<p><strong>ಬೆಂಗಳೂರು: </strong>ನಗರದಲ್ಲಿ ಇತ್ತೀಚೆಗೆ ಸೋಂಕು ಪತ್ತೆ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡಿರುವುದರಿಂದ ಕೋವಿಡ್ ಆರೈಕೆ ಕೇಂದ್ರಗಳ ಹಾಸಿಗೆಗಳು ಖಾಲಿ ಉಳಿಯುತ್ತಿವೆ. ಆರೈಕೆಯ ಜೊತೆಗೆ ಉಚಿತ ಊಟೋಪಾಚಾರಗಳನ್ನು ಒದಗಿಸಿದರೂ ಈ ಕೇಂದ್ರಗಳಿಗೆ ದಾಖಲಾಗಲು ಸೋಂಕಿತರು ನಿರಾಸಕ್ತಿ ತೋರಿಸುತ್ತಿದ್ದಾರೆ.</p>.<p>ಬಿಬಿಎಂಪಿ ಸೋಮವಾರ ಬಿಡುಗಡೆ ಮಾಡಿರುವ ಅಂಕಿ–ಅಂಶ ಪ್ರಕಾರ, ನಗರದಲ್ಲಿರುವ 56 ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಒಟ್ಟು 3,026 ಹಾಸಿಗೆಗಳಿವೆ. ಅವುಗಳಲ್ಲಿ 583 ಹಾಸಿಗೆಗಳಷ್ಟೇ ಭರ್ತಿ ಆಗಿವೆ. ಒಟ್ಟು 2,443 ಹಾಸಿಗೆಗಳು ಖಾಲಿ ಉಳಿದಿವೆ.</p>.<p>‘ಕೋವಿಡ್ ಆರೈಕೆ ಕೇಂದ್ರಗಳ ಸ್ಥಿತಿಯನ್ನು ಪರಿಶೀಲಿಸುತ್ತಿದ್ದೇವೆ. ಇವುಗಳ ಹಾಸಿಗೆಗಳ ಸಂಖ್ಯೆ ಕಡಿಮೆ ಮಾಡಲು ಚಿಂತನೆ ನಡೆದಿದೆ. ಎಲ್ಲ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅಲ್ಲಿನ ಸೌಕರ್ಯಗಳನ್ನು ತೆರವುಗೊಳಿಸುವುದಿಲ್ಲ. ಕೆಲವೊಂದಷ್ಟನ್ನು ಉಳಿಸಿಕೊಳ್ಳುತ್ತೇವೆ. ಆದರೆ, ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಶುಶ್ರೂಷಕರ ಹೊಣೆಗಳ ಮರುಹಂಚಿಕೆ ಮಾಡುವ ಅಗತ್ಯವಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.</p>.<p>‘ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 16 ಚಿಕಿತ್ಸಾ ನಿರ್ಧಾರ ಕೇಂದ್ರಗಳಿವೆ (ಟ್ರಯಾಜ್ ಸೆಂಟರ್). ಇವುಗಳೆಲ್ಲವನ್ನೂ ಮುಂದುವರಿಸುತ್ತೇವೆ. ಅಲ್ಲಿನ ಸಿಬ್ಬಂದಿ ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಾರೆ. ಈ ಕೇಂದ್ರಗಳಲ್ಲಿ ಸೋಂಕಿತರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಡುವ ಸವಲತ್ತು ಕೂಡಾ ಲಭ್ಯ. ಹಾಸಿಗೆ ಕಾಯ್ದಿರಿಸಲು ಈಗ ಸಹಾಯವಾಣಿಯನ್ನು (1912) ಸಂಪರ್ಕಿಸಬೇಕಾದ ಅಗತ್ಯವಿಲ್ಲ’ ಎಂದರು.</p>.<p>‘ಕೆಲವು ದಿನಗಳಿಂದ ನಗರದಲ್ಲಿ ಸೋಂಕು ಪತ್ತೆ ಪ್ರಮಾಣ 3 ಸಾವಿರಕ್ಕಿಂತ ಕಡಿಮೆ ಇದೆ. ಒಂದು ದಿನದ ಅಂಕಿ–ಅಂಶ ಪರಿಗಣಿಸಿ ನಿರ್ಧಾರಕ್ಕೆ ಬಂದರೆ ತಪ್ಪಾಗುತ್ತದೆ. ಏಳು ದಿನಗಳ ಸರಾಸರಿ ಆಧರಿಸಿ ನಿರ್ಣಯಕ್ಕೆ ಬರಬೇಕು. ವೈದ್ಯರು, ಶುಶ್ರೂಷಕಿಯರು, ಅರೆವೈದ್ಯಕೀಯ ಸಿಬ್ಬಂದಿ ಸಹಕಾರದಿಂದ ಇದು ಸಾಧ್ಯವಾಗಿದೆ’ ಎಂದರು.</p>.<p>‘ಪ್ರಕರಣಗಳು ಮತ್ತಷ್ಟು ಹೆಚ್ಚಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆಯನ್ನು ಮತ್ತಷ್ಟು ಕಡಿಮೆಗೊಳಿಸಲು ಶ್ರಮಿಸಬೇಕು. ಸುರಕ್ಷತಾ ಕ್ರಮಗಳನ್ನು ಕೈಬಿಡಲಾಗದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಿಕೆಯನ್ನು ಮುಂದುವರಿಸಬೇಕು’ ಎಂದು ಸ್ಪಷ್ಟಪಡಿಸಿದರು.