<p><strong>ಬೆಂಗಳೂರು</strong>: ನಗರದಲ್ಲಿ ಕೋವಿಡ್ ರೋಗಿಗಳ ಪರದಾಟ ಮುಂದುವರಿದಿದೆ. ಸೋಂಕಿತರು ಮಾತ್ರವಲ್ಲದೆ, ಇತರೆ ಕಾಯಿಲೆಯಿಂದ ಬಳಲುತ್ತಿರುವವರಿಗೂ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗುತ್ತಿಲ್ಲ. ‘ಹಾಸಿಗೆ ಇಲ್ಲ’ ಎಂಬ ಫಲಕಗಳೂ ಆಸ್ಪತ್ರೆ ಮುಂದೆ ಕಾಣುತ್ತಿವೆ.</p>.<p>ನಗರದ ಶಿವಾಜಿ ನಗರದ ಚರಕ ಆಸ್ಪತ್ರೆಯಲ್ಲಿ ದಿನಗಳ ಹಿಂದೆಯಷ್ಟೇ ಕೋವಿಡ್ ರೋಗಿಗಳಿಗೆ 150 ಹಾಸಿಗೆಗಳನ್ನು ಮೀಸಲಿಡಲಾಗಿತ್ತು. ಆದರೆ, ಈಗಾಗಲೇ ಎಲ್ಲ ಹಾಸಿಗೆಗಳು ಭರ್ತಿ ಆಗಿದ್ದು, ಪ್ರವೇಶ ದ್ವಾರದ ಎದುರು ‘ನೋ ಬೆಡ್’ ಫಲಕ ಹಾಕಲಾಗಿದೆ.</p>.<p>‘ಹಲವು ಆಸ್ಪತ್ರೆಗಳಿಗೆ ತಿರುಗಿದರೂ ಇದೇ ಸಮಸ್ಯೆ ಇದೆ. ಆಂಬುಲೆನ್ಸ್ ಕೂಡ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಹಾಸಿಗೆ ಇಲ್ಲ ಎಂದು ಹೊರಗಡೆಯೇ ಹೇಳಿ ಕಳುಹಿಸುತ್ತಿದ್ದಾರೆ’ ಎಂದು ಸೋಂಕಿತರೊಬ್ಬರ ಸಂಬಂಧಿ ‘ಪ್ರಜಾವಾಣಿ’ಗೆ ಹೇಳಿದರು.</p>.<p>‘ಉಸಿರಾಟದ ಸಮಸ್ಯೆ ಇದ್ದರೂ ಆಸ್ಪತ್ರೆಯ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ವೈದ್ಯಕೀಯ ಆಮ್ಲಜನಕವಾದರೂ ಪೂರೈಸಿ ಎಂದು ಮನವಿ ಮಾಡಿಕೊಂಡರೆ, ಈಗಾಗಲೇ ದಾಖಲಾಗಿರುವ ರೋಗಿಗಳಿಗೇ ಆಮ್ಲಜನಕ ಪೂರೈಸಲು ಕಷ್ಟವಾಗುತ್ತಿದೆ. ಬೇರೆಯವರಿಗೆ ನೀಡಲು ಸಾಧ್ಯವಿಲ್ಲ ಎಂದೂ ಆಸ್ಪತ್ರೆಯವರು ಹೇಳುತ್ತಿದ್ದಾರೆ’ ಎಂದೂ ಅವರು ದೂರಿದರು.</p>.<p>ನಗರದ ಹಲವು ಆಸ್ಪತ್ರೆಗಳ ಎದುರು ಈ ರೀತಿ ಚೀಟಿ ಅಂಟಿಸಲಾಗಿದೆ. ಅನಿವಾರ್ಯವಾಗಿ ಸೋಂಕಿತರು ಮನೆಯಲ್ಲಿಯೇ ಇರುವಂತಾಗಿದೆ.</p>.<p><strong>ಪರೀಕ್ಷಾ ಕಿಟ್ ‘ನೋ ಸ್ಟಾಕ್’ !</strong></p>.<p>ಆರ್ಟಿ ಪಿಸಿಆರ್ ಪರೀಕ್ಷೆ ಮಾಡುವ ಕಿಟ್ಗಳು ಕೂಡ ಖಾಲಿ ಆಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂದೆ ‘ನೋ ಸ್ಟಾಕ್’ ಫಲಕಗಳು ಕಾಣುತ್ತಿವೆ.</p>.