೇ ಖಚಿತಪಟ್ಟಿವೆ. ಇಲಾಖೆಯು ಕೋವಿಡ್ನಿಂದ ಚೇತರಿಸಿಕೊಂಡವರನ್ನು ಪರೀಕ್ಷಿಸಲು ಇದೇ 16ರಿಂದ 31ರವರೆಗೆ ರಾಜ್ಯದಾದ್ಯಂತ 15 ದಿನಗಳ ಕ್ಷಯ ರೋಗ ಪತ್ತೆ ಅಭಿಯಾನವನ್ನು ಹಮ್ಮಿಕೊಂಡಿದೆ.</p>.<p>ಮೈಸೂರಿನಲ್ಲಿ 12 ಮಂದಿ, ಕೊಡಗಿನಲ್ಲಿ 7 ಮಂದಿ ಹಾಗೂ ಚಾಮರಾಜನಗರದಲ್ಲಿ 5 ಮಂದಿಗೆ ಕೋವಿಡ್ನಿಂದ ಚೇತರಿಸಿಕೊಂಡ ಬಳಿಕ ಕ್ಷಯ ರೋಗ ಕಾಣಿಸಿಕೊಂಡಿದೆ. ಕೊಪ್ಪಳದಲ್ಲಿ 6 ಶಂಕಿತ ಪ್ರಕರಣಗಳು ವರದಿಯಾಗಿವೆ.</p>.<p>‘ಕೊರೊನಾ ಮತ್ತು ಕ್ಷಯ ರೋಗಿಗಳಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳಲ್ಲಿ ಸಾಮ್ಯತೆಯಿದೆ. ಆದ್ದರಿಂದ ಕೋವಿಡ್ನಿಂದ ಚೇತರಿಸಿಕೊಂಡವರಿಗೆ ಪರೀಕ್ಷೆ ಮಾಡಲಾಗುತ್ತದೆ. ಕ್ಷಯ ರೋಗ ತಗಲಿರುವುದು ಖಚಿತಪಟ್ಟಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಈ ತಪಾಸಣೆ ಕಾರ್ಯಕ್ಕೆ ಆರೋಗ್ಯ ಕಾರ್ಯಕರ್ತರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತದೆ’ ಆರೋಗ್ಯ ಇಲಾಖೆ (ಟಿಬಿ ವಿಭಾಗ) ಜಂಟಿ ನಿದೇರ್ಶಕ ಡಾ. ರಮೇಶ್ ರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರೋಗ್ಯ ಇಲಾಖೆಯು ರಾಜ್ಯದಲ್ಲಿನ 40,159 ಕ್ಷಯ ರೋಗಿಗಳಲ್ಲಿ ಈ ವರ್ಷ 309 ಮಂದಿ ಕೋವಿಡ್ ಪೀಡಿತರಾಗಿರುವುದನ್ನು ಪತ್ತೆ ಮಾಡಿದೆ.</p>.<p>ಕೋವಿಡ್ನಿಂದ ಚೇತರಿಸಿಕೊಂಡ ಕೆಲವರಲ್ಲಿ ಕೂಡ ಕ್ಷಯ ರೋಗ ಕಾಣಿಸಿಕೊಳ್ಳುತ್ತಿರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ. ಮೂರು ಜಿಲ್ಲೆಗಳಲ್ಲಿ 24 ಪ್ರಕರಣಗಳು ಈಗಾಗಲೇ ಖಚಿತಪಟ್ಟಿವೆ. ಇಲಾಖೆಯು ಕೋವಿಡ್ನಿಂದ ಚೇತರಿಸಿಕೊಂಡವರನ್ನು ಪರೀಕ್ಷಿಸಲು ಇದೇ 16ರಿಂದ 31ರವರೆಗೆ ರಾಜ್ಯದಾದ್ಯಂತ 15 ದಿನಗಳ ಕ್ಷಯ ರೋಗ ಪತ್ತೆ ಅಭಿಯಾನವನ್ನು ಹಮ್ಮಿಕೊಂಡಿದೆ.</p>.<p>ಮೈಸೂರಿನಲ್ಲಿ 12 ಮಂದಿ, ಕೊಡಗಿನಲ್ಲಿ 7 ಮಂದಿ ಹಾಗೂ ಚಾಮರಾಜನಗರದಲ್ಲಿ 5 ಮಂದಿಗೆ ಕೋವಿಡ್ನಿಂದ ಚೇತರಿಸಿಕೊಂಡ ಬಳಿಕ ಕ್ಷಯ ರೋಗ ಕಾಣಿಸಿಕೊಂಡಿದೆ. ಕೊಪ್ಪಳದಲ್ಲಿ 6 ಶಂಕಿತ ಪ್ರಕರಣಗಳು ವರದಿಯಾಗಿವೆ.</p>.<p>‘ಕೊರೊನಾ ಮತ್ತು ಕ್ಷಯ ರೋಗಿಗಳಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳಲ್ಲಿ ಸಾಮ್ಯತೆಯಿದೆ. ಆದ್ದರಿಂದ ಕೋವಿಡ್ನಿಂದ ಚೇತರಿಸಿಕೊಂಡವರಿಗೆ ಪರೀಕ್ಷೆ ಮಾಡಲಾಗುತ್ತದೆ. ಕ್ಷಯ ರೋಗ ತಗಲಿರುವುದು ಖಚಿತಪಟ್ಟಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಈ ತಪಾಸಣೆ ಕಾರ್ಯಕ್ಕೆ ಆರೋಗ್ಯ ಕಾರ್ಯಕರ್ತರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತದೆ’ ಆರೋಗ್ಯ ಇಲಾಖೆ (ಟಿಬಿ ವಿಭಾಗ) ಜಂಟಿ ನಿದೇರ್ಶಕ ಡಾ. ರಮೇಶ್ ರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>