<p><strong>ಬೆಂಗಳೂರು: </strong>ನಗರದಲ್ಲಿ ಸೇವೆಗೆ ಸಜ್ಜಾಗಿದ್ದ ಎರಡು ಕೋವಿಡ್ ಆರೈಕೆ ಕೇಂದ್ರಗಳ ಎಲ್ಲ ಹಾಸಿಗೆಗಳು ಸೋಮವಾರ ಭರ್ತಿಯಾಗಿವೆ. ಮತ್ತೆ 738 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿನ ಲಕ್ಷಣ ಇಲ್ಲದ ರೋಗಿಗಳನ್ನು ಆರೈಕೆ ಕೇಂದ್ರಗಳಿಗೆ ಕಳುಹಿಸಲು ಸಾಧ್ಯವಾಗದೆ ಬಿಬಿಎಂಪಿ ಅಧಿಕಾರಿಗಳು ಪಡಿಪಾಟಲು ಅನುಭವಿಸಿದರು.</p>.<p>ಸೋಮವಾರ ಸೋಂಕು ದೃಢಪಟ್ಟವರು ಹಾಸಿಗೆಗಳ ಕೊರತೆಯಿಂದಾಗಿ ಸಮಸ್ಯೆ ಎದುರಿಸಬೇಕಾಗಿ ಬಂತು. ಸೋಂಕಿತರನ್ನು 12 ಗಂಟೆ ಒಳಗೆ ಆರೈಕೆ ಕೇಂದ್ರಕ್ಕೆ ಅಥವಾ ಆಸ್ಪತ್ರೆಗೆ ದಾಖಲಿಸುವ ಭರವಸೆಯನ್ನು ಉಳಿಸಿಕೊಳ್ಳಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ.</p>.<p>‘ಹಜ್ ಭವನದ 432 ಹಾಸಿಗೆಗಳು ಹಾಗೂ ಶ್ರೀ ಶ್ರೀ ರವಿಶಂಕರ್ ಗುರೂಜಿ ಆಯುರ್ವೇದ ಆಸ್ಪತ್ರೆಯಲ್ಲಿ ಸಜ್ಜುಗೊಳಿಸಲಾದ 176 ಹಾಸಿಗೆಗಳು ಸದ್ಯಕ್ಕೆ ಭರ್ತಿಯಾಗಿವೆ’ ಎಂದು ಆರೈಕೆ ಕೇಂದ್ರಗಳ ಉಸ್ತುವಾರಿ ವಹಿಸಿರುವ ರಾಜೇಂದರ್ ಕುಮಾರ್ ಕಟಾರಿಯಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಜಿಕೆವಿಕೆ ಪ್ರಾಂಗಣದಲ್ಲಿರುವ ಕೃಷಿ ವಿಶ್ವವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ 620 ಹಾಸಿಗೆಗಳು ಸಜ್ಜಾಗಿವೆ. ಅಲ್ಲಿ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ ಅವರಿಗೆ ಸೋಮವಾರ ತರಬೇತಿ ನೀಡಲಾಗಿದೆ. ಸೋಂಕಿನ ಲಕ್ಷಣ ಇಲ್ಲದ ರೋಗಿಗಳನ್ನು ಮಂಗಳವಾರದಿಂದ ಇಲ್ಲಿಗೆ ಸ್ಥಳಾಂತರ ಮಾಡಲಿದ್ದೇವೆ’ ಎಂದರು.</p>.<p>‘ಜಿಕೆವಿಕೆ ಬಳಿಯ ತೋಟಗಾರಿಕಾ ಕಾಲೇಜಿನ ಹಾಸ್ಟೆಲ್ಗಳಲ್ಲಿ 400 ಹಾಸಿಗೆಗಳು ಮಂಗಳವಾರ ಸಂಜೆ ಒಳಗೆ ಸಜ್ಜಾಗಲಿವೆ. ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) 5ಸಾವಿರದ ಬದಲು 7 ಸಾವಿರ ಹಾಸಿಗೆಗಳನ್ನು ಅಳವಡಿಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಅಲ್ಲಿಗೂ ಸೋಂಕಿತರನ್ನು ಕಳುಹಿಸಿಕೊಡಬಹುದು’ ಎಂದರು.</p>.