<p>ನಗರದ ಕೆ. ನಾರಾಯಣಪುರ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್ಸಿ) ಎದುರು ಶುಕ್ರವಾರ ‘ಆರ್ಟಿ ಪಿಸಿಆರ್ ಪರೀಕ್ಷಾ ಕಿಟ್ ಖಾಲಿ ಆಗಿರುವುದರಿಂದ ಇಂದು ಪರೀಕ್ಷೆ ಮಾಡಲಾಗುವುದಿಲ್ಲ’ ಎಂದು ಬರೆಯಲಾಗಿತ್ತು.</p>.<p>‘ಕೆಮ್ಮು, ಜ್ವರದಂತಹ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳೋಣ ಎಂದು ಬಂದರೆ ಸ್ಟಾಕ್ ಇಲ್ಲ ನಾಳೆ ಬನ್ನಿ ಎಂದು ಹೇಳಿದರು’ ಎಂದು ಸಮೀರ್ ತಿಳಿಸಿದರು.</p>.<p>‘ಯಾವುದೇ ಕೇಂದ್ರಗಳಲ್ಲೂ ಪರೀಕ್ಷಾ ಕಿಟ್ಗಳ ಕೊರತೆ ಇಲ್ಲ. ಹಾಗೊಂದು ವೇಳೆ, ಸ್ಟಾಕ್ ಇಲ್ಲ ಎಂದು ಹೇಳಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ಬಿ.ಕೆ. ವಿಜಯೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೆ. ನಾರಾಯಣಪುರ ಪಿಎಚ್ಸಿಯ ವೈದ್ಯಾಧಿಕಾರಿಯವರಿಗೆ ಕರೆ ಮಾಡಲಾಯಿತು. ಅವರು ಸಂಪರ್ಕಕ್ಕೆ ಸಿಗಲಿಲ್ಲ.</p>.<p><strong>ವಿದ್ಯುತ್ ವ್ಯತ್ಯಯ: ಆಕ್ಸಿಜನ್ ಉತ್ಪಾದನೆ ಸ್ಥಗಿತ</strong></p>.<p>ನಗರದ ಹೂಡಿಯಲ್ಲಿನ ವಿದ್ಯುತ್ ಕೇಂದ್ರದಲ್ಲಿ ಶುಕ್ರವಾರ ಸಂಜೆ ಟ್ರಾನ್ಸ್ಫಾರ್ಮರ್ಗೆ ಹಾನಿಯಾಗಿದ್ದರಿಂದ ಹತ್ತಿರದ ‘ಭುರುಕ ಗ್ಯಾಸಸ್’ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಕೇಂದ್ರದಲ್ಲಿ ಉತ್ಪಾದನೆ ಸ್ಥಗಿತಗೊಂಡಿತ್ತು.</p>.<p>‘ಕೆಪಿಟಿಸಿಎಲ್ ತಪ್ಪಿನಿಂದ ಟ್ರಾನ್ಸ್ಫಾರ್ಮರ್ಗೆ ಹಾನಿಯಾಗಿದೆ. ವಿದ್ಯುತ್ ಇಲ್ಲದೆ ಆಕ್ಸಿಜನ್ ಉತ್ಪಾದನೆ ಸ್ಥಗಿತಗೊಂಡಿದೆ. ನಮ್ಮ ಘಟಕದಲ್ಲಿ ದಿನಕ್ಕೆ 65 ಟನ್ ಆಕ್ಸಿಜನ್ ಉತ್ಪಾದಿಸಲಾಗುತ್ತಿತ್ತು. ವಿದ್ಯುತ್ ಸರಬರಾಜು ಪ್ರಾರಂಭವಾಗುತ್ತಿದ್ದಂತೆ ಉತ್ಪಾದನೆ ಶುರು ಮಾಡಲಾಗುವುದು’ ಎಂದು ಕಂಪನಿಯ ನಿರ್ದೇಶಕ ಸತೀಶ್ ಕೇಸರಿ ಹೇಳಿದರು.</p>.