<p><strong>ಬೆಂಗಳೂರು</strong>: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣಬೆಂಗಳೂರು ನಗರ ಜಿಲ್ಲೆಯಲ್ಲಿ ಜ. 31ರವರೆಗೆ ಭೌತಿಕ ತರಗತಿಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಆದರೂ ಜ್ಞಾನಭಾರತಿ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಯ ಪರೀಕ್ಷೆಗಳನ್ನು ಸೋಮವಾರ ನಡೆಸಿದೆ.</p>.<p>50ಕ್ಕೂ ಹೆಚ್ಚು ವಿವಿಧ ಸ್ನಾತಕೋತ್ತರ ವಿಭಾಗಗಳ ಸುಮಾರು 700 ವಿದ್ಯಾರ್ಥಿಗಳು ಭೌತಿಕವಾಗಿ ನಡೆದ ಪರೀಕ್ಷೆಗೆ ಹಾಜರಾದರು.</p>.<p>ಎಸ್ಎಸ್ಎಲ್ಸಿ, ಪದವಿಪೂರ್ವ ತರಗತಿ, ಎಂಜಿನಿಯರಿಂಗ್, ವೈದ್ಯಕೀಯ, ಅರೆವೈದ್ಯಕೀಯ ಕೋರ್ಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕೋರ್ಸ್ಗಳ ಭೌತಿಕ ತರಗತಿಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.</p>.<p>ಸಾಮಾನ್ಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ವಿನಾಯಿತಿ ನೀಡದೇ ಇದ್ದರೂ, ವಿಶ್ವವಿದ್ಯಾಲಯದ ಅಧಿಕಾರಿಗಳು ಪರೀಕ್ಷೆ ನಡೆಸಿದ್ದಾರೆ. ಅಲ್ಲದೆ, ಕೆಲವು ಸೋಂಕಿತ ವಿದ್ಯಾರ್ಥಿಗಳು ಕೂಡಾ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಿದ್ದರೂ, ಅವರು ಇತರರ ಸಂಪರ್ಕಕ್ಕೆ ಬಂದಿರುವ ಸಾಧ್ಯತೆ ಇದೆ’ ಎಂದು ಪರೀಕ್ಷೆಗೆ ಹಾಜರಾದ ಕೆಲವು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು, ‘ಪರೀಕ್ಷೆಗಳನ್ನು ನಡೆಸದಂತೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಅಲ್ಲದೆ, ಅಂಥ ಯಾವುದೇ ಆದೇಶ ನಮಗೆ ಬಂದಿಲ್ಲ’ ಎಂದರು.</p>.<p>‘ವರ್ಷದ ಹಿಂದೆಯೇ ಈ ಪರೀಕ್ಷೆ ನಡೆಯಬೇಕಿತ್ತು. ನಾನಾ ಕಾರಣಗಳಿಂದ ವಿಳಂಬವಾಗಿದೆ. ಇನ್ನೂ ವಿಳಂಬವಾದರೆ, ಪಿಎಚ್.ಡಿ. ನೋಂದಣಿ ವಿಳಂಬ ಆಗಲಿದೆ. ಅಲ್ಲದೆ, ವಿದ್ಯಾರ್ಥಿಗಳು ಶಿಷ್ಯವೇತನದಿಂದಲೂ ವಂಚಿತರಾಗುವ ಸಾಧ್ಯತೆ ಇದೆ’ ಎಂದೂ ಅವರು ಹೇಳಿದರು.</p>.<p>ಪ್ರಥಮ ವರ್ಷದ ಪಿ.