<p>‘ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ಗಳಲ್ಲಿ 750 ಹಾಸಿಗೆಗಳು, ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ 200, ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ 250ಹಾಸಿಗೆಗಳು ನಾಳೆ ಸಜ್ಜಾಗಲಿವೆ’ ಎಂದರು.</p>.<p><strong>‘ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆ ಹೆಚ್ಚಳ’</strong><br />ನಗರದಲ್ಲಿ ಖಾಸಗಿ ಆಸ್ಪತ್ರೆಗಳ ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ಗೆ ಚಿಕಿತ್ಸೆಗೆ ಕಾಯ್ದಿರಿಸಲಾಗಿದೆ. ಹಾಗಾಗಿ ಕೋವಿಡ್ಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಹಾಸಿಗೆಗಳ ಲಭ್ಯತೆ ಹೆಚ್ಚಳವಾಗಿದೆ.</p>.<p>‘ಸದ್ಯ 3819 ಆಸ್ಪತ್ರೆಗಳನ್ನು ಕೊರೊನಾ ಸೋಂಕಿತರಿಗಾಗಿ ಹಂಚಿಕೆ ಮಾಡಲಾಗಿದ್ದು, ಅವುಗಳಲ್ಲಿ 1522 ಹಾಸಿಗೆಗಳು ಭರ್ತಿ ಆಗಿವೆ. ಇನ್ನೂ 2,297 ಹಾಸಿಗೆಗಳು ತೀವ್ರ ಸಮಸ್ಯೆ ಎದುರಿಸುವ ರೋಗಿಗಳ ಚಿಕಿತ್ಸೆಗಾಗಿ ಲಭ್ಯ ಇವೆ’ ಎಂದು ಬಿಬಿಎಂಪಿ ಹೆಚ್ಚುವರಿ ಆಯುಕ್ತ ಡಿ.ರಂದೀಪ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>50 ವರ್ಷ ಮೇಲ್ಪಟ್ಟ ಬಿಎಂಟಿಸಿ ಸಿಬ್ಬಂದಿಗೆ ರಜೆ</strong><br />ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಎಲ್ಲಾ ಸಿಬ್ಬಂದಿ ಮತ್ತು 50 ವರ್ಷ ಮೇಲ್ಪಟ್ಟ ನೌಕರರಿಗೆ ರಜೆ ನೀಡಲು ಬಿಎಂಟಿಸಿ ನಿರ್ಧರಿಸಿದೆ.</p>.<p>ಚಾಲಕ ನಿರ್ವಾಹಕ ಮಾತ್ರವಲ್ಲದೆ 50 ವರ್ಷ ಮೇಲ್ಪಟ್ಟ 3 ಮತ್ತು 4ನೇ ದರ್ಜೆಯ ಎಲ್ಲಾ ವಿಭಾಗದ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದ್ದು, ರಜೆಗಳನ್ನು ಪಡೆಯಬಹುದು.</p>.<p>‘ಉಸಿರಾಟದ ತೊಂದರೆ, ಹೃದಯ ಸಮಸ್ಯೆ, ಮಧುಮೇಹ, ಮೂತ್ರಪಿಂಡ ಸಮಸ್ಯೆಗಳಿಂದ ಬಳಲುತ್ತಿರುವ ಯಾವುದೇ ವಯಸ್ಸಿನ ಸಿಬ್ಬಂದಿ ರಜೆ ಪಡೆಯಬಹುದು. ಒಂದು ವೇಳೆ ಹಂಚಿಕೆಯಾಗಿರುವ ರಜೆ ಇಲ್ಲದಿದ್ದರೆ, ಗಂಭೀರತೆ ಪರಿಶೀಲಿಸಿ ಮುಂಗಡ ರಜೆ ಮಂಜೂರು ಮಾಡಲಾಗುವುದು’ ಎಂದು ಬಿಎಂಟಿಸಿ ತಿಳಿಸಿದೆ.</p>.