</p>.<p class="Briefhead"><strong>ಆಸ್ಪತ್ರೆಗಳಲ್ಲಿ 10 ಸಾವಿರ ಹಾಸಿಗೆ ಖಾಲಿ</strong></p>.<p>ಎರಡು ವಾರ ಹಿಂದಿನವರೆಗೂ ನಗರದ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಉಚಿತ ಚಿಕಿತ್ಸೆ ಪಡೆಯಲು ಹಾಸಿಗೆ ಕಾಯ್ದಿರಿಸಲು ಹರಸಾಹಸ ಪಡಬೇಕಾದ ಸ್ಥಿತಿ ಇತ್ತು. ಆದರೆ, ಸೋಮವಾರದ ಅಂಕಿ– ಅಂಶಗಳ ಪ್ರಕಾರ, ನಗರದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದ 10,186 ಹಾಸಿಗೆಗಳು ಖಾಲಿ ಉಳಿದಿವೆ.</p>.<p>ನಗರದ ವಿವಿಧ ಆಸ್ಪತ್ರೆಗಳಲ್ಲಿ ಬಿಬಿಎಂಪಿ ವತಿಯಿಂದ ದಾಖಲಾಗುವ ಕೊರೋನಾ ಸೋಂಕಿತರಿಗೆ 13,506 ಹಾಸಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಅವುಗಳಲ್ಲಿ 3,320 ಹಾಸಿಗೆಗಳು ಮಾತ್ರ ಪ್ರಸ್ತುತ ಬಳಕೆ ಆಗುತ್ತಿವೆ.</p>.<p>‘ಬಿಬಿಎಂಪಿ ವತಿಯಿಂದ ಚಿಕಿತ್ಸೆ ನೀಡಲು ಹಂಚಿಕೆಯಾದ ಹಾಸಿಗೆಗಳ ಸಂಖ್ಯೆಯನ್ನು ಕಡಿಮೆ ಮಾಡುವ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಗೌರವ್ ಗುಪ್ತ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಇತ್ತೀಚೆಗೆ ಸೋಂಕು ಪತ್ತೆ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡಿರುವುದರಿಂದ ಕೋವಿಡ್ ಆರೈಕೆ ಕೇಂದ್ರಗಳ ಹಾಸಿಗೆಗಳು ಖಾಲಿ ಉಳಿಯುತ್ತಿವೆ. ಆರೈಕೆಯ ಜೊತೆಗೆ ಉಚಿತ ಊಟೋಪಾಚಾರಗಳನ್ನು ಒದಗಿಸಿದರೂ ಈ ಕೇಂದ್ರಗಳಿಗೆ ದಾಖಲಾಗಲು ಸೋಂಕಿತರು ನಿರಾಸಕ್ತಿ ತೋರಿಸುತ್ತಿದ್ದಾರೆ.</p>.<p>ಬಿಬಿಎಂಪಿ ಸೋಮವಾರ ಬಿಡುಗಡೆ ಮಾಡಿರುವ ಅಂಕಿ–ಅಂಶ ಪ್ರಕಾರ, ನಗರದಲ್ಲಿರುವ 56 ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಒಟ್ಟು 3,026 ಹಾಸಿಗೆಗಳಿವೆ. ಅವುಗಳಲ್ಲಿ 583 ಹಾಸಿಗೆಗಳಷ್ಟೇ ಭರ್ತಿ ಆಗಿವೆ. ಒಟ್ಟು 2,443 ಹಾಸಿಗೆಗಳು ಖಾಲಿ ಉಳಿದಿವೆ.</p>.<p>‘ಕೋವಿಡ್ ಆರೈಕೆ ಕೇಂದ್ರಗಳ ಸ್ಥಿತಿಯನ್ನು ಪರಿಶೀಲಿಸುತ್ತಿದ್ದೇವೆ. ಇವುಗಳ ಹಾಸಿಗೆಗಳ ಸಂಖ್ಯೆ ಕಡಿಮೆ ಮಾಡಲು ಚಿಂತನೆ ನಡೆದಿದೆ. ಎಲ್ಲ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅಲ್ಲಿನ ಸೌಕರ್ಯಗಳನ್ನು ತೆರವುಗೊಳಿಸುವುದಿಲ್ಲ. ಕೆಲವೊಂದಷ್ಟನ್ನು ಉಳಿಸಿಕೊಳ್ಳುತ್ತೇವೆ. ಆದರೆ, ಈ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಶುಶ್ರೂಷಕರ ಹೊಣೆಗಳ ಮರುಹಂಚಿಕೆ ಮಾಡುವ ಅಗತ್ಯವಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.