<p><strong>ಬೆಂಗಳೂರು:</strong> ನಗರದಲ್ಲಿ ಕೋವಿಡ್ ಹೊಸ ಪ್ರಕರಣಗಳ ಜತೆಗೆ ಆಸ್ಪತ್ರೆ ದಾಖಲಾತಿಯೂ ಹೆಚ್ಚಳವಾಗಿದ್ದು, ಸದ್ಯ 68 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. </p>.<p>ಬೆಂಗಳೂರಿನಲ್ಲಿ 53 ಸೇರಿ ರಾಜ್ಯದಲ್ಲಿ 71 ಪ್ರಕರಣಗಳು ಸೋಮವಾರ ವರದಿಯಾಗಿವೆ. ನಗರದಲ್ಲಿ 394 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಲ್ಲಿ 50 ಮಂದಿ ಸಾಮಾನ್ಯ ಹಾಸಿಗೆ, 13 ಮಂದಿ ಐಸಿಯು ಹಾಗೂ 5 ಮಂದಿ ಎಚ್ಡಿಯು ಹಾಸಿಗೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಸೋಂಕು ದೃಢ ಪ್ರಮಾಣ ಶೇ 7.94ಕ್ಕೆ ತಲುಪಿದೆ. </p>.<p>ವಾರದ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳನ್ನು ಬಿಬಿಎಂಪಿ ವಾರ್ ರೂಮ್ ವಿಶ್ಲೇಷಿಸಿದೆ. ಏಳು ದಿನ ಗಳಲ್ಲಿ 5,301 ಕೋವಿಡ್ ಪರೀಕ್ಷೆ<br />ಗಳನ್ನು ನಡೆಸಲಾಗಿದ್ದು, 413 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ಅವಧಿಯಲ್ಲಿ 343 ಮಂದಿ ಚೇತರಿಸಿಕೊಂಡಿದ್ದು, ಒಬ್ಬರು ಮೃತಪಟ್ಟಿದ್ದಾರೆ.</p>.<p>10 ದಿನಗಳಿಂದ ಬೆಳ್ಳಂದೂರು, ಎಚ್.ಎಸ್.ಆರ್. ಲೇಔಟ್ನಲ್ಲಿ ಸರಾಸರಿ ಮೂರು ಪ್ರಕರಣಗಳು, ದೊಡ್ಡ ನೆಕ್ಕುಂದಿ, ಹೂಡಿ, ವರ್ತೂರು, ಅರಮನೆ ನಗರ, ಕೊನೇನ ಅಗ್ರಹಾರ, ಹೆಮ್ಮಿಗೆಪುರ, ಕೊಟ್ಟಿಗೆಪಾಳ್ಯ ಹಾಗೂ ಹಗದೂರು ವಾರ್ಡ್ನಲ್ಲಿ ತಲಾ 2 ಪ್ರಕರಣಗಳು ವರದಿಯಾಗುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಕೋವಿಡ್ ಹೊಸ ಪ್ರಕರಣಗಳ ಜತೆಗೆ ಆಸ್ಪತ್ರೆ ದಾಖಲಾತಿಯೂ ಹೆಚ್ಚಳವಾಗಿದ್ದು, ಸದ್ಯ 68 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. </p>.<p>ಬೆಂಗಳೂರಿನಲ್ಲಿ 53 ಸೇರಿ ರಾಜ್ಯದಲ್ಲಿ 71 ಪ್ರಕರಣಗಳು ಸೋಮವಾರ ವರದಿಯಾಗಿವೆ. ನಗರದಲ್ಲಿ 394 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಲ್ಲಿ 50 ಮಂದಿ ಸಾಮಾನ್ಯ ಹಾಸಿಗೆ, 13 ಮಂದಿ ಐಸಿಯು ಹಾಗೂ 5 ಮಂದಿ ಎಚ್ಡಿಯು ಹಾಸಿಗೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಸೋಂಕು ದೃಢ ಪ್ರಮಾಣ ಶೇ 7.94ಕ್ಕೆ ತಲುಪಿದೆ. </p>.<p>ವಾರದ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳನ್ನು ಬಿಬಿಎಂಪಿ ವಾರ್ ರೂಮ್ ವಿಶ್ಲೇಷಿಸಿದೆ. ಏಳು ದಿನ ಗಳಲ್ಲಿ 5,301 ಕೋವಿಡ್ ಪರೀಕ್ಷೆ<br />ಗಳನ್ನು ನಡೆಸಲಾಗಿದ್ದು, 413 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ಅವಧಿಯಲ್ಲಿ 343 ಮಂದಿ ಚೇತರಿಸಿಕೊಂಡಿದ್ದು, ಒಬ್ಬರು ಮೃತಪಟ್ಟಿದ್ದಾರೆ.</p>.<p>10 ದಿನಗಳಿಂದ ಬೆಳ್ಳಂದೂರು, ಎಚ್.ಎಸ್.ಆರ್. ಲೇಔಟ್ನಲ್ಲಿ ಸರಾಸರಿ ಮೂರು ಪ್ರಕರಣಗಳು, ದೊಡ್ಡ ನೆಕ್ಕುಂದಿ, ಹೂಡಿ, ವರ್ತೂರು, ಅರಮನೆ ನಗರ, ಕೊನೇನ ಅಗ್ರಹಾರ, ಹೆಮ್ಮಿಗೆಪುರ, ಕೊಟ್ಟಿಗೆಪಾಳ್ಯ ಹಾಗೂ ಹಗದೂರು ವಾರ್ಡ್ನಲ್ಲಿ ತಲಾ 2 ಪ್ರಕರಣಗಳು ವರದಿಯಾಗುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>