‘ಕೋವಿಡ್ ಬಗ್ಗೆ ಆತಂಕ ಪಡಬೇಕಾಗಿಲ್ಲ.ಕೊರೊನಾ ಸೋಂಕಿನ ತೀವ್ರತೆ ಕಡಿಮೆ ಇರುವುದರಿಂದ ಕೋವಿಡ್ ಪೀಡಿತರು ವಿಶೇಷ ಚಿಕಿತ್ಸೆ ಇಲ್ಲದೆಯೇ ಚೇತರಿಸಿಕೊಳ್ಳುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಐಎಲ್ಐ, ಸಾರಿ ಪ್ರಕರಣಗಳ ಮೇಲೆ ನಿಗಾ ಇರಿಸಿ, ತಪಾಸಣೆ ಮಾಡಲಾಗುತ್ತಿದೆ’ ಎಂದುರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ನಿರ್ದೇಶಕ ಡಾ.ಸಿ. ನಾಗರಾಜ್ ತಿಳಿಸಿದರು.