<p><strong>ಬೆಂಗಳೂರು</strong>: ಹೋಮ್ ಕ್ವಾರಂಟೈನ್ ವಿಧಿಸಿದ್ದರೂ ನಿಯಮ ಉಲ್ಲಂಘಿಸಿ ಹೊರಗೆ ಅಡ್ಡಾಡಿದ ಮೂವರ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ.</p>.<p>ಬಿಬಿಎಂಪಿ ಎಚ್ಎಸ್ಆರ್ ಉಪ ವಿಭಾಗದ ವ್ಯಾಪ್ತಿಗೆ ಬರುವ ಗಾರ್ವೇಬಾವಿ ಪಾಳ್ಯ ಶಂಕರನಾರಾಯಣ ರೆಸಿಡೆನ್ಸಿಯಲ್ಲಿ ನಿವಾಸಿ ಎಸ್.ಎಂ. ಕೃಷ್ಣ ಎಂಬುವರಿಗೆ ಜೂನ್ 25ರಿಂದ ಜುಲೈ 2ರವರೆಗೆ ಹೋಮ್ ಕ್ವಾರಂಟೈನ್ ವಿಧಿಸಲಾಗಿತ್ತು. ಅದನ್ನು ಉಲ್ಲಂಘಿಸಿ ಅವರು ಹೊರಗೆ ಓಡಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ವಾಟ್ಸ್ಆ್ಯಪ್ ಮೂಲಕ ದೂರು ನೀಡಿದ್ದರು. ಪರಿಶೀಲನೆ ನಡೆಸಲು ಬಿಬಿಎಂಪಿ ಅಧಿಕಾರಿ ಬಂದಾಗ ಕೃಷ್ಣ ಅವರು ತಮ್ಮ ಮನೆಯಲ್ಲಿ ಇರಲಿಲ್ಲ. ಹೀಗಾಗಿ, ಬೇಗೂರು ಠಾಣೆಗೆ ತೆರಳಿ ದೂರು ನೀಡಿದ್ದರು.</p>.<p>ಅದೇ ರೀತಿ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹೊಸಪಾಳ್ಯದ ನಿವಾಸಿ ಚಕ್ರಧರ ಮತ್ತು ಕೂಡ್ಲುಗೇಟ್ ನೋವೆಲ್ ಪಾರ್ಕ್ ನಿವಾಸಿ ಗೌತಮ್ ಎಂಬವರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಾಗಿವೆ.</p>.<p>ನಗರದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಮಾಸ್ಕ್ ಧರಿಸದೆ ಹೊರಗಡೆ ಬಂದರೆ ಅಂಥವರ ವಿರುದ್ಧವೂ ದೂರು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೋಮ್ ಕ್ವಾರಂಟೈನ್ ವಿಧಿಸಿದ್ದರೂ ನಿಯಮ ಉಲ್ಲಂಘಿಸಿ ಹೊರಗೆ ಅಡ್ಡಾಡಿದ ಮೂವರ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ.</p>.<p>ಬಿಬಿಎಂಪಿ ಎಚ್ಎಸ್ಆರ್ ಉಪ ವಿಭಾಗದ ವ್ಯಾಪ್ತಿಗೆ ಬರುವ ಗಾರ್ವೇಬಾವಿ ಪಾಳ್ಯ ಶಂಕರನಾರಾಯಣ ರೆಸಿಡೆನ್ಸಿಯಲ್ಲಿ ನಿವಾಸಿ ಎಸ್.ಎಂ. ಕೃಷ್ಣ ಎಂಬುವರಿಗೆ ಜೂನ್ 25ರಿಂದ ಜುಲೈ 2ರವರೆಗೆ ಹೋಮ್ ಕ್ವಾರಂಟೈನ್ ವಿಧಿಸಲಾಗಿತ್ತು. ಅದನ್ನು ಉಲ್ಲಂಘಿಸಿ ಅವರು ಹೊರಗೆ ಓಡಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ವಾಟ್ಸ್ಆ್ಯಪ್ ಮೂಲಕ ದೂರು ನೀಡಿದ್ದರು. ಪರಿಶೀಲನೆ ನಡೆಸಲು ಬಿಬಿಎಂಪಿ ಅಧಿಕಾರಿ ಬಂದಾಗ ಕೃಷ್ಣ ಅವರು ತಮ್ಮ ಮನೆಯಲ್ಲಿ ಇರಲಿಲ್ಲ. ಹೀಗಾಗಿ, ಬೇಗೂರು ಠಾಣೆಗೆ ತೆರಳಿ ದೂರು ನೀಡಿದ್ದರು.</p>.<p>ಅದೇ ರೀತಿ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹೊಸಪಾಳ್ಯದ ನಿವಾಸಿ ಚಕ್ರಧರ ಮತ್ತು ಕೂಡ್ಲುಗೇಟ್ ನೋವೆಲ್ ಪಾರ್ಕ್ ನಿವಾಸಿ ಗೌತಮ್ ಎಂಬವರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಾಗಿವೆ.</p>.<p>ನಗರದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಮಾಸ್ಕ್ ಧರಿಸದೆ ಹೊರಗಡೆ ಬಂದರೆ ಅಂಥವರ ವಿರುದ್ಧವೂ ದೂರು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>