<p><strong>ಬೆಂಗಳೂರು</strong>: ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಪಾದರಾಯನಪುರ ವಾರ್ಡ್ ಕಾರ್ಪೊರೇಟರ್ ಇಮ್ರಾನ್ ಪಾಷ ಭಾನುವಾರ ಬಿಡುಗಡೆ ಆಗಿದ್ದು, ಅವರನ್ನು ಬೆಂಬಲಿಗರು ಆಸ್ಪತ್ರೆಯಿಂದ ಮನೆಯವರೆಗೂ ಮೆರವಣಿಗೆ ಮೂಲಕ ಕರೆದೊಯ್ದರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.</p>.<p>ಬಿಡುಗಡೆ ಮಾಹಿತಿ ತಿಳಿದಿದ್ದ ಬೆಂಬಲಿಗರು 50ಕ್ಕೂ ಹೆಚ್ಚು ಬೈಕ್ ಹಾಗೂ ಕಾರುಗಳಲ್ಲಿ ಆಸ್ಪತ್ರೆಗೆ ಬಂದಿದ್ದರು. ಇಮ್ರಾನ್ ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಘೋಷಣೆ ಕೂಗಿ ಸ್ವಾಗತಿಸಿದರು. ನಂತರ, ಆಸ್ಪತ್ರೆಯಿಂದಲೇ ಮನೆಯವರೆಗೂಮೆರವಣಿಗೆ ನಡೆಸಿದರು. ರಸ್ತೆಯಲ್ಲಿದ್ದ ವರನಟ ರಾಜ್ಕುಮಾರ್ ಅವರ ಪುತ್ಥಳಿಗೆ ಇಮ್ರಾನ್ ಮಾಲಾರ್ಪಣೆ ಮಾಡಿದರು.</p>.<p>ಮೆರವಣಿಗೆಯಲ್ಲಿ ಒಂದೇ ಬೈಕ್ನಲ್ಲಿ ಮೂವರು ಸಂಚರಿಸುತ್ತಿದ್ದರು. ಹಲವರು ಮಾಸ್ಕ್ ಧರಿಸಿರಲಿಲ್ಲ. ಅಂತರವನ್ನು ಕಾಯ್ದುಕೊಂಡಿರಲಿಲ್ಲ. ಹೋಂ ಕ್ವಾರಂಟೈನ್ನಲ್ಲಿರಬೇಕಾದ ವ್ಯಕ್ತಿಗಳೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು. ಸಿರಸಿ ವೃತ್ತದಲ್ಲಿ ಪಟಾಕಿ ಸಿಡಿಸಲಾಯಿತು. ಮೆರವಣಿಗೆ ಕಂಡ ಸ್ಥಳೀಯರಲ್ಲೂ ಆತಂಕ ಉಂಟಾಗಿತ್ತು.</p>.<p>ಮೆರವಣಿಗೆ ಮಾಹಿತಿ ಪಡೆದ ಪೊಲೀಸರು, ಸ್ಥಳಕ್ಕೆ ಹೋಗಿ ಇಮ್ರಾನ್ ಪಾಷ ಅವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಕಾರಾಗೃಹದ ಸೆಲ್ನಲ್ಲಿ ಅವರನ್ನು ಇರಿಸಿರುವ ಮಾಹಿತಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಪಾದರಾಯನಪುರ ವಾರ್ಡ್ ಕಾರ್ಪೊರೇಟರ್ ಇಮ್ರಾನ್ ಪಾಷ ಭಾನುವಾರ ಬಿಡುಗಡೆ ಆಗಿದ್ದು, ಅವರನ್ನು ಬೆಂಬಲಿಗರು ಆಸ್ಪತ್ರೆಯಿಂದ ಮನೆಯವರೆಗೂ ಮೆರವಣಿಗೆ ಮೂಲಕ ಕರೆದೊಯ್ದರು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.</p>.<p>ಬಿಡುಗಡೆ ಮಾಹಿತಿ ತಿಳಿದಿದ್ದ ಬೆಂಬಲಿಗರು 50ಕ್ಕೂ ಹೆಚ್ಚು ಬೈಕ್ ಹಾಗೂ ಕಾರುಗಳಲ್ಲಿ ಆಸ್ಪತ್ರೆಗೆ ಬಂದಿದ್ದರು. ಇಮ್ರಾನ್ ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಘೋಷಣೆ ಕೂಗಿ ಸ್ವಾಗತಿಸಿದರು. ನಂತರ, ಆಸ್ಪತ್ರೆಯಿಂದಲೇ ಮನೆಯವರೆಗೂಮೆರವಣಿಗೆ ನಡೆಸಿದರು. ರಸ್ತೆಯಲ್ಲಿದ್ದ ವರನಟ ರಾಜ್ಕುಮಾರ್ ಅವರ ಪುತ್ಥಳಿಗೆ ಇಮ್ರಾನ್ ಮಾಲಾರ್ಪಣೆ ಮಾಡಿದರು.</p>.<p>ಮೆರವಣಿಗೆಯಲ್ಲಿ ಒಂದೇ ಬೈಕ್ನಲ್ಲಿ ಮೂವರು ಸಂಚರಿಸುತ್ತಿದ್ದರು. ಹಲವರು ಮಾಸ್ಕ್ ಧರಿಸಿರಲಿಲ್ಲ. ಅಂತರವನ್ನು ಕಾಯ್ದುಕೊಂಡಿರಲಿಲ್ಲ. ಹೋಂ ಕ್ವಾರಂಟೈನ್ನಲ್ಲಿರಬೇಕಾದ ವ್ಯಕ್ತಿಗಳೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು. ಸಿರಸಿ ವೃತ್ತದಲ್ಲಿ ಪಟಾಕಿ ಸಿಡಿಸಲಾಯಿತು. ಮೆರವಣಿಗೆ ಕಂಡ ಸ್ಥಳೀಯರಲ್ಲೂ ಆತಂಕ ಉಂಟಾಗಿತ್ತು.</p>.<p>ಮೆರವಣಿಗೆ ಮಾಹಿತಿ ಪಡೆದ ಪೊಲೀಸರು, ಸ್ಥಳಕ್ಕೆ ಹೋಗಿ ಇಮ್ರಾನ್ ಪಾಷ ಅವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಕಾರಾಗೃಹದ ಸೆಲ್ನಲ್ಲಿ ಅವರನ್ನು ಇರಿಸಿರುವ ಮಾಹಿತಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>