ಎಚ್ಡಿ ಕೋರ್ಸ್ಗೆ ಪರೀಕ್ಷೆ ಇನ್ನೂ ಮೂರು ದಿನ ನಡೆಯಲಿದೆ. ಪರೀಕ್ಷೆಯನ್ನು ರದ್ದುಪಡಿಸುವ ಅಥವಾ ಮುಂದೂಡುವ ಬಗ್ಗೆ ವಿಶ್ವವಿದ್ಯಾಲಯ ಯಾವುದೇ ಪ್ರಕಟಣೆ ಹೊರಡಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣಬೆಂಗಳೂರು ನಗರ ಜಿಲ್ಲೆಯಲ್ಲಿ ಜ. 31ರವರೆಗೆ ಭೌತಿಕ ತರಗತಿಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಆದರೂ ಜ್ಞಾನಭಾರತಿ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಯ ಪರೀಕ್ಷೆಗಳನ್ನು ಸೋಮವಾರ ನಡೆಸಿದೆ.</p>.<p>50ಕ್ಕೂ ಹೆಚ್ಚು ವಿವಿಧ ಸ್ನಾತಕೋತ್ತರ ವಿಭಾಗಗಳ ಸುಮಾರು 700 ವಿದ್ಯಾರ್ಥಿಗಳು ಭೌತಿಕವಾಗಿ ನಡೆದ ಪರೀಕ್ಷೆಗೆ ಹಾಜರಾದರು.</p>.<p>ಎಸ್ಎಸ್ಎಲ್ಸಿ, ಪದವಿಪೂರ್ವ ತರಗತಿ, ಎಂಜಿನಿಯರಿಂಗ್, ವೈದ್ಯಕೀಯ, ಅರೆವೈದ್ಯಕೀಯ ಕೋರ್ಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕೋರ್ಸ್ಗಳ ಭೌತಿಕ ತರಗತಿಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.</p>.<p>ಸಾಮಾನ್ಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ವಿನಾಯಿತಿ ನೀಡದೇ ಇದ್ದರೂ, ವಿಶ್ವವಿದ್ಯಾಲಯದ ಅಧಿಕಾರಿಗಳು ಪರೀಕ್ಷೆ ನಡೆಸಿದ್ದಾರೆ. ಅಲ್ಲದೆ, ಕೆಲವು ಸೋಂಕಿತ ವಿದ್ಯಾರ್ಥಿಗಳು ಕೂಡಾ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಿದ್ದರೂ, ಅವರು ಇತರರ ಸಂಪರ್ಕಕ್ಕೆ ಬಂದಿರುವ ಸಾಧ್ಯತೆ ಇದೆ’ ಎಂದು ಪರೀಕ್ಷೆಗೆ ಹಾಜರಾದ ಕೆಲವು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು, ‘ಪರೀಕ್ಷೆಗಳನ್ನು ನಡೆಸದಂತೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಅಲ್ಲದೆ, ಅಂಥ ಯಾವುದೇ ಆದೇಶ ನಮಗೆ ಬಂದಿಲ್ಲ’ ಎಂದರು.</p>.<p>‘ವರ್ಷದ ಹಿಂದೆಯೇ ಈ ಪರೀಕ್ಷೆ ನಡೆಯಬೇಕಿತ್ತು. ನಾನಾ ಕಾರಣಗಳಿಂದ ವಿಳಂಬವಾಗಿದೆ. ಇನ್ನೂ ವಿಳಂಬವಾದರೆ, ಪಿಎಚ್.ಡಿ. ನೋಂದಣಿ ವಿಳಂಬ ಆಗಲಿದೆ. ಅಲ್ಲದೆ, ವಿದ್ಯಾರ್ಥಿಗಳು ಶಿಷ್ಯವೇತನದಿಂದಲೂ ವಂಚಿತರಾಗುವ ಸಾಧ್ಯತೆ ಇದೆ’ ಎಂದೂ ಅವರು ಹೇಳಿದರು.</p>.<p>ಪ್ರಥಮ ವರ್ಷದ ಪಿ.ಎಚ್ಡಿ ಕೋರ್ಸ್ಗೆ ಪರೀಕ್ಷೆ ಇನ್ನೂ ಮೂರು ದಿನ ನಡೆಯಲಿದೆ. ಪರೀಕ್ಷೆಯನ್ನು ರದ್ದುಪಡಿಸುವ ಅಥವಾ ಮುಂದೂಡುವ ಬಗ್ಗೆ ವಿಶ್ವವಿದ್ಯಾಲಯ ಯಾವುದೇ ಪ್ರಕಟಣೆ ಹೊರಡಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>