<p>ನಗರದಲ್ಲಿ ಕೇವಲ ಎರಡು ಆಕ್ಸಿಜನ್ ಉತ್ಪಾದಕ ಘಟಕಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಕೋವಿಡ್ ರೋಗಿಗಳ ಪರದಾಟ ಮುಂದುವರಿದಿದೆ. ಸೋಂಕಿತರು ಮಾತ್ರವಲ್ಲದೆ, ಇತರೆ ಕಾಯಿಲೆಯಿಂದ ಬಳಲುತ್ತಿರುವವರಿಗೂ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗುತ್ತಿಲ್ಲ. ‘ಹಾಸಿಗೆ ಇಲ್ಲ’ ಎಂಬ ಫಲಕಗಳೂ ಆಸ್ಪತ್ರೆ ಮುಂದೆ ಕಾಣುತ್ತಿವೆ.</p>.<p>ನಗರದ ಶಿವಾಜಿ ನಗರದ ಚರಕ ಆಸ್ಪತ್ರೆಯಲ್ಲಿ ದಿನಗಳ ಹಿಂದೆಯಷ್ಟೇ ಕೋವಿಡ್ ರೋಗಿಗಳಿಗೆ 150 ಹಾಸಿಗೆಗಳನ್ನು ಮೀಸಲಿಡಲಾಗಿತ್ತು. ಆದರೆ, ಈಗಾಗಲೇ ಎಲ್ಲ ಹಾಸಿಗೆಗಳು ಭರ್ತಿ ಆಗಿದ್ದು, ಪ್ರವೇಶ ದ್ವಾರದ ಎದುರು ‘ನೋ ಬೆಡ್’ ಫಲಕ ಹಾಕಲಾಗಿದೆ.</p>.<p>‘ಹಲವು ಆಸ್ಪತ್ರೆಗಳಿಗೆ ತಿರುಗಿದರೂ ಇದೇ ಸಮಸ್ಯೆ ಇದೆ. ಆಂಬುಲೆನ್ಸ್ ಕೂಡ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಹಾಸಿಗೆ ಇಲ್ಲ ಎಂದು ಹೊರಗಡೆಯೇ ಹೇಳಿ ಕಳುಹಿಸುತ್ತಿದ್ದಾರೆ’ ಎಂದು ಸೋಂಕಿತರೊಬ್ಬರ ಸಂಬಂಧಿ ‘ಪ್ರಜಾವಾಣಿ’ಗೆ ಹೇಳಿದರು.</p>.<p>‘ಉಸಿರಾಟದ ಸಮಸ್ಯೆ ಇದ್ದರೂ ಆಸ್ಪತ್ರೆಯ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ವೈದ್ಯಕೀಯ ಆಮ್ಲಜನಕವಾದರೂ ಪೂರೈಸಿ ಎಂದು ಮನವಿ ಮಾಡಿಕೊಂಡರೆ, ಈಗಾಗಲೇ ದಾಖಲಾಗಿರುವ ರೋಗಿಗಳಿಗೇ ಆಮ್ಲಜನಕ ಪೂರೈಸಲು ಕಷ್ಟವಾಗುತ್ತಿದೆ. ಬೇರೆಯವರಿಗೆ ನೀಡಲು ಸಾಧ್ಯವಿಲ್ಲ ಎಂದೂ ಆಸ್ಪತ್ರೆಯವರು ಹೇಳುತ್ತಿದ್ದಾರೆ’ ಎಂದೂ ಅವರು ದೂರಿದರು.</p>.<p>ನಗರದ ಹಲವು ಆಸ್ಪತ್ರೆಗಳ ಎದುರು ಈ ರೀತಿ ಚೀಟಿ ಅಂಟಿಸಲಾಗಿದೆ. ಅನಿವಾರ್ಯವಾಗಿ ಸೋಂಕಿತರು ಮನೆಯಲ್ಲಿಯೇ ಇರುವಂತಾಗಿದೆ.</p>.<p><strong>ಪರೀಕ್ಷಾ ಕಿಟ್ ‘ನೋ ಸ್ಟಾಕ್’ !</strong></p>.<p>ಆರ್ಟಿ ಪಿಸಿಆರ್ ಪರೀಕ್ಷೆ ಮಾಡುವ ಕಿಟ್ಗಳು ಕೂಡ ಖಾಲಿ ಆಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂದೆ ‘ನೋ ಸ್ಟಾಕ್’ ಫಲಕಗಳು ಕಾಣುತ್ತಿವೆ.</p>.