<p>ತರಬೇತಿ ನೌಕರರು ಸಹ ಆರೋಗ್ಯ ಸಮಸ್ಯೆ ಇದ್ದರೆ ರಜೆ ಪಡೆಯಬಹುದು. ರಜೆ ಇಲ್ಲದಿದ್ದರೆ ವೇತನ ರಹಿತ ರಜೆ ಸಿಗಲಿದೆ ಎಂದು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಸೇವೆಗೆ ಸಜ್ಜಾಗಿದ್ದ ಎರಡು ಕೋವಿಡ್ ಆರೈಕೆ ಕೇಂದ್ರಗಳ ಎಲ್ಲ ಹಾಸಿಗೆಗಳು ಸೋಮವಾರ ಭರ್ತಿಯಾಗಿವೆ. ಮತ್ತೆ 738 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿನ ಲಕ್ಷಣ ಇಲ್ಲದ ರೋಗಿಗಳನ್ನು ಆರೈಕೆ ಕೇಂದ್ರಗಳಿಗೆ ಕಳುಹಿಸಲು ಸಾಧ್ಯವಾಗದೆ ಬಿಬಿಎಂಪಿ ಅಧಿಕಾರಿಗಳು ಪಡಿಪಾಟಲು ಅನುಭವಿಸಿದರು.</p>.<p>ಸೋಮವಾರ ಸೋಂಕು ದೃಢಪಟ್ಟವರು ಹಾಸಿಗೆಗಳ ಕೊರತೆಯಿಂದಾಗಿ ಸಮಸ್ಯೆ ಎದುರಿಸಬೇಕಾಗಿ ಬಂತು. ಸೋಂಕಿತರನ್ನು 12 ಗಂಟೆ ಒಳಗೆ ಆರೈಕೆ ಕೇಂದ್ರಕ್ಕೆ ಅಥವಾ ಆಸ್ಪತ್ರೆಗೆ ದಾಖಲಿಸುವ ಭರವಸೆಯನ್ನು ಉಳಿಸಿಕೊಳ್ಳಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ.</p>.<p>‘ಹಜ್ ಭವನದ 432 ಹಾಸಿಗೆಗಳು ಹಾಗೂ ಶ್ರೀ ಶ್ರೀ ರವಿಶಂಕರ್ ಗುರೂಜಿ ಆಯುರ್ವೇದ ಆಸ್ಪತ್ರೆಯಲ್ಲಿ ಸಜ್ಜುಗೊಳಿಸಲಾದ 176 ಹಾಸಿಗೆಗಳು ಸದ್ಯಕ್ಕೆ ಭರ್ತಿಯಾಗಿವೆ’ ಎಂದು ಆರೈಕೆ ಕೇಂದ್ರಗಳ ಉಸ್ತುವಾರಿ ವಹಿಸಿರುವ ರಾಜೇಂದರ್ ಕುಮಾರ್ ಕಟಾರಿಯಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಜಿಕೆವಿಕೆ ಪ್ರಾಂಗಣದಲ್ಲಿರುವ ಕೃಷಿ ವಿಶ್ವವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ 620 ಹಾಸಿಗೆಗಳು ಸಜ್ಜಾಗಿವೆ. ಅಲ್ಲಿ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ ಅವರಿಗೆ ಸೋಮವಾರ ತರಬೇತಿ ನೀಡಲಾಗಿದೆ. ಸೋಂಕಿನ ಲಕ್ಷಣ ಇಲ್ಲದ ರೋಗಿಗಳನ್ನು ಮಂಗಳವಾರದಿಂದ ಇಲ್ಲಿಗೆ ಸ್ಥಳಾಂತರ ಮಾಡಲಿದ್ದೇವೆ’ ಎಂದರು.</p>.<p>‘ಜಿಕೆವಿಕೆ ಬಳಿಯ ತೋಟಗಾರಿಕಾ ಕಾಲೇಜಿನ ಹಾಸ್ಟೆಲ್ಗಳಲ್ಲಿ 400 ಹಾಸಿಗೆಗಳು ಮಂಗಳವಾರ ಸಂಜೆ ಒಳಗೆ ಸಜ್ಜಾಗಲಿವೆ. ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) 5ಸಾವಿರದ ಬದಲು 7 ಸಾವಿರ ಹಾಸಿಗೆಗಳನ್ನು ಅಳವಡಿಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಅಲ್ಲಿಗೂ ಸೋಂಕಿತರನ್ನು ಕಳುಹಿಸಿಕೊಡಬಹುದು’ ಎಂದರು.</p>.