</p>.<p>‘ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 16 ಚಿಕಿತ್ಸಾ ನಿರ್ಧಾರ ಕೇಂದ್ರಗಳಿವೆ (ಟ್ರಯಾಜ್ ಸೆಂಟರ್). ಇವುಗಳೆಲ್ಲವನ್ನೂ ಮುಂದುವರಿಸುತ್ತೇವೆ. ಅಲ್ಲಿನ ಸಿಬ್ಬಂದಿ ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಾರೆ. ಈ ಕೇಂದ್ರಗಳಲ್ಲಿ ಸೋಂಕಿತರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಡುವ ಸವಲತ್ತು ಕೂಡಾ ಲಭ್ಯ. ಹಾಸಿಗೆ ಕಾಯ್ದಿರಿಸಲು ಈಗ ಸಹಾಯವಾಣಿಯನ್ನು (1912) ಸಂಪರ್ಕಿಸಬೇಕಾದ ಅಗತ್ಯವಿಲ್ಲ’ ಎಂದರು.</p>.<p>‘ಕೆಲವು ದಿನಗಳಿಂದ ನಗರದಲ್ಲಿ ಸೋಂಕು ಪತ್ತೆ ಪ್ರಮಾಣ 3 ಸಾವಿರಕ್ಕಿಂತ ಕಡಿಮೆ ಇದೆ. ಒಂದು ದಿನದ ಅಂಕಿ–ಅಂಶ ಪರಿಗಣಿಸಿ ನಿರ್ಧಾರಕ್ಕೆ ಬಂದರೆ ತಪ್ಪಾಗುತ್ತದೆ. ಏಳು ದಿನಗಳ ಸರಾಸರಿ ಆಧರಿಸಿ ನಿರ್ಣಯಕ್ಕೆ ಬರಬೇಕು. ವೈದ್ಯರು, ಶುಶ್ರೂಷಕಿಯರು, ಅರೆವೈದ್ಯಕೀಯ ಸಿಬ್ಬಂದಿ ಸಹಕಾರದಿಂದ ಇದು ಸಾಧ್ಯವಾಗಿದೆ’ ಎಂದರು.</p>.<p>‘ಪ್ರಕರಣಗಳು ಮತ್ತಷ್ಟು ಹೆಚ್ಚಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆಯನ್ನು ಮತ್ತಷ್ಟು ಕಡಿಮೆಗೊಳಿಸಲು ಶ್ರಮಿಸಬೇಕು. ಸುರಕ್ಷತಾ ಕ್ರಮಗಳನ್ನು ಕೈಬಿಡಲಾಗದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಿಕೆಯನ್ನು ಮುಂದುವರಿಸಬೇಕು’ ಎಂದು ಸ್ಪಷ್ಟಪಡಿಸಿದರು.</p>.<p class="Briefhead"><strong>ಆಸ್ಪತ್ರೆಗಳಲ್ಲಿ 10 ಸಾವಿರ ಹಾಸಿಗೆ ಖಾಲಿ</strong></p>.<p>ಎರಡು ವಾರ ಹಿಂದಿನವರೆಗೂ ನಗರದ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಉಚಿತ ಚಿಕಿತ್ಸೆ ಪಡೆಯಲು ಹಾಸಿಗೆ ಕಾಯ್ದಿರಿಸಲು ಹರಸಾಹಸ ಪಡಬೇಕಾದ ಸ್ಥಿತಿ ಇತ್ತು. ಆದರೆ, ಸೋಮವಾರದ ಅಂಕಿ– ಅಂಶಗಳ ಪ್ರಕಾರ, ನಗರದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದ 10,186 ಹಾಸಿಗೆಗಳು ಖಾಲಿ ಉಳಿದಿವೆ.</p>.<p>ನಗರದ ವಿವಿಧ ಆಸ್ಪತ್ರೆಗಳಲ್ಲಿ ಬಿಬಿಎಂಪಿ ವತಿಯಿಂದ ದಾಖಲಾಗುವ ಕೊರೋನಾ ಸೋಂಕಿತರಿಗೆ 13,506 ಹಾಸಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಅವುಗಳಲ್ಲಿ 3,320 ಹಾಸಿಗೆಗಳು ಮಾತ್ರ ಪ್ರಸ್ತುತ ಬಳಕೆ ಆಗುತ್ತಿವೆ.</p>.<p>‘ಬಿಬಿಎಂಪಿ ವತಿಯಿಂದ ಚಿಕಿತ್ಸೆ ನೀಡಲು ಹಂಚಿಕೆಯಾದ ಹಾಸಿಗೆಗಳ ಸಂಖ್ಯೆಯನ್ನು ಕಡಿಮೆ ಮಾಡುವ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಗೌರವ್ ಗುಪ್ತ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>