<p>ನಗರದ ಕೆ. ನಾರಾಯಣಪುರ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್ಸಿ) ಎದುರು ಶುಕ್ರವಾರ ‘ಆರ್ಟಿ ಪಿಸಿಆರ್ ಪರೀಕ್ಷಾ ಕಿಟ್ ಖಾಲಿ ಆಗಿರುವುದರಿಂದ ಇಂದು ಪರೀಕ್ಷೆ ಮಾಡಲಾಗುವುದಿಲ್ಲ’ ಎಂದು ಬರೆಯಲಾಗಿತ್ತು.</p>.<p>‘ಕೆಮ್ಮು, ಜ್ವರದಂತಹ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳೋಣ ಎಂದು ಬಂದರೆ ಸ್ಟಾಕ್ ಇಲ್ಲ ನಾಳೆ ಬನ್ನಿ ಎಂದು ಹೇಳಿದರು’ ಎಂದು ಸಮೀರ್ ತಿಳಿಸಿದರು.</p>.<p>‘ಯಾವುದೇ ಕೇಂದ್ರಗಳಲ್ಲೂ ಪರೀಕ್ಷಾ ಕಿಟ್ಗಳ ಕೊರತೆ ಇಲ್ಲ. ಹಾಗೊಂದು ವೇಳೆ, ಸ್ಟಾಕ್ ಇಲ್ಲ ಎಂದು ಹೇಳಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ಬಿ.ಕೆ. ವಿಜಯೇಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೆ. ನಾರಾಯಣಪುರ ಪಿಎಚ್ಸಿಯ ವೈದ್ಯಾಧಿಕಾರಿಯವರಿಗೆ ಕರೆ ಮಾಡಲಾಯಿತು. ಅವರು ಸಂಪರ್ಕಕ್ಕೆ ಸಿಗಲಿಲ್ಲ.</p>.<p><strong>ವಿದ್ಯುತ್ ವ್ಯತ್ಯಯ: ಆಕ್ಸಿಜನ್ ಉತ್ಪಾದನೆ ಸ್ಥಗಿತ</strong></p>.<p>ನಗರದ ಹೂಡಿಯಲ್ಲಿನ ವಿದ್ಯುತ್ ಕೇಂದ್ರದಲ್ಲಿ ಶುಕ್ರವಾರ ಸಂಜೆ ಟ್ರಾನ್ಸ್ಫಾರ್ಮರ್ಗೆ ಹಾನಿಯಾಗಿದ್ದರಿಂದ ಹತ್ತಿರದ ‘ಭುರುಕ ಗ್ಯಾಸಸ್’ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಕೇಂದ್ರದಲ್ಲಿ ಉತ್ಪಾದನೆ ಸ್ಥಗಿತಗೊಂಡಿತ್ತು.</p>.<p>‘ಕೆಪಿಟಿಸಿಎಲ್ ತಪ್ಪಿನಿಂದ ಟ್ರಾನ್ಸ್ಫಾರ್ಮರ್ಗೆ ಹಾನಿಯಾಗಿದೆ. ವಿದ್ಯುತ್ ಇಲ್ಲದೆ ಆಕ್ಸಿಜನ್ ಉತ್ಪಾದನೆ ಸ್ಥಗಿತಗೊಂಡಿದೆ. ನಮ್ಮ ಘಟಕದಲ್ಲಿ ದಿನಕ್ಕೆ 65 ಟನ್ ಆಕ್ಸಿಜನ್ ಉತ್ಪಾದಿಸಲಾಗುತ್ತಿತ್ತು. ವಿದ್ಯುತ್ ಸರಬರಾಜು ಪ್ರಾರಂಭವಾಗುತ್ತಿದ್ದಂತೆ ಉತ್ಪಾದನೆ ಶುರು ಮಾಡಲಾಗುವುದು’ ಎಂದು ಕಂಪನಿಯ ನಿರ್ದೇಶಕ ಸತೀಶ್ ಕೇಸರಿ ಹೇಳಿದರು.</p>.<p>ನಗರದಲ್ಲಿ ಕೇವಲ ಎರಡು ಆಕ್ಸಿಜನ್ ಉತ್ಪಾದಕ ಘಟಕಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>