ಬೆಂಗಳೂರು: ಹೆಬ್ಬಾಳದ ಪಶುವೈದ್ಯ ಕಾಲೇಜಿನ ಆವರಣದಲ್ಲಿ 60 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರ ಆರಂಭವಾಗಿದ್ದು, ಕೇಂದ್ರವನ್ನು ಶಾಸಕ ಬೈರತಿ ಸುರೇಶ್ ಗುರುವಾರ ಉದ್ಘಾಟಿಸಿದರು. ‘ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಇಲ್ಲದೇ ಪರದಾಡುವಂತ ಸ್ಥಿತಿ ಉಂಟಾಗಿದ್ದು, ಇದನ್ನು ದೃಷ್ಟಿಯಲ್ಲಿಟ್ಟು ಕೊಂಡು ಇಲ್ಲಿ ಕೇಂದ್ರ ಆರಂಭಿಸಲಾಗಿದೆ‘ ಎಂದು ಸುರೇಶ್ ಹೇಳಿದರು.