<p>‘ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ಗಳಲ್ಲಿ 750 ಹಾಸಿಗೆಗಳು, ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ 200, ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ 250ಹಾಸಿಗೆಗಳು ನಾಳೆ ಸಜ್ಜಾಗಲಿವೆ’ ಎಂದರು.</p>.<p><strong>‘ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆ ಹೆಚ್ಚಳ’</strong><br />ನಗರದಲ್ಲಿ ಖಾಸಗಿ ಆಸ್ಪತ್ರೆಗಳ ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ಗೆ ಚಿಕಿತ್ಸೆಗೆ ಕಾಯ್ದಿರಿಸಲಾಗಿದೆ. ಹಾಗಾಗಿ ಕೋವಿಡ್ಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಹಾಸಿಗೆಗಳ ಲಭ್ಯತೆ ಹೆಚ್ಚಳವಾಗಿದೆ.</p>.<p>‘ಸದ್ಯ 3819 ಆಸ್ಪತ್ರೆಗಳನ್ನು ಕೊರೊನಾ ಸೋಂಕಿತರಿಗಾಗಿ ಹಂಚಿಕೆ ಮಾಡಲಾಗಿದ್ದು, ಅವುಗಳಲ್ಲಿ 1522 ಹಾಸಿಗೆಗಳು ಭರ್ತಿ ಆಗಿವೆ. ಇನ್ನೂ 2,297 ಹಾಸಿಗೆಗಳು ತೀವ್ರ ಸಮಸ್ಯೆ ಎದುರಿಸುವ ರೋಗಿಗಳ ಚಿಕಿತ್ಸೆಗಾಗಿ ಲಭ್ಯ ಇವೆ’ ಎಂದು ಬಿಬಿಎಂಪಿ ಹೆಚ್ಚುವರಿ ಆಯುಕ್ತ ಡಿ.ರಂದೀಪ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>50 ವರ್ಷ ಮೇಲ್ಪಟ್ಟ ಬಿಎಂಟಿಸಿ ಸಿಬ್ಬಂದಿಗೆ ರಜೆ</strong><br />ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಎಲ್ಲಾ ಸಿಬ್ಬಂದಿ ಮತ್ತು 50 ವರ್ಷ ಮೇಲ್ಪಟ್ಟ ನೌಕರರಿಗೆ ರಜೆ ನೀಡಲು ಬಿಎಂಟಿಸಿ ನಿರ್ಧರಿಸಿದೆ.</p>.<p>ಚಾಲಕ ನಿರ್ವಾಹಕ ಮಾತ್ರವಲ್ಲದೆ 50 ವರ್ಷ ಮೇಲ್ಪಟ್ಟ 3 ಮತ್ತು 4ನೇ ದರ್ಜೆಯ ಎಲ್ಲಾ ವಿಭಾಗದ ಸಿಬ್ಬಂದಿಗೂ ಈ ನಿಯಮ ಅನ್ವಯವಾಗಲಿದ್ದು, ರಜೆಗಳನ್ನು ಪಡೆಯಬಹುದು.</p>.<p>‘ಉಸಿರಾಟದ ತೊಂದರೆ, ಹೃದಯ ಸಮಸ್ಯೆ, ಮಧುಮೇಹ, ಮೂತ್ರಪಿಂಡ ಸಮಸ್ಯೆಗಳಿಂದ ಬಳಲುತ್ತಿರುವ ಯಾವುದೇ ವಯಸ್ಸಿನ ಸಿಬ್ಬಂದಿ ರಜೆ ಪಡೆಯಬಹುದು. ಒಂದು ವೇಳೆ ಹಂಚಿಕೆಯಾಗಿರುವ ರಜೆ ಇಲ್ಲದಿದ್ದರೆ, ಗಂಭೀರತೆ ಪರಿಶೀಲಿಸಿ ಮುಂಗಡ ರಜೆ ಮಂಜೂರು ಮಾಡಲಾಗುವುದು’ ಎಂದು ಬಿಎಂಟಿಸಿ ತಿಳಿಸಿದೆ.</p>.<p>ತರಬೇತಿ ನೌಕರರು ಸಹ ಆರೋಗ್ಯ ಸಮಸ್ಯೆ ಇದ್ದರೆ ರಜೆ ಪಡೆಯಬಹುದು. ರಜೆ ಇಲ್ಲದಿದ್ದರೆ ವೇತನ ರಹಿತ ರಜೆ ಸಿಗಲಿದೆ ಎಂದು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>